ಚಾಮರಾಜನಗರದಲ್ಲಿ ನಿರ್ಮಾಣವಾಗುತ್ತಾ ಜಿಯಲಾಜಿಕಲ್ ಮ್ಯೂಸಿಯಂ?
ಚಾಮರಾಜನಗರ, ಆಗಸ್ಟ್ 26: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಯಲಾಜಿಕಲ್ ಮ್ಯೂಸಿಯಂ ನಿರ್ಮಾಣವಾಗುವ ಸಾಧ್ಯತೆಯಿದ್ದು, ಇದು ಜಿಲ್ಲೆಗೊಂದು ಹಿರಿಮೆಯಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶ್ರಮಿಸುತ್ತಿದ್ದಾರೆ.
Recommended Video
ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಆದರ್ಶ ಶಾಲಾ ಆವರಣದ ಪಕ್ಕದ ಸರ್ಕಾರಿ ಜಮೀನಿನಲ್ಲಿ ವಿವಿಧ ಮಾದರಿಯ ಖನಿಜ, ಉಪ ಖನಿಜಗಳಿರುವುದರಿಂದ ಶಾಲಾ ಆವರಣದಲ್ಲಿಯೇ ಪ್ರಾಕೃತಿಕ ಭೂಗರ್ಭ ಸಂಗ್ರಹಾಲಯ (ಜಿಯಲಾಜಿಕಲ್ ಮ್ಯೂಸಿಯಂ) ಸ್ಥಾಪನೆ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಇಷ್ಟಕ್ಕೂ ಇಲ್ಲಿಯೇ ಏಕೆ ಮ್ಯೂಸಿಯಂ ಸ್ಥಾಪನೆ ಮಾಡಬೇಕು ಎಂಬುದನ್ನು ನೋಡುವುದಾದರೆ, ಇದಕ್ಕೆ ಹಲವು ಕಾರಣಗಳಿವೆ.

ಭೂಗರ್ಭಶಾಸ್ತ್ರದ ಅಧ್ಯಯನಕ್ಕೆ ಅನುಕೂಲ
ಒಂದೇ ಪ್ರದೇಶದಲ್ಲಿ ಎಲ್ಲ ರೀತಿಯ ಉಪಖನಿಜಗಳು ಇದ್ದು, ಈ ಪ್ರದೇಶವನ್ನು ಸಂರಕ್ಷಿಸಿ ಭೂಗರ್ಭ ಸಂಗ್ರಹಾಲಯ ಪ್ರದೇಶವಾಗಿ ಅಭಿವೃದ್ಧಿಪಡಿಸಿದ್ದೇ ಆದರೆ ಭೂಗರ್ಭಶಾಸ್ತ್ರದ ಬಗ್ಗೆ ಹಾಗೂ ಖನಿಜ, ಉಪ ಖನಿಜಗಳ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳ ಹೆಚ್ಚಿನ ಕ್ಷೇತ್ರ ಅಧ್ಯಯನಕ್ಕೆ ಅನುಕೂಲವಾಗಲಿದೆ. ಈ ಕುರಿತಂತೆ ಈಗಾಗಲೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡ ಈ ಪ್ರದೇಶದಲ್ಲಿ ಪ್ರಾಕೃತಿಕ ಭೂಗರ್ಭ ಸಂಗ್ರಹಾಲಯ ನಿರ್ಮಾಣ ಮಾಡಲು ಅನುಕೂಲವಾಗಿದೆ ಎಂದಿದ್ದಾರೆ.

ಸಂಗ್ರಹಾಲಯ ನಿರ್ಮಾಣಕ್ಕೆ ಜಿಲ್ಲಾಡಳಿತ ಸಜ್ಜು
ಈಗಾಗಲೇ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಲಕ್ಷ್ಮಮ್ಮ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹೊನ್ನೇಗೌಡ, ಭೂ ವಿಜ್ಞಾನಿಗಳಾದ ಸುಬ್ರಮಣ್ಯ, ನಾಗರಾಜು, ಇಂಜಿನಿಯರ್ ರಾಘವ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಮಲ್ಲಯ್ಯನಪುರ ಗ್ರಾಮಕ್ಕೆ ತೆರಳಿ ಪರಿಶೀಲಿಸಿದ್ದು, ಜಿಯಲಾಜಿಕಲ್ ಮ್ಯೂಸಿಯಂ ನಿರ್ಮಾಣ ಮಾಡಲು ಈ ಪ್ರದೇಶ ಯೋಗ್ಯವಾಗಿರುವುದನ್ನು ಮನಗಂಡಿದ್ದಾರೆ.

ಕಾರ್ಯಯೋಜನೆ ತಯಾರಿಸಲು ಸೂಚನೆ
ಇನ್ನು ಈ ಕುರಿತಂತೆ ಮಾತನಾಡಿರುವ ಅವರು, ಪ್ರಕೃತಿದತ್ತವಾದ ಭೂ ಭೌಗೋಳಿಕ (ಜಿಯಲಾಜಿಕಲ್ ಮ್ಯೂಸಿಯಂ) ಪ್ರದೇಶಗಳನ್ನು ಗುರುತಿಸಿ ಈ ಪ್ರದೇಶದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಲಾಸ್ಥಾವರಗಳ ಉಗಮದ ಬಗ್ಗೆ ಹಾಗೂ ಖನಿಜ, ಉಪಖನಿಜಗಳ ಬಳಕೆಯ ಬಗ್ಗೆ ಕ್ಷೇತ್ರ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ನೀಡಬಹುದಾಗಿದೆ ಎಂದಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ಸೂಚನೆ
ಸ್ವಾಭಾವಿಕ ಭೂಗರ್ಭ ಸಂಗ್ರಹಾಲಯ ಆಗಿ ಸಂರಕ್ಷಿಸಲು ಹಾಗೂ ಜಿಲ್ಲೆಯಲ್ಲಿ ದೊರಕುವ ಶಿಲಾ ಮಾದರಿಗಳನ್ನು ಮತ್ತು ಖನಿಜಗಳನ್ನು ಸಂಗ್ರಹಿಸಿ ಭೂಗರ್ಭ ಸಂಗ್ರಹಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ತಯಾರಿಸಿ ಸಲ್ಲಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications