ಬಂಡೀಪುರದ ನಿರ್ಬಂಧಿತ ಪ್ರದೇಶದಲ್ಲಿ ಕುಡಿದು ಮೋಜು ಮಸ್ತಿ; ಫೋಟೋ ವೈರಲ್
ಚಾಮರಾಜನಗರ, ಅಕ್ಟೋಬರ್, 07: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಯಲ್ಲಿರುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ಬಳಿ ಯುವಕರು ಕುಡಿದು ಮೋಜು ಮಸ್ತಿ ಮಾಡಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಮೋಜು ಮಸ್ತಿ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ.
ಕೆಲ ತಿಂಗಳ ಹಿಂದೆ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆ ಆಗಿದ್ದು, ಹಿರೀಕೆರೆ ತುಂಬಿ ಕೋಡಿ ಬಿದ್ದಿತ್ತು. ಇಲ್ಲಿನ ವೈಭವವನ್ನು ಸವಿಯಲು ಹಂಗಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಬರುತ್ತಲೇ ಇರುತ್ತಾರೆ. ಪ್ರವಾಸಿಗರು ಇಲ್ಲಿನ ಕೆರೆ ಕೋಡಿ ಕಂಡು ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಇದಕ್ಕೆ ಗ್ರಾಮಸ್ಥರು ಬಾಗೀನವನ್ನೂ ಅರ್ಪಿಸಿದ್ದಾರೆ. ಇದರ ಮಧ್ಯೆಯೇ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಗೆ ಪುಂಡರ ಗುಂಪೊಂದು ಆಗಮಿಸಿ ಮದ್ಯವನ್ನು ಸೇವಿಸುವುದಲ್ಲದೇ ಹುಚ್ಚಾಟವನ್ನು ಮೆರೆದಿದ್ದಾರೆ.
ಪುಂಡರ ಪುಂಡಾಟದ ಫೋಟೋ ವೈರಲ್!

ಕೆರೆ ಅಭಯಾರಣ್ಯ ವ್ಯಾಪ್ತಿಗೆ ಬರುವ ಕಾರಣದಿಂದ ಅರಣ್ಯ ಇಲಾಖೆ ವತಿಯಿಂದ ಪ್ರವೇಶ ದ್ವಾರದಲ್ಲಿ ಗೇಟ್ ಇರಿಸಲಾಗಿದೆ. ಅನುಮತಿ ಪಡೆದ ನಂತರವಷ್ಟೆ ಒಳಗೆ ಪ್ರವೇಶ ನೀಡಲಾಗುತ್ತಿದೆ. ಆದರೆ ಕೆಲ ಪ್ರವಾಸಿಗರು ಕೆರೆ ವೀಕ್ಷಣೆ ನೆಪದಲ್ಲಿ ರಾಜಾರೋಷವಾಗಿ ಕೆರೆಯ ಕೋಡಿ ಸ್ಥಳದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದು, ಇದೀಗ ಮದ್ಯ ಸೇವನೆ ಮಾಡಿದ ಪುಂಡರ ಪುಂಡಾಟದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮೋಜು, ಮಸ್ತಿಗೆ ಅವಕಾಶ ಕೊಟ್ಟವರು ಯಾರು?

ಗೋಪಾಲಸ್ವಾಮಿ ಬೆಟ್ಟದ ವಲಯ ವ್ಯಾಪ್ತಿಗೆ ಬರುವ ಹಿರೀಕೆರೆ ಸೂಕ್ಷ್ಮ ಪರಿಸರ ಪ್ರದೇಶವಾಗಿದೆ. ಈ ಹಿನ್ನೆಲೆ ಇಲ್ಲಿಗೆ ಸಾರ್ವಜನಿಕರ ಪ್ರವೇಶವನ್ನೂ ನಿರ್ಬಂಧಿಲಾಗಿದೆ. ಹೀಗಿದ್ದರೂ ಕೂಡ ಪುಂಡರಿಗೆ ಮೋಜುಮಸ್ತಿ ಮಾಡಲು ಅನುಮತಿ ನೀಡಿದವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಬಂಡೀಪುರ ಅಭಯಾರಣ್ಯದ ವಾಹನಗಳನ್ನು ಹೊರತುಪಡಿಸಿದ ಹಿರೀಕೆರೆ ಸೂಕ್ಷ್ಮ ಪರಿಸರ ವಲಯದಲ್ಲಿ ಖಾಸಗಿ ವ್ಯಕ್ತಿಗಳ ಬೈಕ್, ಕಾರು ಸೇರಿದಂತೆ ಇನ್ನಿತರ ವಾಹನಗಳು ತೆರಳಲು ಅವಕಾಶವಿಲ್ಲ. ಆದರೆ ಅಧಿಕಾರಿಗಳ ಕೃಪಕಟಾಕ್ಷದಿಂದ ಕೆಲವರು ತಮ್ಮ ವಾಹನದ ಸಮೇತ ಬೀಡುಬಿಟ್ಟು ಮಸ್ತಿಯಲ್ಲಿ ತೊಡಗುತ್ತಿದ್ದಾರೆ. ಹಿರೀಕೆರೆಯಲ್ಲಿ ಕೆಲವರು ಈಜಾಡಿರುವುದು ಹಾಗೂ ಮದ್ಯ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಸಿಬ್ಬಂದಿಯಿಂದ ಮಾಹಿತಿ ಪಡೆದು ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ಗೋಪಾಲಸ್ವಾಮಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications