ಹನೂರು: ವಿದ್ಯುತ್ ಶಾಕ್ಗೆ ಒಳಗಾಗಿ ನರಳಾಡುತ್ತಿದ್ದ ಕೋತಿ, ಮುಂದೇನಾತ್ತು?-ಇಲ್ಲಿದೆ ಮಾಹಿತಿ
ಚಾಮರಾಜನಗರ, ಆಗಸ್ಟ್, 25: ಚಾಮರಾಜನಗರ ಜಿಲ್ಲೆಯಲ್ಲಿ ಒಂದಲ್ಲ ಒಂದು ಪ್ರಾಣಿಗಳು ಕಾಣಿಸಿಕೊಂಡು ಸುದ್ದಿಯಾಗುತ್ತಲೇ ಇರುತ್ತವೆ. ಆದರೆ ಇದೀಗ ವಿದ್ಯುತ್ ಶಾಕ್ನಿಂದ ಗಾಯಗೊಂಡಿದ್ದ ಕೋತಿಗೆ ಯುವಕರು ಚಿಕಿತ್ಸೆ ಕೊಡಿಸಿ, ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು (ಆಗಸ್ಟ್ 25) ನಡೆದಿದೆ.
ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಆವರಣದಲ್ಲಿ ಕೋತಿಯೊಂದು ವಿದ್ಯುತ್ ಕಂಬದಲ್ಲಿ ಕುಳಿತಿದ್ದಾಗ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡಿದೆ. ತಕ್ಷಣ ಮಲೆ ಮಹದೇಶ್ವರ ಬೆಟ್ಟದ ನಿವಾಸಿಗಳಾದ ಬೀರೇಶ್, ಶಿವು ಜಯಂತ್ ಇತರರು ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಗಮನ ಸೆಳೆದಿದ್ದಾರೆ.

ವಿದ್ಯುತ್ ಶಾಕ್ಗೆ ಕೋತಿಯು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ರಭಸಕ್ಕೆ ಬಲಗಡೆಯ ಕೈಗೆ ತುಂಬಾ ಪೆಟ್ಟಾಗಿತ್ತು. ಇನ್ನು ಇದೀಗ ಚಿಕಿತ್ಸೆ ಬಳಿಕ ಗಾಯಗೊಂಡಿದ್ದ ಕೋತಿಯು ಚೇತರಿಸಿಕೊಂಡಿದ್ದು, ಸ್ಥಳೀಯರು ಹಣ್ಣು ಹಂಪಲು ಕೊಟ್ಟು ಸಂತೈಸಿದ್ದಾರೆ.
ಹಸುವಿನ ಮೇಲೆ ಚಿರತೆ ದಾಳಿ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹೊರವಲಯದ ರಸ್ತೆಯಲ್ಲಿ ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಘಟನೆ ಆಗಸ್ಟ್ 14ರಂದು ಮಟ.. ಮಟ.. ಮಧ್ಯಾಹ್ನ ನಡೆದಿದೆ. ಹಾಗಾದರೆ ಈ ಹಸು ಯಾರಿಗೆ ಸೇರಿದ್ದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸತ್ತೇಗಾಲ ಗ್ರಾಮದ ಕಲ್ಯಾಣಿ ಬಸವೇಶ್ವರ ದೇವಸ್ಥಾನದ ಸಮೀಪದಲ್ಲಿ ಬುಧವಾರ ಮಧ್ಯಾಹ್ನ ಚಿರತೆ ದಿಢೀರ್ ಹಸುವಿನ ಮೇಲೆ ದಾಳಿ ಮಾಡಿ ಹಸುವನ್ನು ಕೊಂದಿದೆ.
ಗ್ರಾಮದ ನಂಜುಂಡಸ್ವಾಮಿ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ರೈತನ ಎದುರೇ ಮಧ್ಯಾಹ್ನ ನಡು ರಸ್ತೆಯಲ್ಲಿ ಚಿರತೆ ದಿಢೀರ್ ಹಸುವಿನ ಕುತ್ತಿಗೆಯನ್ನು ಹಿಡಿದು ರಕ್ತ ಕುಡಿಯುತ್ತಿತ್ತು. ಇದನ್ನು ಕಂಡ ರೈತರು ಜೋರಾಗಿ ಕೂಗಿ ದೊಣ್ಣೆಯನ್ನು ಎತ್ತಿಕೊಂಡು ಚಿರತೆಯ ಬಳಿ ಓಡಿ ಹೋದಾಗ ಗಾಬರಿಗೊಂಡ ಚಿರತೆ ಹಸುವಿನ ಕುತ್ತಿಗೆಯನ್ನು ಬಿಟ್ಟು ಜಮೀನ ಕಡೆ ಓಡಿಹೋಯಿತು.
"ನಮ್ಮ ಹಸು ಸಾವಿಗೆ ಅರಣ್ಯ ಇಲಾಖೆಯವರೇ ಕಾರಣ. ಚಿರತೆ ಇದೆ ಎಂದು ಎಷ್ಟೇ ಮಾಹಿತಿ ನೀಡಿದರೂ ಸಹ ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಮುಂದಿನ ದಿನಗಳಲ್ಲಿ ಅನಾಹುತ ಆದರೆ ಅರಣ್ಯ ಇಲಾಖೆಯವರೇ ನೇರ ಹೊಣೆಗಾರರಾಗುತ್ತಾರೆ," ಎಂದು ರೈತ ಮುಖಂಡ ಶೈಲೇಂದ್ರ, ಭಾಸ್ಕರ್ ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಅಕ್ಕಪಕ್ಕದ ಪ್ರದೇಶದಲ್ಲಿ ಬೋನನ್ನು ಇಟ್ಟಿದ್ದಾರೆ. ರಾತ್ರಿಯಿಡೀ ಚಿರತೆಗಾಗಿ ಕಾಯುತ್ತೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications