Get Updates
Get notified of breaking news, exclusive insights, and must-see stories!

ಪ್ರತಿಭಟನಾಕಾರರನ್ನು ನಿಯಂತ್ರಿಸಲು 'ಜನಗಣಮನ...' ಹಾಡಿದ ಡಿವೈಎಸ್ಪಿ

ಚಾಮರಾಜನಗರ, ನವೆಂಬರ್ 23: ಪ್ರತಿಭಟನಾಕಾರರನ್ನು ನಿಯಂತ್ರಿಸಲು ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ರಾಷ್ಟ್ರಗೀತೆ "ಜನಗಣಮನ...' ಹಾಡಿದ ಘಟನೆ ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದಿದೆ.

ಮತಾಂತರ ವಿರೋಧಿಸಿ ಮತಾಂತರ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹಿಂದೂಪರ ಸಂಘಟನೆಗಳ 500ಕ್ಕೂ ಹೆಚ್ಚು ಜನರಿಂದ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣಕ್ಕೆ ಪ್ರತಿಭಟನಾಕಾರರ ಪ್ರವೇಶ ಮಾಡಿದಾಗ, ಮೈಕ್ ಇರುವ ವಾಹನವನ್ನು ಜಿಲ್ಲಾಡಳಿತ ಭವನದ ಆವರಣಕ್ಕೆ ಪೊಲೀಸರು ಬಿಡಲಿಲ್ಲ.

 Chamarajanagara: DYSP Sung National Anthem To Control The Protesters

ಪೊಲೀಸರು ಹಾಗು ಪ್ರತಿಭಟನಾಕಾರ ನಡುವೆ ಕೆಲ ಸಮಯ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಬಿಗಡಾಯಿಸುವುದನ್ನು ಅರಿತ ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು ರಾಷ್ಟ್ರಗೀತೆಯನ್ನು ಹಾಡಲು ಶುರು ಮಾಡಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಾಸ್ಟರ್ ಪ್ಲಾನ್ ಮಾಡಿದ ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ, ಪಕ್ಕದಲ್ಲೇ ಇದ್ದ ಮೈಕ್ ಹಿಡಿದು ಜನಗಣಮನ.. ಹಾಡಿದರು. ಈ ವೇಳೆ ರಾಷ್ಟ್ರಗೀತೆ ಕೇಳುತ್ತಿದ್ದಂತೆ ತಾವು ರಾಷ್ಟ್ರಗೀತೆ ಹಾಡುತ್ತಾ ಪ್ರತಿಭಟನಾಕಾರರು ವಾಗ್ವಾದ ನಿಲ್ಲಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+