ಗುಂಡ್ಲುಪೇಟೆಯಲ್ಲಿ ಒಡೆದ ದೊಡ್ಡಕೆರೆ ಏರಿ: ರೈತರ ಆಕ್ರೋಶ
ಚಾಮರಾಜನಗರ, ಸೆಪ್ಟೆಂಬರ್ 9: ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವ ಕಾರಣ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೆರೆಕಟ್ಟೆಗಳು ತುಂಬಿದ್ದರೆ, ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ದೊಡ್ಡಕೆರೆ ಏರಿ ಮತ್ತೊಮ್ಮೆ ಒಡೆದು ನೀರು ಪೋಲಾಗುತ್ತಿದೆ. ಅಷ್ಟೇ ಅಲ್ಲ, ಬೆವರು ಸುರಿಸಿದ ಬೆಳೆದ ರೈತರ ಬೆಳೆಗಳೆಲ್ಲ ನೀರಿನ ಕೋಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿವೆ.
ದೊಡ್ಡಕೆರೆ ಏರಿ ಕೆಲ ತಿಂಗಳ ಹಿಂದೆಯೇ ಒಡೆದು ಹೋಗಿತ್ತು. ಇದನ್ನು ಮರಳು ಮೂಟೆಯಿಟ್ಟು ಮಣ್ಣು ಹಾಕಿ ಕಟ್ಟಿ ಸರಿಪಡಿಸಲಾಗಿತ್ತು. ಆದರೂ ನೀರು ಸೋರಿಕೆಯಾಗಿತ್ತು. ಆಗಲೇ ಅಧಿಕಾರಿಗಳು ಗಮನಹರಿಸಿ ಕಾಂಕ್ರಿಟ್ ಹಾಕಿ ಗಟ್ಟಿಗೊಳಿಸಿದ್ದರೆ ಕೆರೆ ಏರಿ ಒಡೆಯುತ್ತಿರಲಿಲ್ಲ.

ಮಳೆ ಕಡಿಮೆಯಾಗಿದ್ದರಿಂದ ಏನೂ ಆಗಲ್ಲ ಎಂದು ನಂಬಿದ್ದರಿಂದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದರು. ಅದರ ಪರಿಣಾಮವೇ ದೊಡ್ಡಕೆರೆ ಏರಿ ಮತ್ತೊಮ್ಮೆ ಮಳೆ ನೀರು ಹರಿದು ಬಂದು ತುಂಬಿದ್ದರಿಂದ ಒಡೆದಿದೆ. ಪರಿಣಾಮ ಬೆಳೆ ನಾಶವಾಗಿದೆ.
ಇದನ್ನು ಖಂಡಿಸಿ ರೈತರು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಚಾಮರಾಜನಗರದಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಕೆರೆಯ ಏರಿ ದುರಸ್ಥಿಯಲ್ಲಿದ್ದು, ಮೂರು ತಿಂಗಳ ಹಿಂದೆಯೂ ಕೆರೆಯ ಏರಿಯಲ್ಲಿ ನೀರು ಸೋರಿಕೆಯಾಗುತ್ತಿತ್ತು. ಈ ಬಗ್ಗೆ ದುರಸ್ಥಿ ಕಾರ್ಯ ಮಾಡುವಂತೆ ಅಲ್ಲಿನ ಸ್ಥಳೀಯರು ಅಧಿಕಾರಿಗಳಿಗೆ ಒತ್ತಡ ಹೇರಿದರೂ ಯಾವುದೇ ಪ್ರಯೋಜನವಾಗಿಲ್ಲ.

ಒಂದು ವಾರದಿಂದ ಮತ್ತೆ ಮಳೆಯಾಗುತ್ತಿರುವುದರಿಂದ ಕೆರೆ ತುಂಬಿ, ಏರಿ ಒಡೆದಿದ್ದು, ಆಸುಪಾಸಿನ ಜಮೀನುಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ ಎಂದು ಆರೋಪಿಸಿದರು.
ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಸಿದ್ದು, ಶೀಘ್ರವೇ ಕೆರೆಯ ಏರಿ ದುರಸ್ತಿಪಡಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಸದ್ಯಕ್ಕೆ ಹಿಂತೆಗೆದುಕೊಳ್ಳಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications