ಮಲೆಮಹದೇಶ್ವರದಲ್ಲಿ ಶಿವನ ದರ್ಶನ ಪಡೆಯಲು ನೂಕುನುಗ್ಗಲು
ಚಾಮರಾಜನಗರ, ಮಾರ್ಚ್ 4:ಮಹಾಶಿವರಾತ್ರಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ದೇವಾಲಯಕ್ಕೆ ಲಕ್ಷಾಂತರ ಭಕ್ತರು ತೆರಳಿ ಹರಕೆ ಕಾಣಿಕೆ ಸೇವೆ ಸಲ್ಲಿಸಿ ಸಂಭ್ರಮಿಸಿದರು. ಆದರೆ, ನೂಕುನುಗ್ಗಲು ಹೆಚ್ಚಿದ್ದರಿಂದ ದೇವಾಲಯದ ಒಂದು ಬಾಗಿಲಿನ ಬೀಗ ಮುರಿದ ಭಕ್ತರು ಒಳ ಪ್ರವೇಶಿಸಿದರು.
ಸುಮಾರು 200ರಿಂದ 300 ಕಿಲೋ ಮೀಟರ್ ದೂರದಿಂದ ಕಾಲ್ನಡಿಗೆಯಲ್ಲಿ ದೇವಾಲಯ ತಲುಪಿದ ಭಕ್ತರಿಗೆ ಎಲ್ಲಾ ದ್ವಾರಗಳಿಂದ ಪ್ರವೇಶ ಮುಕ್ತಗೊಳಿಸಲಾಗಿತ್ತು. ಆದರೆ, ಭಕ್ತರ ಸಂಖ್ಯೆ ಹೆಚ್ಚಾಗಿದ್ದ ಕಾರಣ ನೂಕುನುಗ್ಗಲು ಏರ್ಪಟ್ಟಿತು.
ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಇಲ್ಲದ ಕಾರಣ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಗೆ ಭಕ್ತರು ಧಿಕ್ಕಾರವನ್ನು ಕೂಗಿದರು. ಹಾರೋಹಳ್ಳಿಯಿಂದ ದೇವಾಲಯಕ್ಕೆ ಬಂದಿದ್ದ ಭಕ್ತರ ಸಮೂಹ ಎಲ್ಲಾ ಭಕ್ತರಿಗೆ ಮಜ್ಜಿಗೆ ಹಾಗೂ ಕಲ್ಲಂಗಡಿ ಜ್ಯೂಸ್ ವಿತರಿಸುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು.

ಅನೇಕ ಭಕ್ತರು ಮಾದೇಶ್ವರ ಸ್ವಾಮಿಯ ಚರಿತ್ರೆಯನ್ನು ಸಾರುವ ಮುಖಾಂತರ ಹರಕೆ ತೀರಿಸಿದರು. ಜೊತೆಗೆ ಮುಡಿಸೇವೆ, ಉರುಳುಸೇವೆ, ಪಂಜಿನ ಸೇವೆ, ರುದ್ರಾಕ್ಷಿ ಮಂಟಪ ವಿವಿಧ ಸೇವೆಗಳನ್ನು ಸಲ್ಲಿಸುವುದರ ಮೂಲಕ ಹರಕೆ ಸಲ್ಲಿಸಲಾಯಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications