ಆಪರೇಷನ್ ಕಮಲಕ್ಕೆ ಒಳಗಾದರೇ ಕೊಳ್ಳೇಗಾಲ ಶಾಸಕ ಎನ್ ಮಹೇಶ್?
ಚಾಮರಾಜನಗರ, ಜುಲೈ 24: ಚಾಮರಾಜನಗರದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಮಹೇಶ್ ಅವರು ವಿಶ್ವಾಸಮತ ಯಾಚನೆ ವೇಳೆ ಗೈರು ಹಾಜರಾಗಿ ಮೈತ್ರಿ ಸರ್ಕಾರಕ್ಕೆ ಕೈಕೊಟ್ಟಿದ್ದು ಈಗ ಸದ್ಯ ಚರ್ಚೆಗೆ ಗ್ರಾಸವಾದ ವಿಷಯವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಬಿಎಸ್ಪಿ ಅಧಿನಾಯಕಿ ಮಾಯಾವತಿ ನಿರ್ದೇಶಿಸಿದ್ದರೂ ಎನ್ ಮಹೇಶ್ ಅವರು ಗೈರು ಹಾಜರಾಗಿದ್ದು ಅಚ್ಚರಿ ಮೂಡಿಸಿದೆ.
ಪಕ್ಷದ ವರಿಷ್ಠರ ನಿರ್ದೇಶನಕ್ಕೆ ತಾವೆಂದಿಗೂ ಬದ್ಧರಾಗಿದ್ದೇವೆ ಎಂದಿದ್ದ ಮಹೇಶ್ ಈಗ ದಿಢೀರ್ ಬದಲಾದರೇ? ಇದು ಏಕೆ ಎಂಬ ಪ್ರಶ್ನೆ ಕಾಡುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ ಮಹೇಶ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದೆಯೇ ಎಂಬ ಅನುಮಾನಗಳು ಹರಿದಾಡುತ್ತಿವೆ. ಮಹೇಶ್ ಅವರು ವಿಶ್ವಾಸಮತ ಯಾಚನೆ ಸಂದರ್ಭ ಗೈರು ಹಾಜರಾಗಿರುವುದು ಈ ಎಲ್ಲ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿವೆ.
ಈ ಹಿಂದೆ ಚುನಾವಣೆಗೂ ಮುನ್ನ ಜಾ.ದಳದೊಂದಿಗೆ ಮಹೇಶ್ ಅವರು ಕೊಳ್ಳೇಗಾಲ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅಲ್ಲದೆ ಸಮ್ಮಿಶ್ರ ಸರ್ಕಾರದ ರಚನೆ ವೇಳೆಯೂ ಕುಮಾರಸ್ವಾಮಿ ಅವರಿಗೆ ತಾವು ಬೆಂಬಲ ನೀಡಿದ್ದೇವೆ ಎಂದು ಹೇಳುವ ಮೂಲಕ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇದಾದ ಬಳಿಕ ಏಕಾಏಕಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದರು. ತಮ್ಮ ಕ್ಷೇತ್ರದ ಜನತೆಯೊಂದಿಗೆ ಹೆಚ್ಚು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿಕೆ ನೀಡಿದ್ದರು.

ಇದರೊಟ್ಟಿಗೆ ಅವರೇ ತಮ್ಮ ಆಪ್ತವಲಯದಲ್ಲಿ ಮೈತ್ರಿ ಸರ್ಕಾರದಲ್ಲಿ ತಮಗೆ ನೀಡಿದ್ದ ಖಾತೆಯಲ್ಲಿ ರೇವಣ್ಣ ಅವರು ಹಸ್ತಕ್ಷೇಪ ಮಾಡುತ್ತಿದ್ದರು ಎಂಬುದನ್ನು ತಿಳಿಸಿದ್ದರು.
ಮೈತ್ರಿ ಸರ್ಕಾರದ ವಿಶ್ವಾಸಮತಕ್ಕೆ ಬೆಂಬಲ ನೀಡದಿದ್ದಕ್ಕಾಗಿ ಎನ್ ಮಹೇಶ್ ಅವರನ್ನು ಮಾಯಾವತಿಯವರು ಉಚ್ಚಾಟಿಸಿದ್ದಾರೆ. ಇದರಿಂದ ಅವರ ಶಾಸಕ ಸ್ಥಾನಕ್ಕೇನೂ ಗಂಡಾಂತರವಿಲ್ಲ. ಆದರೆ ಒಂದು ವೇಳೆ ಅವರ ಗೈರು ಹಾಜರಿಯಲ್ಲಿ ಬಿಜೆಪಿ ಕೈವಾಡವಿದ್ದುದೇ ಆದರೆ, ಅವರ ಮುಂದಿನ ನಡೆ ಏನು ಎಂಬುದನ್ನು ಊಹಿಸಲಾಗುತ್ತಿಲ್ಲ.
ರಾಜ್ಯದಲ್ಲಿ ಪಕ್ಷದ ಬಲವರ್ಧನೆಗಾಗಿ ದುಡಿದಿದ್ದ ಶಾಸಕ ಮಹೇಶ್ ಅವರು ಇತ್ತೀಚೆಗೆ ಪಕ್ಷದಲ್ಲಿ ಮೂಲೆಗುಂಪಾಗಿದ್ದರು ಎಂದು ಹೇಳುತ್ತಾರೆ ಕೆಲವು ಮುಖಂಡರು ಹಾಗೂ ಕಾರ್ಯಕರ್ತರು. ರಾಜೀನಾಮೆ ವಿಚಾರವಾಗಿ ಮಾಯಾವತಿ ಹಾಗೂ ಮಹೇಶ್ ಅವರ ಸಂಬಂಧ ಹಳಸಿತ್ತು ಎಂದು ಹೇಳಲಾಗುತ್ತಿದೆ. ಪಕ್ಷದ ಚಟುವಟಿಕೆಗಳಲ್ಲಿ ಇವರನ್ನು ಕಡೆಗಣಿಸಲಾಗುತ್ತಿತ್ತು. ಇದರಿಂದಲೂ ಅವರು ವಿಶ್ವಾಸಮತದಿಂದ ಹಿಂದುಳಿದಿರಬಹುದು ಎನ್ನುತ್ತಿದೆ ಅವರ ಆಪ್ತ ವಲಯ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications