ಶಿವರಾತ್ರಿಯ ಜಾತ್ರೆ, ಬರಿಗಾಲಲ್ಲಿ ಮಹದೇಶ್ವರ ಬೆಟ್ಟ ಏರುವ ಭಕ್ತರು
ಶಿವರಾತ್ರಿ ಎಲ್ಲಿ ವಿಶೇಷವಿಲ್ಲ ಹೇಳಿ! ಎಲ್ಲೆಡೆ ಶಿವನ ಸ್ತೋತ್ರ, ಆರಾಧನೆ. ಅದೇ ರೀತಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದಲ್ಲೂ ಜಾತ್ರೆ ವಿಶೇಷ. ಕರ್ನಾಟಕದ ನಾನಾ ಜಿಲ್ಲೆ ಭಕ್ತರು ಬರಿಗಾಲಲ್ಲಿ ಬೆಟ್ಟವೇರುತ್ತಿದ್ದಾರೆ
ಚಾಮರಾಜನಗರ, ಫೆಬ್ರವರಿ 24: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕೊಳ್ಳೇಗಾಲದ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಜಾತ್ರೆ ಅದ್ಧೂರಿಯಾಗಿ ಜರುಗುತ್ತದೆ. ಆದ್ದರಿಂದ ಭಕ್ತರು ಹರಕೆ ಹೊತ್ತು ಕಾಲ್ನಡಿಗೆಯಲ್ಲೇ ಸಾಗಿ ಬರುವುದು ವಿಶೇಷವಾಗಿದೆ.
ಶಿವರಾತ್ರಿ ಹಬ್ಬದ ಅಂಗವಾಗಿ ಶುಕ್ರವಾರ ಅಮಾವಾಸ್ಯೆ ಪೂಜೆ, ವಿಶೇಷ ಸೇವಾ ಕೈಂಕರ್ಯ ಮತ್ತು ಜಾತ್ರೆ ನಡೆಯಲಿದ್ದು, ಭಕ್ತರು ಗುರುವಾರದಿಂದಲೇ ಬರುತ್ತಿದ್ದಾರೆ. ಎಲ್ಲಿ ನೋಡಿದರಲ್ಲಿ ಜನಸಾಗರ ಸೃಷ್ಟಿಯಾಗಿದೆ. ಗ್ರಾಮೀಣ ಭಾಗದಿಂದ ಭಕ್ತರು ಬರಿಗಾಲಲ್ಲಿ ನಡೆದು ಬೆಟ್ಟವೇರಿ ಸನ್ನಿಧಿಯನ್ನು ತಲುಪುತ್ತಿದ್ದಾರೆ.[ಅಭಿಷೇಕ ಪ್ರಿಯನಾದ ಶಿವನನ್ನು ಹೇಗೆ ಪೂಜಿಸಿದರೆ ಶ್ರೇಷ್ಠ?]

ಕನಕಪುರ, ಚನ್ನಪಟ್ಟಣ, ತುಮಕೂರು, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲೇ ಬೆಟ್ಟ ಹತ್ತಿ ಹರಕೆ ತೀರಿಸುತ್ತಾರೆ. ಕಾಲ್ನಡಿಗೆಯಲ್ಲಿ ಬರುವ ಭಕ್ತರ ದಣಿವಾರಿಸಲು ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ನೀರಿನ ಸರಬರಾಜು, ಹಸಿದವರಿಗೆ ಉಪಹಾರ ಹೀಗೆ ಹಲವಾರು ಬಗೆಯ ಸೇವೆಯನ್ನು ಮಾಡಲಾಗಿದೆ.

ಶಿವರಾತ್ರಿ ಪ್ರಯುಕ್ತ ಮಹದೇಶ್ವರನ ಸನ್ನಿಧಿಯಲ್ಲಿ ಐದು ದಿನಗಳ ವಿಶೇಷ ಜಾತ್ರೆ ನಡೆಯಲಿದ್ದು, ಇದರಲ್ಲಿ ಪಾಲ್ಗೊಂಡು ಪುನೀತರಾಗುವ ತವಕ ಭಕ್ತರದ್ದಾಗಿದೆ. ಕಾಲ್ನಡಿಗೆಯಲ್ಲಿ ಬರುವ ಭಕ್ತರು ಹರ ಹರ ಮಹದೇವ ಎಂದು ಜಯ ಘೋಷ ಹಾಕುತ್ತಾ ಬೆಟ್ಟ ಹತ್ತುತ್ತಾರೆ. ಹನೂರು ಸಮೀಪದ ಕೌದಳ್ಳಿ ಬಳಿಯ ಕೆಂಚಯ್ಯನದೊಡ್ಡಿಯಿಂದ ಕಾಲ್ನಡಿಗೆ ಆರಂಭವಾಗುತ್ತಿದೆ.[ಶಿವರಾತ್ರಿ ವಿಶೇಷ: ಕರಾವಳಿ ಎಲ್ಲಡೆ ಶಿವನ ಆರಾಧನೆ]
ಸುಮಾರು 30 ಕಿಲೋ ಮೀಟರ್ ನಷ್ಟು ದೂರದವರೆಗೂ ಭಕ್ತರು ಕಾಣಿಸುತ್ತಿದ್ದಾರೆ. ಎಳೆಮಕ್ಕಳನ್ನು ಕಂಕುಳಲ್ಲಿ ಕೂರಿಸಿಕೊಂಡು, ತಲೆಯ ಮೇಲೆ ಬ್ಯಾಗ್ ಹೊತ್ತು, ಕೈಯಲ್ಲಿ ಕೋಲು ಹಿಡಿದು ನಡೆಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications