ಬಂಡೀಪುರ ಅರಣ್ಯದಲ್ಲಿ ಜಿಂಕೆಗಳ ಬೇಟೆ: ಆರು ಜನರ ಬಂಧನ
ಮೈಸೂರು, ಜನವರಿ 8: ಕಾಡು ಪ್ರಾಣಿಗಳ ಬೇಟೆಯಾಡುವುದನ್ನು ಸರ್ಕಾರವು ನಿಷೇಧಿಸಿ ಹಲವು ದಶಕಗಳೇ ಆಗಿವೆ. ಅಕ್ರಮ ಬೇಟೆಗಾರರನ್ನು ನಿರ್ಬಂಧಿಸಲು ಸರ್ಕಾರ ವನ್ಯಜೀವಿ ಕಾಯ್ದೆಯನ್ವಯ ಕಠಿಣ, ಜಾಮೀನು ರಹಿತ ಕಾಯ್ದೆಯನ್ನೂ ಜಾರಿಗೆ ತಂದಿದೆ.
ಜತೆಗೆ ಅಪರೂಪದ ವನ್ಯ ಜೀವಿಗಳ ಸಂರಕ್ಷಣೆಗೆಂದೇ ಅಭಯಾರಣ್ಯಗಳನ್ನೂ ರಚಿಸಿದೆ. ಆದರೆ ಸ್ವಾರ್ಥಿ ಮಾನವ ತನ್ನ ನಾಲಿಗೆ ಚಪಲಕ್ಕಾಗಿ ಬೇಟೆ ಆಡುವುದನ್ನು ಮಾತ್ರ ನಿಲ್ಲಿಸಿಲ್ಲ.
ಮೊದಲೆಲ್ಲ ಒಂದು ಪ್ರಾಣಿಯನ್ನು ಬೇಟೆಯಾಡಿ ಸಿಕ್ಕಿ ಬೀಳುತ್ತಿದ್ದ ಖದೀಮರು, ಇದೀಗ ಬೇಟೆಗಾರರ ತಂಡವನ್ನೇ ಕಟ್ಟಿಕೊಂಡು ಅದೂ ಬಂಡೀಪುರ ಅಭಯಾರಣ್ಯದಲ್ಲಿ ಬೇಟೆಯಾಡಿ ಅರಣ್ಯ ಇಲಾಖೆಗೆ ಸಿಕ್ಕಿ ಬಿದ್ದಿದ್ದಾರೆ.

ಬಂಡಿಪುರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮೂರು ಜಿಂಕೆ ಹಾಗೂ ಮೊಲವೊಂದನ್ನು ಹತ್ಯೆಗೈದ ಪ್ರಕರಣವನ್ನು ಅರಣ್ಯ ಇಲಾಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಬಂಡಿಪುರದ ಓಂಕಾರ ವನ್ಯಜೀವಿ ವಲಯದ ನಾಗಣಾಪುರ ಬ್ಲಾಕ್-2ರ ಕಲ್ಲರಕಿಂಡಿ ಎಂಬಲ್ಲಿ ಈ ದುಷಕೃತ್ಯ ನಡೆಸಲಾಗಿದೆ.
ಈ ಬೇಟೆಗಾರರು ಕೊಡಗಿನ ಸೋಮವಾರಪೇಟೆಯಿಂದ ವಾಹನ ಮತ್ತು ಕೋವಿಗಳೊಂದಿಗೆ ತೆರಳಿ ಮಾಲು ಸಹಿತ ಸಿಕ್ಕು ಬಿದ್ದಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲೂಕಿನ ವಿವಿಧ ಗ್ರಾಮಕ್ಕೆ ಸೇರಿದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ ಮಾಂಸ ಸಹಿತವಾಗಿ ಎರಡು ಒಂಟಿ ನಳಿಗೆಯ ಬಂದೂಕು, ಒಂದು ಮಾರುತಿ ಸುಜುಕಿ ಓಮ್ನಿ ವಾಹನವನ್ನು ಅರಣ್ಯಾಧಿ ಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಸೋಮವಾರಪೇಟೆಯ ಚೌಡ್ಲು ಗ್ರಾಮದ ವಿದ್ಯಾಸಾಗರ್(29), ಗೌಡಳ್ಳಿಯ ರವೀಂದ್ರ ಅಲಿಯಾಸ್ ಪೂವಯ್ಯ (41) ಬೆಟ್ಟದಳ್ಳಿಯ ಯಶೋಧರ (34) ತಲ್ತರೆಶೆಟ್ಟಳ್ಳಿಯ ವರಾದ ಪ್ರಸನ್ನ ಜಾನ್ (38) ಸುಜಿತ್ ಅಲಿಯಾಸ್ ತಿಮ್ಮಯ್ಯ (28) ಹಾಗೂ ಶಾಂತಳ್ಳಿಯ ಕುಶಾಲಪ್ಪ (47) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ನಂಜನಗೂಡಿನ ಮಹೇಶ್ (35 ಎಂಬಾತ ತಲೆಮರೆಸಿಕೊಂಡಿದ್ದಾನೆ.

ಆರೋಪಿಗಳು ಅಲ್ಲಿಯೇ ಮನೆಯೊಂದರಲ್ಲಿ ಉಳಿದುಕೊಂಡು ಮೂರು ಜಿಂಕೆಗಳನ್ನು ಗುಂಡಿಕ್ಕಿ ಹತ್ಯೆಗೈದಿದ್ದರು, ಅಲ್ಲದೆ ಉರುಳು ಹಾಕಿ ಮೊಲವೊಂದನ್ನು ಕೂಡ ಹತ್ಯೆಗೈದಿದ್ದಾರೆ. ಒಂದು ಜಿಂಕೆಯ ಚರ್ಮವನ್ನು ಸುಲಿದು ಮಾಂಸವಾಗಿ ಬೇರ್ಪಡಿಸಿ ಅಡುಗೆಗೂ ಈ ತಂಡ ಸಿದ್ಧತೆ ನಡೆಸಿದ್ದು, ಈ ಸಂದರ್ಭ ಹಠಾತ್ ಅರಣ್ಯ ಇಲಾಖಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಇವರುಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಎರಡು ಬಂದೂಕು ಹಾಗೂ ಓಮಿನಿ ಕಾರು (ಕೆ.ಎ 02 ಎಂ.ಎ. 0555) ಅನ್ನು ಮುಟ್ಟಗೋಲು ಹಾಕಿಕೊಳ್ಳ ಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬೇಟೆಗಾರರನ್ನು ಬಂಧಿಸಿರುವುದು ಇತ್ತೀಚಿನ ವರ್ಷಗಳಲ್ಲಿ ಬಂಡೀಪುರ ಅರಣ್ಯದಲ್ಲಿ ಇದೇ ಮೊದಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕರಾದ ಎಸ್.ಎಸ್ ನಟೇಶ್ ಅವರ ನೇತೃತ್ವದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕೆ.ಪರಮೇಶ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications