ಹರದನಹಳ್ಳಿ: ಸ್ಮಾಶನ ಇಲ್ಲದ ಕಾರಣ ಕೆಸರು ಗುಂಡಿಯಲ್ಲೇ ಮೃತರ ಅಂತ್ಯಕ್ರಿಯೆ
ಚಾಮರಾಜನಗರ, ಆಗಸ್ಟ್, 08: ಚಾಮರಾಜನಗರದ ಸಮೀಪವಿರುವ ಹರದನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದೇ ಕೆಸರು ಗುಂಡಿಯಲ್ಲೇ ಅಂತ್ಯಕ್ರಿಯೆ ನಡೆಸಿರುವ ಘಟನೆ ಇಂದು ನಡೆದಿದೆ.
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದರೂ ಅಧಿಕಾರಿಗಳು ಸ್ಮಶಾನದ ಸ್ಥಳ ಗುರುತು ಮಾಡದ ಹಿನ್ನೆಲೆಯಲ್ಲಿ ಸ್ವಂತ ಜಮೀನು ಇಲ್ಲದವರು ಯಾರಾದರೂ ಮೃತಪಟ್ಟರೇ ಪಡಿಪಾಡಲು ಪಡಬೇಕಾದ ದುಸ್ಥಿತಿ ಇದೆ. ಸೋಮವಾರ (ಆಗಸ್ಟ್ 07) ಗ್ರಾಮದಲ್ಲಿ ಸಿದ್ದಶೆಟ್ಟಿ (76) ಎಂಬವವರು ವಯೋಸಹಜವಾಗಿ ನಿಧನರಾಗಿದ್ದು, ಸ್ವಂತ ಜಮೀನು ಇಲ್ಲದ ಹಿನ್ನೆಲೆ ಮೃತರ ಅಂತಿಮ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರದಾಡಿದ್ದಾರೆ. ನಂತರ ಸರ್ಕಾರಿ ಭೂಮಿಯೊಂದರ ಕೆಸರು ತುಂಬಿದ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಸಂಸ್ಕಾರ ಮಾಡಲಾಗಿದೆ.

ಸಮಾಧಿ ಗುಂಡಿ ತೆಗೆಯುವಾಗ ಹೊರಬರುತ್ತಿದ್ದ ನೀರನ್ನು ಹೊರಹಾಕಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇನ್ನು ಗ್ರಾಮದ ಗಿರೀಶ್ ಎಂಬವವರು ಮಾತನಾಡಿ, ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದರೂ ಅಧಿಕಾರಿಗಳು ಸ್ಮಶಾನ ಗುರುತು ಮಾಡಿಲ್ಲ. ಇನ್ನಾದರೂ ಸರ್ಕಾರಿ ಜಾಗವನ್ನು ಸ್ಮಶಾನ ಮಾಡುವಂತೆ ಆಗ್ರಹಿಸಿದ್ದಾರೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications