ಡೋಲಿ ಮೂಲಕ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ ಜನ: ಇದು ಸರ್ಕಾರ ತಲೆತಗ್ಗಿಸುವ ಘಟನೆ
ಚಾಮರಾಜನಗರ, ಜು. 1: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಡಿನೊಳಗೆ ಇರುವ ಗ್ರಾಮಗಳ ಸಂಪರ್ಕಕ್ಕಾಗಿ ಜನವನ ಸಾರಿಗೆ ಎಂದು ಜೀಪ್ ಗಳನ್ನು ಒದಗಿಸಲಾಗಿದೆ. ಆದರೆ, ಜೀಪ್ ಚಾಲಕ, ಆಂಬುಲೆನ್ಸ್ ಚಾಲಕನಿಗೆ ಮತ್ತು ಅಧಿಕಾರಿಗಳಿಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಬಂದಿದ್ದರಿಂದ ಡೋಲಿ ಮೂಲಕ ಹೊತ್ತು ಸಾಗಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ
ಮಲೆ ಮಹದೇಶ್ವರಬೆಟ್ಟ ತಪ್ಪಲಿನ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿರುವ ಅರಣ್ಯ ಇಲಾಖೆ ಗರ್ಭಿರ್ಣಿಯರು, ಅನಾರೋಗ್ಯ ಪೀಡಿತರು, ಶಾಲಾ ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರ ತುರ್ತು ಬಳಕೆಗೆ ಜಾರಿಗೆ ತಂದಿರುವ ಜನವನ ಸಾರಿಗೆ ಸೌಲಭ್ಯ ಇದ್ದೂ ಇಲ್ಲದಂತಾಗಿದೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶ- ರಾಜ್ಯ ಪ್ರತಿದಿನವೂ ಹೊಸಹೊಸ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದ್ದರೇ ಈ ಗ್ರಾಮಗಳು ಸರಿಯಾದ ರಸ್ತೆ ಸಂಪರ್ಕವೇ ಇಲ್ಲದೇ ಅನಾರೋಗ್ಯಕ್ಕೆ ತುತ್ತಾದರೆ ಡೋಲಿ ಹೊತ್ತು ಸಾಗಿಸಬೇಕಾದ ದುಸ್ಥಿತಿಯಲ್ಲೇ ಇದ್ದಾರೆ.
ರೋಗಿಗಳನ್ನು ಡೋಲಿಯಲ್ಲಿ ಹೊತ್ತು ಸಾಗಬೇಕಿದೆ
ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಪಡಿಸಲನತ್ತ , ದೊಡ್ಡಾಣೆ ಗ್ರಾಮಕ್ಕೆ ಕಚ್ಚಾ ರಸ್ತೆಯೂ ಇಲ್ಲದಿರುವುದರಿಂದ ಅನಾರೋಗ್ಯಕ್ಕೀಡಾದರೇ ರೋಗಿಗಳನ್ನು ಡೋಲಿಯಲ್ಲಿ ಹೊತ್ತು ಸಾಗಬೇಕಿದೆ.
ಆಸ್ಪತ್ರೆಗೆ ಹೋಗಬೇಕಾದರೆ ಡೋಲಿ- ಪಡಿತರ ತರಬೇಕಾದರೇ ಹೆಗಲೇ ಗತಿ ಎಂಬ ಪರಿಸ್ಥಿತಿ ಇರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಜನರಿಗೆ 24×7 ವಾಹನ ವ್ಯವಸ್ಥೆ ಎಂದು ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆ ವಾಹನಗಳನ್ನು ನಿಯೋಜಿಸಿತ್ತು. ಆದರೆ, ಚಾಲಕರು, ಅಧಿಕಾರಿಗಳು ಫೋನ್ ಸ್ವಿಚ್ ಆಪ್ಡ್ ಆಗಿದ್ದರಿಂದ ಜನವನ ಸಾರಿಗೆಯಿಂದ ಶಾಂತಲಾ ಕುಟುಂಬಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಕಡಿದಾದ ರಸ್ತೆಗಳಲ್ಲೂ ಸಂಚರಿಸುವ ಸಾಮರ್ಥ್ಯವಿರುವ 4x4x4 ವೀಲ್ ಡ್ರೈವ್ನ ಫೋರ್ಸ್ ಕಂಪನಿಯ ಗೂರ್ಖಾ ವಾಹನಗಳಿದ್ದರೂ ಡೋಲಿಯೇ ಗಟ್ಟಿಯಾಗಿದ್ದು ವ್ಯವಸ್ಥೆಯ ಮತ್ತೊಂದು ಮುಖಕ್ಕೆ ನಿದರ್ಶನವಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications