ಪಂಚಾಯತಿ ಚುನಾವಣೆ; ಬಹಿರಂಗ ಪ್ರಚಾರ ಶುಕ್ರವಾರ ಅಂತ್ಯ
ಚಾಮರಾಜನಗರ, ಡಿಸೆಂಬರ್ 25: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ ಅಂತ್ಯವಾಗಲಿದೆ. ಡಿಸೆಂಬರ್ 27ರ ಭಾನುವಾರ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಯಳಂದೂರು, ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದರು.
ಪಂಚಾಯಿತಿ ಚುನಾವಣೆ; ಅಭ್ಯರ್ಥಿ ಚಿನ್ಹೆ ಬದಲು, ಮತದಾನ ಸ್ಥಗಿತ
ಯಳಂದೂರು, ಕೊಳ್ಳೇಗಾಲ ಹಾಗೂ ಹನೂರು ತಾಲೂಕುಗಳಲ್ಲಿ ನಿಗದಿಯಾಗಿರುವ ಮಾಸ್ಟರಿಂಗ್, ಡಿ ಮಾಸ್ಟರಿಂಗ್ ಹಾಗೂ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಸಿದ್ದತೆಗಳನ್ನು ವೀಕ್ಷಣೆ ಮಾಡಿದರು, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗ್ರಾ. ಪಂ ಚುನಾವಣೆ; ವೈರಲ್ ಆದ ಗಂಗಮ್ಮ ನೀಡಿದ ಭರವಸೆಗಳು!
ಮತಪೆಟ್ಟಿಗೆ ಸುರಕ್ಷತೆಗಾಗಿ ನಿರ್ಮಾಣ ಮಾಡಲಾಗಿರುವ ಭದ್ರತಾ ಕೊಠಡಿ, ಮತ ಎಣಿಕೆ ಸ್ಥಳದಲ್ಲಿ ಕೈಗೊಳ್ಳಬೇಕಿರುವ ಭದ್ರತೆ ಸಂಬಂಧ ಪರಿಶೀಲನೆ ನಡೆಸಿದರು. ಮಾಸ್ಟರಿಂಗ್, ಡಿಮಾಸ್ಟರಿಂಗ್ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲವಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಂಚಾಯಿತಿ ಚುನಾವಣೆ; ಕೋವಿಡ್ ಸೋಂಕಿತರು ಮತ ಚಲಾಯಿಸಬಹುದು
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಎಲ್ಲಿಯೂ ಕೋವಿಡ್ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು. ಚುನಾವಣಾ ಸಿಬ್ಬಂದಿಗೆ ಉಪಹಾರ, ಊಟ ಪೂರೈಕೆ ಬಗ್ಗೆಯೂ ಗಮನಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಸಾರಾ ಥಾಮಸ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ. ಎಲ್. ಆನಂದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಮುಂತಾದವರು ಜಿಲ್ಲಾಧಿಕಾರಿಗಳ ಜೊತೆಗಿದ್ದರು.
Recommended Video