ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜನಗರದಿಂದಲೇ ಸ್ಪರ್ಧಿಸುವೆ: ವಾಟಾಳ್ ನಾಗರಾಜ್

By Mahesh
|
Google Oneindia Kannada News

ಚಾಮರಾಜನಗರ, ಏಪ್ರಿಲ್ 12: ಚಾಮರಾಜನಗರದಿಂದ ಐದು ಬಾರಿ ಶಾಸಕರಾಗಿ ಅಸೆಂಬ್ಲಿಯಲ್ಲಿ ಕನ್ನಡ ಪರ ದನಿಯಾಗಿದ್ದ ವಾಟಾಳ್ ನಾಗರಾಜ್ ಅವರು ಈಗ ಹೊಸ ರಾಜಕೀಯ ವೇದಿಕೆ ರಚಿಸಿಕೊಂಡು ಮತ್ತೊಮ್ಮೆ ಪ್ರವೇಶ ಬಯಸಿದ್ದಾರೆ.

ವಾಟಾಳ್ ಹೊಸ ಸಾಹಸ, ಅಸೆಂಬ್ಲಿ ಕನ್ನಡ ದನಿಯಾಗಬೇಕೆ? ವಾಟಾಳ್ ಹೊಸ ಸಾಹಸ, ಅಸೆಂಬ್ಲಿ ಕನ್ನಡ ದನಿಯಾಗಬೇಕೆ?

ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಚಾಮರಾಜನಗರ: 2013ರ ಚುನಾವಣಾ ಫಲಿತಾಂಶದಲ್ಲಿ ಗೆದ್ದವರು, ಸೋತವರು ಚಾಮರಾಜನಗರ: 2013ರ ಚುನಾವಣಾ ಫಲಿತಾಂಶದಲ್ಲಿ ಗೆದ್ದವರು, ಸೋತವರು

ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಭಾಗದಿಂದ ಸ್ಪರ್ಧಿಸುವಂತೆ ಆಗ್ರಹಿಸಿದ್ದಾರೆ. ಆದರೆ, ಚಾಮರಾಜನಗರ ಕ್ಷೇತ್ರದಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದರು.

Elections 2018 : Vatal Nagaraj to contest from Chamarajanagar

100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ !

ಕನ್ನಡ ಸಂಘಟನೆಗಳು, ಪ್ರಾದೇಶಿಕ, ದಲಿತ ಹಾಗೂ ರೈತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕರ್ನಾಟಕ ಪ್ರಜಾ ಸಂಯುಕ್ತ ರಂಗ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ, ಸರ್ವೋದಯ ಕರ್ನಾಟಕ ಹೀಗೆ ರೈತ ಪರ ಪಕ್ಷಗಳಿವೆ. ಈಗ ವಾಟಾಳ್ ಪಕ್ಷ ಕೂಡಾ ದಲಿತರು, ರೈತರ ಪರ ನಿಲ್ಲಲು ಮುಂದಾಗಿದೆ.

ಕ್ಷೇತ್ರ ಪರಿಚಯ : ಚಾಮರಾಜನಗರದಲ್ಲಿ ಬಿಜೆಪಿ- ಕಾಂಗ್ರೆಸ್ ಫೈಟ್ ಕ್ಷೇತ್ರ ಪರಿಚಯ : ಚಾಮರಾಜನಗರದಲ್ಲಿ ಬಿಜೆಪಿ- ಕಾಂಗ್ರೆಸ್ ಫೈಟ್

100 ಕ್ಷೇತ್ರಗಳಲ್ಲಿ ಕನ್ನಡ ಪರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಪ್ರಾದೇಶಿಕ ಅಸಮಾನತೆ, ಕನ್ನಡ ಅಸ್ಮಿತೆ ಕಾಯುವುದು ಕೂಡಾ ನಮ್ಮ ಮುಖ್ಯ ಉದ್ದೇಶ ಎಂದು ವಾಟಾಳ್ ಹೇಳಿದ್ದಾರೆ.

English summary
Elections 2018 : Kannada organisation president Vatal Nagaraj has decided to contest from Chamarajanagar assembly constituency. Vatal and 100 other pro Kannada activists will be contesting from Karnataka Praja Samyukta Ranga new political outfit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X