ಕೊಳ್ಳೇಗಾಲದಲ್ಲಿ ಕಬ್ಬು ತುಂಬಿದ ಲಾರಿಗೆ ವಿದ್ಯುತ್ ಸ್ಪರ್ಶ, ಚಾಲಕ, ಕ್ಲೀನರ್ ಸಾವು
ಚಾಮರಾಜನಗರ, ಸೆಪ್ಟೆಂಬರ್, 09: ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯ ರಸ್ತೆಯ ದುರ್ಗಮ್ಮನ ದೇವಸ್ಥಾನದ ಹತ್ತಿರ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಂಗರಪುರ ಗ್ರಾಮದ ನಿವಾಸಿಗಳಾದ ಲಾರಿ ಕ್ಲೀನರ್ ಚಿನ್ನು ಮತ್ತು ಲಾರಿ ಚಾಲಕ ಹಾಗೂ ಮಾಲೀಕ ಪ್ರಕಾಶ್ ಮೃತಪಟ್ಟಿರುವರು ಎಂದು ಗುರುತಿಸಲಾಗಿದೆ.

ಗುಂಡಾಲ್ ಜಲಾಶಯ ಸಮೀಪದ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಕಬ್ಬಿನ ಲೋಡ್ ತುಂಬಿಕೊಂಡು ತೆರಳುವಾಗ ದುರ್ಗಮ್ಮನ ದೇವಸ್ಥಾನ ಹತ್ತಿರ ರಸ್ತೆ ಬದಿಯಲ್ಲಿ ಹಾದುಹೋಗಿರುವ ಹೈ ಪವರ್ ವಿದ್ಯುತ್ ತಂತಿಯು ತಗುಲಿದೆ. ಈ ವೇಳೆ ಚಿನ್ನು, ಪ್ರಕಾಶ್ ಲಾರಿಯಿಂದ ಹೊರಗಿಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾದರೂ ವಿಫಲವಾಗಿ ಹೈ ಪವರ್ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಅಸುನೀಗಿದ್ದಾರೆ ಎನ್ನಲಾಗಿದೆ. ಇನ್ನು ಈ ಘಟನೆ ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಲಾರಿ, ಕಾರು, ಕೇರಳ ಸಾರಿಗೆ ಬಸ್ ನಡುವೆ ಅಪಘಾತ
ಉಲ್ಲಾಳ, ಸೆಪ್ಟೆಂಬರ್, 09: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ.
ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಈ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಎಂಬಲ್ಲಿ ಶನಿವಾರ (ಸೆಪ್ಟೆಂಬರ್ 09) ಮಧ್ಯಾಹ್ನ ನಡೆದಿದೆ ಎನ್ನಲಾಗಿದೆ. ಇನ್ನು ಈ ಅಪಘಾತದ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications