ಚಾಮರಾಜನಗರದ ಗ್ರಾಮ ಸ್ಮಾರ್ಟ್, ಡಿಜಿಟಲ್ ಗ್ರಂಥಾಲಯ ಸ್ಥಾಪನೆ
ಚಾಮರಾಜನಗರ, ಜೂ 24: ಚಾಮರಾಜನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದಲ್ಲಿ ಡಿಜಿಟಲ್ ಗ್ರಂಥಾಲಯವೊಂದು ನಿರ್ಮಾಣವಾಗಿದ್ದು ಕೆಲವೇ ದಿನಗಳಲ್ಲಿ ಹಳ್ಳಿಯ ಜನರ ಬಳಕೆಗೆ ಮುಕ್ತವಾಗಲಿದೆ. ಗುಂಡ್ಲುಪೇಟೆ ತಾಲೂಕಿನ ಹುಂಡಿಪುರ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವ ರೂಪುಗೊಂಡಿದೆ.
15ನೇ ಹಣಕಾಸಿನಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಹಳೇ ಕಟ್ಟಡವನ್ನು ದುರಸ್ಥಿ ಪಡಿಸಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ನಿರ್ಮಿಸಿದ್ದು ನೂತನ ಗ್ರಂಥಾಲಯದಲ್ಲಿ 12 ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕ ಅಳವಡಿಸಿದ್ದು 6600 ಪುಸ್ತಕವನ್ನು ಖರೀದಿಸಿ ತರಲಾಗಿದೆ.
ಗ್ರಾಮೀಣ ಮಟ್ಟದಲ್ಲಿ ಸುಸಜ್ಜಿತವಾದ ಡಿಜಿಟಿಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಜಿಲ್ಲೆಯಲ್ಲಿ ಇದೇ ಮೊದಲಾಗಿದ್ದು ಇಲ್ಲಿ ರೈತರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ದತ್ತಾಂಶ, ಯೋಜನೆ, ನೌಕರಿ ಸಂಬಂಧ, ಶಿಕ್ಷಣಕ್ಕೆ ಸಂಬಂಧಿಸಿದ ಹಲವು ಮಾಹಿತಿಯನ್ನು ಆನ್ಲೈನ್ ಮೂಲಕ ದೊರೆಯಲಿದೆ.

ವೈಫೈ ಸೇವೆ; ಗ್ರಂಥಾಲಯದಲ್ಲಿ ವೈಫೈ ಇರುವ ಕಾರಣ ಸಾರ್ವಜನಿಕರು ಉಚಿತವಾಗಿ ಇಂಟರ್ನೆಟ್ ಬಳಸಬಹುದಾಗಿದೆ. ಈ ಸಂಬಂಧ ಹುಂಡೀಪುರ ಗ್ರಾಮ ಪಂಚಾಯಿತಿ ಪಿಡಿಒ ಕುಮಾರಸ್ವಾಮಿ ಮಾತನಾಡಿ, "ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷ ಹಾಗೂ ಸದಸ್ಯರ ಆಸಕ್ತಿಯ ಫಲವಾಗಿ ತುರ್ತಾಗಿ ಕೆಲಸ ಮುಗಿಸಲಾಗಿದೆ. ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಬೇಕಾದ ಕಂಪ್ಯೂಟರ್,ಪುಸ್ತಕ ಖರೀದಿಸಲಾಗಿದೆ ಹಾಗೂ ಟಿವಿಯನ್ನು ಅಳವಡಿಸುವ ಕೆಲಸ ಮಾತ್ರ ಬಾಕಿಯಿದೆ" ಎಂದರು.
75ನೇ ಸ್ವಾತಂತ್ರೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದ ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಹುಂಡೀಪುರ ಸೇರಿರುವುದು ವಿಶೇಷ.

ಡಿಜಿಟಲ್ ಗ್ರಂಥಾಲಯ; ಗ್ರಾಮೀಣ ಭಾಗದ ಗ್ರಂಥಾಲಯ ಎಂದರೆ ಹಳೇ ಕಟ್ಟಡ, ಧೂಳು ತಿಂದ ಪುಸ್ತಕಗಳು ಇರುತ್ತವೆ ಎನ್ನೋ ಭಾವನೆ ಎಲ್ಲರಲ್ಲೂ ಇರುತ್ತೆ. ಆದರೆ, ಅಧಿಕಾರಿಗಳ ಆಸಕ್ತಿಯಿಂದ ಅಂತಹ ಭಾವನೆ ದೂರವಾಗಿದೆ. ಹುಂಡಿಪುರ ಗ್ರಾಮದ ಡಿಜಿಟಲ್ ಗ್ರಂಥಾಲಯದಲ್ಲಿ ಏಕಕಾಲದಲ್ಲಿ ಆನ್ಲೈನಲ್ಲೇ 40 ಜನ ಕುಳಿತುಕೊಂಡು ಪ್ರಪಂಚದಲ್ಲಿರುವ ಎಲ್ಲಾ ಪುಸ್ತಕದ ಮಾಹಿತಿಯನ್ನು ಇಲ್ಲಿ ಪಡೆದುಕೊಳ್ಳಬಹುದಾಗಿದೆ.

ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ, ಜನರಿಗೆ, ಬೇರೆ ಬೇರೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಚಿಕ್ಕ -ಮಕ್ಕಳಿಗೆ ಬೇರೆ ಆಸನದ ವ್ಯವಸ್ಥೆ ಮಾಡಿರುವುದು ಇಲ್ಲಿನ ವಿಶೇಷತೆ. ಇನ್ನೂ ಗಾಳಿ ಬೆಳಕು, ನೀರಿನ ವ್ಯವಸ್ಥೆ ಸೇರಿದಂತೆ ಸೌಲಭ್ಯ ನೋಡಬಹುದು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications