ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭ
ಚಾಮರಾಜನಗರ, ಅಕ್ಟೋಬರ್ 18:ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದಲ್ಲಿ ಅ. 18ರಿಂದ ಮೂರು ದಿನ ದೀಪಾವಳಿ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.
ಆದರೆ, ಸೋಮವಾರದಿಂದಲೇ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಆಗಮಿಸಿದ್ದು,ಬರಿಗಾಲಿನಲ್ಲಿ ಬೆಟ್ಟವನ್ನೇರುತ್ತಿರುವ ದೃಶ್ಯ ಕಂಡು ಬಂದಿದೆ.
ಅಕ್ಟೋಬರ್ 18ರಂದು ನರಕ ಚತುರ್ದಶಿ ಅಂಗವಾಗಿ ಮಹದೇಶ್ವರ ಸ್ವಾಮಿಗೆ ವಿಶೇಷ ಎಣ್ಣೆಮಜ್ಜನ, ಅಮಾವಾಸ್ಯೆ ಪೂಜೆ, ಹಾಲರವಿ ಉತ್ಸವಗಳು ನಡೆಯಲಿವೆ. ಶುಕ್ರವಾರ ರಥೋತ್ಸವ ಮತ್ತು ತೆಪ್ಪೋತ್ಸವ ಜರುಗಲಿದೆ.

ಮಲೈ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೆಗಳಾದ ಮಹಾಲಯ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರ ವಾರ್ಷಿಕ ಜಾತ್ರೆಗಳು ವಿಜೃಂಭಣೆಯಿಂದ ಜರುಗುವುದನ್ನು ಇಲ್ಲಿ ಸ್ಮರಿಸಬಹುದು.
ಅಕ್ಟೋಬರ್ 22 ರಿಂದ 23 ರವರೆಗೆ 1ನೇ ಕಾರ್ತಿಕ ಸೋಮವಾರ, ಅಕ್ಟೋಬರ್ 29 ರಿಂದ 30 ರವರೆಗೆ 2ನೇ ಕಾರ್ತಿಕ ಸೋಮವಾರ, ನವೆಂಬರ್ 5 ರಿಂದ 6 ರವರೆಗೆ 3ನೇ ಕಾರ್ತಿಕ ಸೋಮವಾರ, ನವೆಂಬರ್ 12 ರಿಂದ 13 ರವರೆಗೆ 4ನೇ ಕಾರ್ತಿಕ ಸೋಮವಾರ ಹಾಗೂ ನವೆಂಬರ್ 16 ರಿಂದ 18 ರವರೆಗೆ ಎಣ್ಣೆ ಮಜ್ಜನ ಮತ್ತು ಅಮಾವಾಸ್ಯೆ ಜಾತ್ರೆಗಳು ನಡೆಯಲಿದೆ ಎಂದು ಶ್ರೀ ಮಲೈ ಮಹೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications