ಗುಂಡ್ಲುಪೇಟೆ: ಚೆಕ್ಪೋಸ್ಟ್ ಬಳಿ ನೆರಳಿನ ವ್ಯವಸ್ಥೆ ಇಲ್ಲಿದೆ ಬಿಸಿಲಿಗೆ ಬೆಂಡಾದ ಚುನಾವಣಾ ಸಿಬ್ಬಂದಿ
ಚಾಮರಾಜನಗರ, ಮಾರ್ಚ್, 21: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಮದ್ದೂರು ಮತ್ತು ಕೆಕ್ಕನಹಳ್ಳ ಚೆಕ್ ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆ ಆರಂಭಿಸಿದ್ದು, ಕೇರಳ-ತಮಿಳುನಾಡಿನಿಂದ ಗುಂಡ್ಲುಪೇಟೆ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕು ಕೇರಳ ಹಾಗೂ ತಮಿಳುನಾಡು ಎರಡು ರಾಜ್ಯಗಳ ಗಡಿ ಹಂಚಿಕೊಂಡಿರುವ ಹಿನ್ನೆಲೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ. ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿರುವ ಹಿನ್ನೆಲೆ ಮದ್ದೂರು ಮತ್ತು ಕೆಕ್ಕನಹಳ್ಳ ತನಿಖಾ ಠಾಣೆಗಳಲ್ಲಿ ತಪಾಸಣೆ ಕಾರ್ಯ ಚುರುಕುಗೊಂಡಿದೆ. ಈ ಮಧ್ಯೆ ತಮಿಳುನಾಡು ಮತ್ತು ಕೇರಳದಿಂದ ಗುಂಡ್ಲುಪೇಟೆ ಪ್ರವೇಶಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಲಾಗುತ್ತಿದೆ. ಚೆಕ್ ಪೋಸ್ಟ್ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ನಲ್ಲಿ ನಮೂದಿಸಲಾಗುತ್ತಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ತಪಾಸಣೆಗಾಗಿ ಮದ್ದೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ನಿಯೋಜಿಸಿರುವ ಸಿಬ್ಬಂದಿಗೆ ತಾಲೂಕು ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದ್ದು, ತನಿಖಾ ಠಾಣಾ ಮುಂಭಾಗ ಪೆಂಡಲ್ ವ್ಯವಸ್ಥೆಯಿಲ್ಲದೆ ಮರದ ನೆರಳಿನ ಆಶ್ರಯದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಆದ್ದರಿಂದ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕೆಂದು ಹೆಸರೇಳಲಿಚ್ಛಿಸದ ಸಿಬ್ಬಂದಿಯೊಬ್ಬರು ಒತ್ತಾಯಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications