ಚಾಮರಾಜನಗರ: ಕಾಲೇಜಿಗೆ ಕಾಲಿಟ್ಟ ಖದೀಮರ ಗ್ಯಾಂಗ್ ಕದ್ದಿದ್ದೇನು ಗೊತ್ತಾ?
ಚಾಮರಾಜನಗರ, ಜೂನ್, 27: ಚಿನ್ನದಂಗಡಿ, ಮಳಿಗೆಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ಕಾಲೇಜಿಗೂ ಎಂಟ್ರಿ ಕೊಟ್ಟಿದ್ದು, ಪರೀಕ್ಷಾ ಕೇಂದ್ರದ ಡಿವಿಆರ್, ಬ್ಯಾಟರಿ, ಟಿವಿಯನ್ನೇ ಹೊತ್ತೊಯ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಸರ್ಕಾರಿ ಪಿಯು ಬಾಲಕರ ಕಾಲೇಜಿನಲ್ಲಿ ಈ ಕಳವು ಪ್ರಕರಣ ನಡೆದಿದ್ದು, ಉಪನ್ಯಾಸಕ ವರ್ಗ ಕಳವು ಘಟನೆಯಿಂದ ಸದ್ಯ ಆತಂಕಕ್ಕೀಡಾಗಿದ್ದಾರೆ.

ಗೇಟಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಪರೀಕ್ಷೆ ಮುನ್ನೆಚ್ಚರಿಕೆಗೆ ಅಳವಡಿಸಿದ್ದ ಸಿಸಿಟಿವಿ ಡಿವಿಆರ್ ಹಾಗೂ ಲಕ್ಷಾಂತರ ಮೌಲ್ಯದ 10 ಬ್ಯಾಟರಿಗಳು, ಎಲ್ಇಡಿ ಟಿವಿಯನ್ನು ಹೊತ್ತೊಯ್ದಿದ್ದಾರೆ.
ಪ್ರಸ್ತುತ ಪಿಯು-3 ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ 4 ವಿಷಯಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರದ ಡಿವಿಆರ್ ಕನ್ನ ಹಾಕಿರುವುದರಿಂದ ಪರೀಕ್ಷೆ ನಡೆದ ಪ್ರಮುಖ ದಾಖಲೆಯೇ ಇಲ್ಲದಂತಾಗಿದೆ.
ಪಿಯುಸಿ-3 ರ ಪರೀಕ್ಷೆಯಲ್ಲಿ ಈಗಾಗಲೇ 4 ವಿಷಯಗಳಿಗೆ ಎಕ್ಸಾಂ ಬರೆದಿರುವ ವಿದ್ಯಾರ್ಥಿಗಳು ಕೂಡ ಕಾಲೇಜಿಗೆ ಕನ್ನ ಹಾಕಿರುವುದರಿಂದ ದಿಗಿಲುಗೊಂಡಿದ್ದಾರೆ.
ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ಕೊಟ್ಟು ತನಿಖೆ ನಡೆಸಿದ್ದಾರೆ. ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ಚಾಮರಾಜನಗರ ಪಟ್ಟಣ ಠಾಣೆಗೆ ಈ ಸಂಬಂಧ ದೂರು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications