ಮತ ಎಣಿಕೆಗೆ ಕೌಂಟ್ಡೌನ್: ಚಾಮರಾಜನಗರ ಜಿಲ್ಲೆಯಲ್ಲಿ ಸಿದ್ಧತೆ ಹೇಗಿದೆ ಗೊತ್ತಾ?
ಚಾಮರಾಜನಗರ, ಜೂನ್, 02: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4ರಂದು ನಡೆಯಲಿದ್ದು, ಎಣಿಕೆ ಕಾರ್ಯಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಂಡಿದೆ.
ಚಾಮರಾಜನಗರದ ತಾಲೂಕಿನ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ಬೆಳಗ್ಗೆ (ಜೂನ್ 04) 8 ಗಂಟೆಗೆ ಆರಂಭ ಆಗಲಿದೆ.

ಎಣಿಕೆ ಕಾರ್ಯವನ್ನು ಸುಲಲಿತವಾಗಿ ನಡೆಸುವ ಸಲುವಾಗಿ ಕಂಪ್ಯೂಟರ್, ಸ್ಕ್ಯಾನರ್, ಪ್ರಿಂಟರ್ಸ್, ಯುಪಿಎಸ್, ಟೆಲಿಫೋನ್, ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಎಣಿಕೆ ಕಾರ್ಯವನ್ನು ಶಾಂತಿ ಮತ್ತು ಸುವ್ಯವಸ್ಥೆ ಮತ್ತು ಸುರಕ್ಷಿತವಾಗಿ ನಡೆಸಲು ಅಗತ್ಯ ಬ್ಯಾರಿಕೇಡಿಂಗ್, ಸಿಗ್ನಲ್ಸ್ ಮತ್ತು ವಾಹನ ನಿಲುಗಡೆಯನ್ನು ಕಲ್ಪಿಸಲಾಗಿದೆ.
ಅಂಚೆ ಮತಪತ್ರಗಳ ಮೂಲಕ ಒಟ್ಟು 4,405 ಮತ ಚಲಾವಣೆಯಾಗಿವೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತಲಾ 14 ಟೇಬಲ್(ಮೇಜು)ಗಳಲ್ಲಿ ನಡೆಯಲಿದೆ. ಪ್ರತಿ ಟೇಬಲ್ಗೆ ತಲಾ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಮಂದಿ ಎಣಿಕೆ ಸಹಾಯಕರು, 14 ಮಂದಿ ಮೈಕ್ರೋ ಅಬ್ಸರ್ವರ್ ಹಾಗೂ ಅಂಚೆ ಮತ ಪತ್ರ ಎಣಿಕೆಗೆ 5 ಮಂದಿ ಸೇರಿ ಒಟ್ಟು 45 ಸಿಬ್ಬಂದಿ ಇರಲಿದ್ದಾರೆ.
ಅಂಚೆ ಮತ ಪತ್ರ ಎಣಿಕೆಗೆ 8 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದ್ದು, 8 ಮಂದಿ ಏಜೆಂಟರ್ಗಳನ್ನು ನೇಮಕ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆಯು ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅವರ ಸಮ್ಮುಖದಲ್ಲಿ ನಡೆಯಲಿದೆ.
ಇವಿಎಂ ಮತ ಯಂತ್ರಗಳ ಮೂಲಕ ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಏಜೆಂಟರ್ನಂತೆ ಒಟ್ಟು 120 ಮಂದಿ ಎಣಿಕೆ ಏಜೆಂಟರ್ ಅನ್ನು ನೇಮಕಾತಿ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ಗಳಂತೆ ಒಟ್ಟು 112 ಮತ ಎಣಿಕೆ ಟೇಬಲ್ಗಳನ್ನು ಸ್ಥಾಪಿಸಲಾಗಿರುತ್ತದೆ.
ಸದರಿ ಮತ ಎಣಿಕೆ ಟೇಬಲ್ಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಎಣಿಕೆ ಕಾರ್ಯವನ್ನು ಸಂಬಂಧಿಸಿದ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಗುತ್ತದೆ.
ಸೇವಾ ಮತದಾರರು ಮತದಾನ ಮಾಡಿ ಕಳುಹಿಸಿರುವ ಮತಪತ್ರಗಳ ಎಣಿಕೆಯನ್ನು ಇಟಿಪಿಬಿಎಸ್ ತಂತ್ರಾಂಶದಲ್ಲಿ ನಡೆಸಲು 2 ಮತ ಎಣಿಕೆ ಟೇಬಲ್ಗಳನ್ನು ಸ್ಥಾಪಿಸಲಾಗಿದೆ. ನಮೂನೆ-18ರಲ್ಲಿ ಮತ ಎಣಿಕೆ ಏಜೆಂಟರ್ ಅನ್ನು ನೇಮಕ ಮಾಡಲು ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳಿಗೆ ಎಣಿಕೆ ನಡೆಯುವ ಸ್ಥಳ, ಎಣಿಕೆ ಕಾರ್ಯದ ಸಮಯ ಮತ್ತು ಎಣಿಕೆ ಕಾರ್ಯ ನಡೆಸುತ್ತಿರುವ ಟೇಬಲ್ಗಳ ವಿವರವನ್ನು ನೀಡಲಾಗಿದೆ.
ಅಂಚೆ ಮತಪತ್ರಗಳ ಎಣಿಕೆಯು ಪ್ರಾರಂಭವಾದ 30 ನಿಮಿಷಗಳ ನಂತರ, ಇವಿಎಂ ಮತ ಎಣಿಕೆಯನ್ನು ಪ್ರಾರಂಭ ಮಾಡಲಾಗುತ್ತದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications