ಅಪಾಯಕಾರಿ ಕಲ್ಲು ಕ್ವಾರಿಯಲ್ಲಿ 'ಪ್ರಬುದ್ಧ' ಚಿತ್ರೀಕರಣ!
ಗುಂಡ್ಲುಪೇಟೆ, ಡಿಸೆಂಬರ್ 27 : ಪ್ರಬುದ್ಧ ಚಿತ್ರಕ್ಕಾಗಿ ಸಾಹಸಮಯ ದೃಶ್ಯವೊಂದನ್ನು ಥ್ರಿಲ್ಲರ್ ಮಂಜು ಮತ್ತು ತಂಡ ತಾಲೂಕಿನ ಹಿರಿಕಾಟಿಯ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ಮಾಡುತ್ತಿದ್ದು, ಅಸುರಕ್ಷಿತವಾಗಿರುವ ಈ ಪ್ರದೇಶದಲ್ಲಿ ಚಿತ್ರೀಕರಣ ಮಾಡುತ್ತಿರುವುದು ಅನಾಹುತಕ್ಕೆ ಆಹ್ವಾನ ನೀಡಿದಂತೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಭಾರೀ ಆಳದ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇದನ್ನು ನೋಡಲು ಜನ ಮುಗಿ ಬೀಳುತ್ತಿದ್ದಾರೆ. ಸ್ವಲ್ಪ ಎಡವಿದರೂ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಚಿತ್ರೀಕರಣವನ್ನು ಯಾವುದೇ ಭದ್ರತೆಯಿಲ್ಲದೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಿರಿಕಾಟಿಯ ಸರ್ವೆನಂ 108ರಲ್ಲಿ ಬಿಳಿಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದು ಇಲ್ಲಿನ ಸುಮಾರು 300 ರಿಂದ 400 ಅಡಿ ಆಳದ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರೀಕರಣ ನಡೆಸಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಹಾಗೂ ಇಲಾಖೆಯ ಅನುಮತಿ ಪಡೆದಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಚಿತ್ರೀಕರಣ ನಡೆಯುತ್ತಿರುವ ವಿಷಯ ತಿಳಿದ ಅಕ್ಕಪಕ್ಕದ ಗ್ರಾಮದ ನೂರಾರು ಸಾರ್ವಜನಿಕರು ಆಗಮಿಸುತ್ತಿದ್ದು ಕುತೂಹಲದಿಂದ ಮೇಲ್ಭಾಗದಿಂದ ಇಣುಕಿ ನೋಡುತ್ತಿದ್ದು ಭಾರೀ ಆಳವಿರುವ ಕಾರಣ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿದೆ.
ಈ ಪ್ರದೇಶದಲ್ಲಿ ಚಿತ್ರೀಕರಣ ನೋಡುತ್ತಿರುವ ಸಾರ್ವಜನಿಕರಿಗಾಗಲಿ ಅಥವಾ ಚಿತ್ರೀಕರಣ ನಡೆಸುತ್ತಿರುವ ಸಿಬ್ಬಂದಿಗಳಿಗಾಗಲೀ ಯಾವುದೆ ಭದ್ರತೆಯಾಗಲೀ, ಸುರಕ್ಷತೆಯಾಗಲೀ ಇಲ್ಲ ಆದ್ದರಿಂದ ಈ ಬಗ್ಗೆ ಸಂಬಂಧಿಸಿದವರು ಗಮನಹರಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications