ಕಿಚ್ಚುಗುತ್ತಿ ಮಾರಮ್ಮ ದೇಗುಲದ ಎದುರು ತಮಿಳುನಾಡಿನ ಭಕ್ತೆ ಕಣ್ಣೀರಿಟ್ಟಿದ್ದೇಕೆ?
ಚಾಮರಾಜನಗರ, ಜನವರಿ 06: ಪ್ರತಿ ಮಂಗಳವಾರ, ಶುಕ್ರವಾರ ಅಮಾವಾಸ್ಯೆಯಂದು ಭಕ್ತರು ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಆಗಮಿಸಿ ತಮ್ಮ ನೋವನ್ನು ದೇವಿಯ ಮುಂದೆ ತೋಡಿಕೊಳ್ಳುತ್ತಿದ್ದರು. ಹರಕೆ ಮಾಡಿಕೊಂಡು ಅದು ನೆರವೇರಿದ ಬಳಿಕ ತೀರಿಸಿ ಹೋಗುತ್ತಿದ್ದರು.
ಆದರೆ ಪ್ರಸಾದಕ್ಕೆ ವಿಷ ಹಾಕಿ ಹಂತಕರು 17 ಮಂದಿಯ ಜೀವವನ್ನು ಬಲಿ ಪಡೆದು ನೂರಾರು ಮಂದಿಯನ್ನು ಆಸ್ಪತ್ರೆಗೆ ಸೇರುವಂತೆ ಮಾಡಿದ್ದರು. ಈ ಘಟನೆ ಇಡೀ ರಾಜ್ಯ ಮಾತ್ರವಲ್ಲದೆ, ದೇಶದ ಗಮನಸೆಳೆದಿತ್ತು. ಇದಾದ ನಡೆದ ಬಳಿಕ ಭಕ್ತರ ಸಂಖ್ಯೆಯೂ ಕಡಿಮೆಯಾಗಿತ್ತು.
ಈ ನಡುವೆ ಶನಿವಾರ(ಜ.5) ಎಳ್ಳಮವಾಸ್ಯೆಯಿದ್ದ ಕಾರಣ ಭಕ್ತರು ಎಂದಿನಂತೆ ದೇವಾಲಯಕ್ಕೆ ಆಗಮಿಸಿ ದೇವಿಗೆ ಪೂಜೆ ಸಲ್ಲಿಸಿದ್ದು, ಇಂತಹ ಭಕ್ತರ ಪೈಕಿ ತಮಿಳುನಾಡಿನಿಂದ ಆಗಮಿಸಿದ ಭಕ್ತೆಯೊಬ್ಬರು ದೇವಿಯ ದೇಗುಲದ ದೇವಿಯ ಮುಂದೆ ನಿಂತು ಕಣ್ಣೀರಿಡುತ್ತಾ ಸಾವಿರಾರು ಭಕ್ತರಿಗೆ ಆಶ್ರಯ ನೀಡುತ್ತಿದ್ದ ನಿನ್ನ ದೇವಾಲಯದ ಪ್ರಸಾದಲ್ಲಿ ವಿಷ ಬೆರಸಿದ ಆರೋಪಿಗಳಿಗೆ ಸುಮ್ಮನೆ ಬಿಡಬೇಡ ಅವರಿಗೆ ತಕ್ಕ ಶಾಸ್ತಿ ಮಾಡು ಎಂದು ಕಣ್ಣೀರಿಡುತ್ತಾ ಹಿಡಿ ಶಾಪ ಹಾಕಿದ್ದು ಕಂಡು ಬಂತು. ಅಲ್ಲದೆ ನೆರೆದವರ ಕಣ್ಣಲ್ಲಿ ನೀರು ಬರುವಂತೆ ಮಾಡಿತು.

ಮತ್ತೊಮ್ಮೆ ನೆನಪಿಸಿತು
ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಹೀಗಾಗಿ ವಿಶೇಷ ಪೂಜೆಯನ್ನು ಮಾಡಲಾಗುತ್ತಿತ್ತು, ಆದ್ರೆ ಕಳೆದ ತಿಂಗಳು ನಡೆದ ದುರಂತದ ಬಳಿಕ ದೇವಾಲಯದ ಬಳಿ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿತ್ತಾದರೂ ಕಳೆದ ಅಮಾವಾಸ್ಯೆಯಂದು ನಡೆದ ದುರ್ಘಟನೆ ಈ ಬಾರಿಯ ಅಮಾವಾಸ್ಯೆಯಂದು ದೇವಾಲಯಕ್ಕೆ ತೆರಳಿದ ಭಕ್ತರನ್ನು ಮತ್ತೊಮ್ಮೆ ನೆನಪಿಸುವಂತೆ ಮಾಡಿತ್ತು.

ನಿಜಕ್ಕೂ ಮನಮಿಡಿಯುವಂತಿತ್ತು
ಕಳೆದೊಂದು ತಿಂಗಳಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಎಲ್ಲದಕ್ಕೂ ಕಿಚ್ಚುಗುತ್ತಿ ಮಾರಮ್ಮ ದೇವಿ ಮೂಕ ಸಾಕ್ಷಿಯಾಗಿ ನಿಂತಿದ್ದು, ಬರುವ ಭಕ್ತರೆಲ್ಲರೂ ಹಳೆಯ ಘಟನೆಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭ ದೂರದ ತಮಿಳುನಾಡಿನಿಂದ ಆಗಮಿಸಿದ ಭಕ್ತೆಯೊಬ್ಬರು ಗರ್ಭಗುಡಿಯ ಹಾಕಿದ ಬಾಗಿಲ ಸಂದಿಯಿಂದಲೇ ದೇವರನ್ನು ಕಂಡು ನೊಂದು ದೇವರ ಮುಂದೆ ಕಣ್ಣೀರಿಟ್ಟಿದ್ದು ನಿಜಕ್ಕೂ ಮನಮಿಡಿಯುವಂತಿತ್ತು.

ಕಠಿಣ ಶಿಕ್ಷೆ ಆಗಬೇಕು
ಇನ್ನು ಕೆಲವು ಭಕ್ತರು ಅಮಾಯಕರ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು, ಮರಣದಂಡನೆಯಾಗಬೇಕು ಎಂದು ಮಾತನಾಡಿಕೊಳ್ಳುತ್ತಿದ್ದದ್ದು ಕಂಡು ಬಂತು. ಈ ನಡುವೆ ಮುಜರಾಯಿ ಸಚಿವ ಪರಮೇಶ್ವರ ನಾಯಕ್ ಅವರು ಸ್ಥಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ್ದಾರೆ.

ಸರ್ಕಾರಿ ಆದೇಶ
ಈ ಸಂದರ್ಭ ಮಾತನಾಡಿದ ಪರಮೇಶ್ವರ ನಾಯಕ್ ಅವರು ಕಿಚ್ಚುಗುತ್ತಿ ಮಾರಮ್ಮ ದೇವಾಲಯ ಮುಜರಾಯಿ ವ್ಯಾಪ್ತಿಗೆ ತರಲು ಸದ್ಯದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications