ಗುಂಡ್ಲುಪೇಟೆ: ಮುಂಗಾರು ಮಳೆ ಆರ್ಭಟದಿಂದ ಈ ಗ್ರಾಮಸ್ಥರಿಗೆ ದೇವರಕೆರೆ ಒಡೆಯುವ ಭೀತಿ
ಚಾಮರಾಜನಗರ, ಜೂನ್, 06: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಹಾಗೆಯೇ ಗುಂಡ್ಲುಪೇಟೆ ತಾಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಮುಂಗಾರು ಮಳೆ ಆರ್ಭಟಕ್ಕೆ ದೇವರಕೆರೆ ಹಾಗೂ ಅಗಸನ ಕಟ್ಟೆ ತುಂಬಿ ಏರಿ ಮೇಲೆ ನೀರು ಹರಿಯುತ್ತಿದೆ.
ಇಂದು (ಜೂನ್ 06) ಸುರಿದ ಅಬ್ಬರದ ಮಳೆಗೆ ಕೆರೆ ನೀರಿನ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಕೋಡಿ ಸರಿಯಿಲ್ಲದ ಕಾರಣ ಏರಿ ಮೇಲೆ ನೀರು ಹರಿಯುತ್ತಿದ್ದು, ಕೆರೆಗಳು ಒಡೆಯುವ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ.

ಒಂದು ವೇಳೆ ಕೆರೆಗಳು ಒಡೆದರೇ ರೈತರು ಬೆಳೆದ ನೂರಾರು ಹೆಕ್ಟೇರ್ ಫಸಲು ನಾಶವಾಗುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ಸೂಕ್ತ ಪರಿಹಾರ ಮಾರ್ಗವನ್ನು ಕಂಡುಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹನೂರಲ್ಲಿ ಮನೆ ಕುಸಿತ: ಗುರುವಾರ (ಜೂನ್ 06) ಸಂಜೆ ಸುರಿದ ಭಾರೀ ಮಳೆಗೆ ಹನೂರು ಪಟ್ಟಣದಲ್ಲಿ ಕುಮಾರ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದು, 50,000ಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿಗಳು ನಾಶವಾಗಿರುವ ಘಟನೆ ನಡೆದಿದೆ.
ಹನೂರು ಪಟ್ಟಣದ ನಿವಾಸಿ ಕುಮಾರ್ ಎಂಬುವವರ ಮನೆಯ ಗೋಡೆ ಕುಸಿದು 10ಕ್ಕೂ ಹೆಚ್ಚು ಶೀಟ್ಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೊಸದಾಗಿ ಮಳಿಗೆ ಮಾಡಲು ಸಿದ್ಧತೆ ಕೈಗೊಳ್ಳಲಾಗಿತ್ತು. ಏಕಾಏಕಿ ಗೋಡೆ ಕುಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಶೀಟ್ಗಳು, ಪೈಪ್ಗಳು ಜಖಂಗೊಂಡಿದೆ. ಇದರಿಂದ ಸುಮಾರು 50,000 ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.
ರಸ್ತೆಗಳು, ಜಮೀನು ಜಲಾವೃತ: ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ಮುಂಗಾರು ಆರ್ಭಟಕ್ಕೆ ಇಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ನೀರು ಹರಿದ ಪರಿಣಾಮ ವಾಹನ ಸಂಚಾರವೇ ಅಸ್ತವ್ಯಸ್ತವಾಗಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ಗಡಿಯಾದ ಪುಣಜನೂರು ಗೇಟ್ನಲ್ಲೂ ವರುಣ ಆರ್ಭಟಕ್ಕೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್ದಾಗಿದ್ದು ನೀರಿನ ಹರಿವು ಕಡಿಮೆ ಆಗುವುದನ್ನೇ ಜನರು ಕಾಯುತ್ತಿದ್ದಾರೆ.
ಅಣ್ಣೂರುಕೇರಿ ಗ್ರಾಮದ ಉಪ್ಪಾರ ಸಮುದಾಯ ಭವನಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದ್ದು, ಅಣ್ಣೂರುಕೇರಿ ಗ್ರಾಮದ ಹಲವು ಬೀದಿಗಳು ಜಲಾವೃತವಾಗಿದೆ.
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಹಾಗೂ ತೊಂಡವಾಡಿ ಸಂಪರ್ಕ ರಸ್ತೆಯೇ ಮುಳುಗಡೆಯಾಗಿದ್ದು ವಾಹನ ಸಂಚಾರ ಬಂದ್ದಾಗಿದೆ. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಹಿರಿಕಾಟಿ ಗೇಟ್ ನಲ್ಲಿ ನೀರು ಹರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯವಾಗಿತ್ತು
ಗುಂಡ್ಲುಪೇಟೆ ತಾಲೂನಿನ ಬೊಮ್ಮಲಾಪುರ, ಶಿವಪುರ, ನೇನೆಕಟ್ಟೆ, ಮಂಚಹಳ್ಳಿ ಭಾಗಗಳಲ್ಲಿ ಜೋರು ಮಳೆಗೆ ಜಮೀನುಗಳು ಜಲಾವೃತವಾಗಿದ್ದು ಹಲವು ಕಟ್ಟೆಗಳು ತುಂಬಿ ಹರಿಯುತ್ತಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications