'ಮಾಡಬಾರದ ತಪ್ಪು ಮಾಡಿದ್ದೇನೆ' 'ಹೆಣ್ಣು ಮಕ್ಕಳಿಗೆ ಆಸ್ತಿ ಸಿಗಬಾರದು': ಬಿಳಿಗಿರಿ ರಂಗನಿಗೆ ಬಗೆಬಗೆಯ ಪತ್ರ
ಚಾಮರಾಜನಗರ, ಜುಲೈ 13: ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಹಾಗೂ ಚಿಕ್ಕ ತಿರುಪತಿ ಎಂದೇ ಹೆಸರಾದ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಯದ ಹುಂಡಿ ಎಣಿಕೆ ಬುಧವಾರ ನಡೆದಿದ್ದು ಭಕ್ತರು ಪತ್ರಗಳ ಮೂಲಕ ಭಗವಂತನಿಗೆ ಮೊರೆ ಇಟ್ಟಿದ್ದಾರೆ.
ಬುಧವಾರ ನಡೆದ ಹುಂಡಿ ಎಣಿಕೆ ವೇಳೆ 4-5 ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗಿರಿರಂಗನಾಥ ಸ್ವಾಮಿಗೆ ಅರ್ಪಣೆ ಮಾಡಿದ್ದಾರೆ. ಆಸ್ತಿ, ಧೈರ್ಯ, ಆರೋಗ್ಯ ಭಾಗ್ಯ, ಮಗನಿಗೆ ಒಳ್ಳೆಯ ಬುದ್ಧಿ ಕೊಡುವಂತೆ ತರಹೇವಾರಿ ಬೇಡಿಕೆಗಳನ್ನು ಭಕ್ತರು ಭಗವಂತನ ಮುಂದೆ ಇಟ್ಟಿದ್ದಾರೆ.

ಭಗವಂತನಿಗೆ ಅರ್ಪಿಸಿದ ಭಕ್ತರ ಪತ್ರಗಳಲ್ಲಿ ಏನಿದೆ..?
ಭಕ್ತರೊಬ್ಬರು ಚೀಟಿಯೊಂದನ್ನು ಹುಂಡಿಗೆ ಹಾಕಿದ್ದು ಆಸ್ತಿ ವ್ಯಾಜ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಕ್ಕ-ತಂಗಿಯರಿಗೆ ಆಸ್ತಿ ಸಿಗದಿರಲಿ- ಗಂಡು ಮಕ್ಕಳ ಪರವಾಗಿ ಕೋರ್ಟ್ ತೀರ್ಪು ಬರಲಿ, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳಿಗೆ ಆಸ್ತಿ ಆಗಬಾರದು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು, ಮತ್ತೊಂದು ಪತ್ರದಲ್ಲಿ ಯುವಕನೋರ್ವ ಸಮಾಜದಲ್ಲಿ ಮುಖಂಡನಾಗಿ ಗುರುತಿಸಿಕೊಳ್ಳುವ ಆಸೆಯನ್ನು ಹೊರಹಾಕಿ ಗಮನ ಸೆಳೆದಿದ್ದಾನೆ.
ತನಗೆ ಮಾತನಾಡುವ ಧೈರ್ಯ ಕೊಡು, ನಮ್ಮ ಏರಿಯಾದಲ್ಲಿ ಗುರುತಿಸಿಕೊಳ್ಳುತ್ತೇನೆ. ಹಣ ಸಂಪಾದನೆ ಮಾಡುತ್ತೇನೆ. ಇಡೀ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಲಿದ್ದು, ಏರಿಯಾದಲ್ಲಿ ಎಲ್ಲರ ಮುಂದೆ ಮಾತನಾಡಲು ಧೈರ್ಯ ಕೊಡು ಎಂದು ದೇವರ ಬಳಿ ತನ್ನ ಆಸೆ ಹೊರಹಾಕಿದ್ದಾನೆ.
ಮತ್ತೊಂದು ಪತ್ರದಲ್ಲಿ ತಾಯಿಯೊಬ್ಬರು ಬರೆದಿದ್ದು ಮಗನಿಗೆ ಒಳ್ಳೆಯ ಬುದ್ಧಿ ಕೊಡಲಿ, ತನ್ನನ್ನು ಬೈಯ್ಯದಿರಲಿ, ಹಿಂದೆ ಮಾಡಿದ್ದ ತಪ್ಪನ್ನು ತಾನು ಮಾಡುವುದಿಲ್ಲ. ಆರೋಗ್ಯ ಭಾಗ್ಯ ಕೊಡಲಿ ಎಂದು ಎರಡು ಪುಟಗಳ ದೀರ್ಘ ಪತ್ರ ಬರೆದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

ಫಾರಿನ್ ಭಕ್ತರಿಂದ ಬಿಳಿಗಿರಿರಂಗನಿಗೆ ಕಾಣಿಕೆ
ಇನ್ನು ಬಿಳಿಗಿರಿರಂಗನಾಥನ ಹುಂಡಿ ಎಣಿಕೆಯಲ್ಲಿ 42,11,305 ಹಣ ಸಂಗ್ರಹವಾಗಿದ್ದು ವಿದೇಶಿ ಭಕ್ತರು ಕೂಡ ದೇವರಿಗೆ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿಯಲ್ಲಿ 132 ಅಮೇರಿಕನ್ ಡಾಲರ್, ನೇಪಾಳದ ಎರಡು ನೋಟುಗಳು, ಅರಬ್ ಎಮಿರೇಟ್ಸ್ ನ 10 ಧೀರಂ, ಆಫ್ರಿಕನ್ ಗಾಂಬಿಯಾದ 50 ರೂ. ನ ಒಂದು ನೋಟನ್ನು ಭಕ್ತರು ರಂಗನಾಥನಿಗೆ ಅರ್ಪಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications