ಅವನು ಮುಸ್ಲಿಂ, ನಾನು ತಪ್ಪು ಮಾಡುತ್ತಿಲ್ಲ- ದೇವರಿಗೆ ಹಿಂದೂ ಯುವತಿಯ ಪತ್ರ
ಚಾಮರಾಜನಗರ, ಜನವರಿ 17: ದೇವರಿಗೆ ನಾನಾ ಬಗೆಯ ಕೋರಿಕೆಗಳು, ಪ್ರಾರ್ಥನೆಗಳು ಸಲ್ಲಿಸಿರುವುದು, ಬೇಡಿಕೆ ಪತ್ರಗಳನ್ನು ನೀಡುವುದು ಇತ್ತೀಚಿಗೆ ಸಾಮಾನ್ಯವಾಗಿದೆ. ಆದರೆ ಚಾಮರಾಜನಗರ ಭಕ್ತನೊಬ್ಬ ಒಂದು ಕುಟುಂಬ ಸರ್ವನಾಶ ಆಗಲೇ ಬೇಕು ಎನ್ನುವ ವಿಚಿತ್ರ ಹಾಗೂ ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀನಾರಾಯಣ ದೇವಾಲಯದ ಹುಂಡಿ ಎಣಿಕೆಯು ಮಂಗಳವಾರ ನಡೆದಿದ್ದು, ಈ ವೇಳೆ ಭಕ್ತರ ಕೋರಿಕೆ ಪತ್ರಗಳು ಸಿಕ್ಕಿದೆ. ಅದರಲ್ಲಿ, ಬಳ್ಳಾರಿ ಜಿಲ್ಲೆ ನಮೂದಿಸಿರುವ ಭಕ್ತನೋರ್ವ "ಹನುಮಾರ್ ರಾಮ ನಾಯಕ ಎಂಬಾತ ಬಾಯಲ್ಲಿ ರಕ್ತ ಕಾರಿ ಬಿದ್ದು ಸಾಯಬೇಕು. ಇದನ್ನು ನೋಡಿ ನೀಲಾಬಾಯಿ ಕೊರಗಿ ಕೊರಗಿ ಸಾಯಬೇಕು, ನೀಲಗಿರಿ ನಾಯಕ, ಲೋಕೇಶಿ ನಾಯಕ, ಮುಕ್ಕಿಬಾಯಿ, ಇವರೆಲ್ಲರೂ ಕೂಡಾ ಅವರನ್ನು ನೋಡಿ ನರಳಿ ಸಾಯಬೇಕು, ಅವರುಗಳು ನಮ್ಮ ಮನೆಯ ಹತ್ತಿರವೇ ಬಾರದ ಹಾಗೆ ಮಾಡಬೇಕು, ಇವರೆಲ್ಲರೂ ಒಂದು ವರ್ಷದ ಒಳಗೆ ಸಾಯಬೇಕು ಎಂದು ಕಾಗದದಲ್ಲಿ ಬರೆದು ಹುಂಡಿಯಲ್ಲಿ ಹಾಕಿರುವುದು ಬೆಳಕಿಗೆ ಬಂದಿದೆ.
ಬಳ್ಳಾರಿ ಭಕ್ತನ ಕಾಗದ ಓದಿದ ಹುಂಡಿ ಎಣಿಕೆ ಸಿಬ್ಬಂದಿ ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಈ ರೀತಿ ದೇವರಿಗೆ ಸಲ್ಲಿಸುವ ಬೇಡಿಕೆ ಇರುತ್ತವೆಯೇ..? ಸಾವನ್ನು ಬಯಸುವ ಮಟ್ಟಿಗೆ ಆತ ನೊಂದಿರುವವನೇ..? ಎಂದು ಹೌಹಾರಿದ್ದಾರೆ.

ಇನ್ನು ಲಕ್ಷ್ಮೀನಾರಾಯಣ ದೇವಾಲಯದ ಹುಂಡಿಯಲ್ಲಿ ಮತ್ತೊಂದು ಪತ್ರ ಸಿಕ್ಕಿದೆ. ಹುಂಡಿಯಲ್ಲಿ ಒಂದು ಅಂತರ ಧರ್ಮೀಯ ಪ್ರೀತಿ ಪತ್ರವೂ ಸಿಕ್ಕಿದೆ. ಅದರಲ್ಲಿ, ಯುವತಿಯೊಬ್ಬಳು ಶಾಹಿದ್ ಖಾನ್ ವರ್ಷಕ್ಕೆ ಒಂದು ಬಾರಿಯಾದರೂ ದಿಲ್ಲಿಯಿಂದ ಬರಬೇಕು, ನಾನು ಹಿಂದೂ ಅವನು ಮುಸ್ಲಿಂ ಆದರೆ ನಾನು ತಪ್ಪು ಮಾಡುತ್ತಿಲ್ಲ. ನನಗೆ ಅವನಿಷ್ಟ ಅವನಿಗೆ ನಾನು ಇಷ್ಟ. ನನ್ನ ಜೀವನವೇ ಅವನು, ಈ ಬೇಡಿಕೆ ಈಡೇರಿದರೆ ಪ್ರತಿ ತಿಂಗಳೊಮ್ಮೆ ನಿನ್ನ ಸನ್ನಿಧಿಗೆ ಬರುವೆ ಎಂದು ಯುವತಿ ಕಾಗದದಲ್ಲಿ ಬರೆದು ಹರಕೆ ಕಟ್ಟಿಕೊಂಡಿದ್ದಾರೆ.
ಮತ್ತೊಂದು ಕಾಗದದಲ್ಲಿ ನರಸಿಂಹ ಸ್ವಾಮಿ ಈ ನಂಬರ್ಗಳಿಗೆ ಮೊದಲನೇ ಬಹುಮಾನ ಬರುವಂತೆ ಮಾಡು ನಿನ್ನ ಹುಂಡಿಗೆ 101 ರೂಪಾಯಿ ಕಾಣಿಕೆ ಹಾಕುವುದಾಗಿ ಲಾಟರಿ ಟಿಕೆಟ್ ನಂಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾರೆ.
ಇನ್ನು ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀನಾರಾಯಣ ದೇವಾಲಯದ ಹುಂಡಿಯಲ್ಲಿ 1,87,565 ರೂಪಾಯಿ ಹಣ ಸಂಗ್ರಹವಾಗಿದೆ ಎಂದು ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications