Deepavali 2023: ಈ 6 ಊರುಗಳಲ್ಲಿ ಬೆಳಕಿನ ಹಬ್ಬವನ್ನು ಮಂಗಳವಾರ ಆಚರಿಸೋದಿಲ್ಲ, ಯಾಕೆ ಗೊತ್ತಾ?, ಇಲ್ಲಿದೆ ಮಾಹಿತಿ
ಚಾಮರಾಜನಗರ, ನವೆಂಬರ್, 11: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಹೌದು.. ಅಚ್ಚರಿಯಾದರೂ ಸತ್ಯ. ದೀಪಾವಳಿ ಬಂತೆಂದರೆ ಸಡಗರ-ಸಂಭ್ರಮ, ಚಿಣ್ಣರಿಗೆ ಪಟಾಕಿ ಹಚ್ಚುವ ಖುಷಿ, ಹಿರಿಯರಿಗೆ ದೀಪ ಬೆಳುಗುವ ಸಂತಸ. ಆದರೆ ಮಂಗಳವಾರ ದೇಶಾದ್ಯಂತ ಆಚರಿಸುವ ಸಂಭ್ರಮದ ಬೆಳಕಿನ ಹಬ್ಬವನ್ನು ಗುಂಡ್ಲುಪೇಟೆ ತಾಲೂಕಿನ 6 ಊರುಗಳು ಹಬ್ಬದ ನಂತರ ವಾರದಲ್ಲಿ ಬುಧವಾರ ಆಚರಿಸುತ್ತವೆ.

ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ಬುಧವಾರ ಬಂದರೆ ಮಾತ್ರ ಹಬ್ಬ ಆಚರಿಸಲಿದ್ದು, ಇಲ್ಲದಿದ್ದರೆ ಮುಂದಿನ ಬುಧವಾರವೇ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ.
ದೀಪಾವಳಿ ಹಬ್ಬದ ಸಂಭ್ರಮ, ಹೊಸ ಬಟ್ಟೆ ತೊಡುವುದು, ಪಟಾಕಿ ಸಿಡಿಸುವುದು, ಮನೆಯಲ್ಲಿ ಸಿಹಿ ಊಟ ಎಲ್ಲವೂ ಬುಧವಾರವೇ ನಡೆಯಲಿದ್ದು, ಕಳೆದ ಮೂರು ತಲೆಮಾರುಗಳಿಂದ ಈ ಆರು ಗ್ರಾಮದವರು ಬುಧವಾರವೇ ಹಬ್ಬ ಆಚರಿಸುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ.
ಬುಧವಾರವೇ ಹಬ್ಬ ಏಕೆ?
ಅಷ್ಟಕ್ಕೂ ಬುಧವಾರವೇ ಏಕೆ ಈ ಆರು ಗ್ರಾಮಗಳು ದೀಪಾವಳಿ ಮಾಡಲಿವೆ ಎಂಬ ಕುತೂಹಲಕ್ಕೆ ಉತ್ತರ ಗ್ರಾಮಸ್ಥರಲ್ಲಿ ಮನೆ ಮಾಡಿರುವ ಆತಂಕ. ಬುಧವಾರ ಹೊರತುಪಡಿಸಿ ಹಬ್ಬ ಆಚರಿಸಿದರೆ ಏನಾದರೂ ಕೆಡಕಾಗಬಹುದು, ದನಗಳಿಗೆ ಏನಾದರೂ ತೊಂದರೆ ಆಗಬಹುದು ಎಂಬ ಆತಂಕದಿಂದ ಈ ನಿರ್ಧಾರಕ್ಕೆ ಬಂದಿದ್ದಾರಂತೆ ಗ್ರಾಮಸ್ಥರು.
ಈ ಕುರಿತು ವೀರನಪುರ ಗ್ರಾಮದ ಹಿರಿಯರಾದ ಸೋಮಪ್ಪ ಎಂಬುವವರು ಮಾತನಾಡಿ, ತಲೆಮಾರುಗಳ ಹಿಂದೆ ಒಮ್ಮೆ ಬುಧವಾರ ಹೊರತುಪಡಿಸಿ ಹಬ್ಬ ಆಚರಿಸಿದಾಗ ಏರಿಗೆ ಕಟ್ಟಿದ ಎತ್ತುಗಳಿಗೆ ಅನಾರೋಗ್ಯ ಉಂಟಾದ ನಿದರ್ಶನವಿದೆ. ಆದ್ದರಿಂದ ಹಿಂದಿನವರು ಹಾಕಿಕೊಟ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬರುತ್ತಿದ್ದೇವೆ. ನಾವು ಆರು ಗ್ರಾಮದವರು ಒಂದೇ ದಿನ ಹಬ್ಬ ಆಚರಿಸಲಿದ್ದು, ಇದು ಮುಂದೆಯೂ ಕೂಡ ಪಾಲನೆಯಾಗಲಿದೆ. ಲೋಕವೆಲ್ಲಾ ಕ್ಯಾಲೆಂಡರ್ ಪ್ರಕಾರ ಹಬ್ಬದ ದಿನವೇ ಬೆಳಕಿನ ಹಬ್ಬ ಆಚರಿಸಿದರೆ ನಾವು ಬುಧವಾರ ಆಚರಿಸುತ್ತೇವೆ ಎಂದರು.
ವೀರನಪುರ ಗ್ರಾಮದ ಯುವಕರಾದ ರಮೇಶ್, ನಾಗಪ್ಪ ಎಂಬುವವರು ಮಾತನಾಡಿ, ತಾತ, ಮುತ್ತಾತನ ಕಾಲದಿಂದಲೂ ಬುಧವಾರದ ದಿನದಂದೇ ಬೆಳಕಿನ ಹಬ್ಬ ಆಚರಣೆ ಮಾಡುತ್ತೇವೆ. ಬಲಿಪಾಡ್ಯಮಿ ಬುಧವಾರ ಬಂದರೇ ಅಂದೇ ಆಚರಣೆ ಮಾಡುತ್ತೇವೆ. ಇಲ್ಲವೇ ಅದಾದ ನಂತರದ ಬುಧವಾರ ಹಬ್ಬ ಆಚರಣೆ ಮಾಡುತ್ತೇವೆ. ಹೀಗೆ ತಲೆಮಾರುಗಳ ಸಂಪ್ರದಾಯವನ್ನು ಪಾಲಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.
ತಲೆಮಾರುಗಳ ನಂಬಿಕೆಯಂತೆ ಮುಂದಿನ ಬುಧವಾರವೇ ಈ 6 ಗ್ರಾಮಗಳಲ್ಲಿ ಬೆಳಕಿನ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈಗ ಬರುವ ಬಲಿಪಾಡ್ಯಮಿ ದಿನ ಎಂದಿನಂತೆ ಸಾಮಾನ್ಯ ದಿನವನ್ನಾಗಿ ಇವರು ಕಳೆಯಲಿದ್ದು, ಯಾವುದೇ ಪಟಾಕಿ ಸಿಡಿಸುವುದು, ಹೊಸ ಬಟ್ಟೆ ತೊಡುವುದು ಮಾಡುವುದಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications