ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರದಲ್ಲಿ ಮರುಕಳಿಸಿದ ಆನೆ ಸಾವಿನ ಪ್ರಕರಣಗಳು

|
Google Oneindia Kannada News

ಚಾಮರಾಜನಗರ, ಮೇ 29: ಚಾಮರಾಜನಗರದಲ್ಲಿ ಮತ್ತೆ ಆನೆ ಸಾವಿನ ಪ್ರಕರಣಗಳು ಮರುಕಳಿಸಿದ್ದು, ಇದೀಗ ಹನೂರು ತಾಲ್ಲೂಕಿನಲ್ಲಿ ಮತ್ತೊಂದು ಒಂಟಿಸಲಗ ಮೃತಪಟ್ಟಿದೆ.

Recommended Video

ಫಿಲಂ ಟಿಕೆಟ್ ಗೆ 5 ರೂಪಾಯಿ ಜಾಸ್ತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ ಫಿಲಂ ಛೇಂಬರ್| Film Chamber | KFI | BSY

ಕಳೆದ ಮೂರು ದಿನದಲ್ಲಿ ಎರಡು ಆನೆಗಳ ಕಳೇಬರ ಪತ್ತೆಯಾಗಿದ್ದಾವೆ. ಆನೆಗಳ ಸಾವಿನಿಂದ ವನ್ಯ ಜೀವಿ ಪ್ರೇಮಿಗಳಲ್ಲಿ ಆತಂಕ ಮೂಡಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ 45-50 ವರ್ಷದ ಗಂಡಾನೆಯೊಂದು ಮೃತಪಟ್ಟಿದೆ.

ಇಂದಿನಿಂದ ಆನ್ ಲೈನ್ ನಲ್ಲಿ ಮಾದಪ್ಪನ ದರ್ಶನಇಂದಿನಿಂದ ಆನ್ ಲೈನ್ ನಲ್ಲಿ ಮಾದಪ್ಪನ ದರ್ಶನ

ಮೂರು ದಿನಗಳ ಹಿಂದಷ್ಟೇ ಕೌದಳ್ಳಿ ವನ್ಯಜೀವಿ ವಲಯದ ದಂಟೂರು ಕರೇಕನಹಟ್ಟಿ ಹಗ್ಗು ನಾಲಾದಲ್ಲಿ ಒಂದು ಆನೆಯ ಕಳೇಬರ ಪತ್ತೆಯಾಗಿತ್ತು, ಅಲ್ಲದೆ ಕಳೆದ ಮಾರ್ಚ್ ನಲ್ಲಿ 7 ರಿಂದ 8 ಆನೆ ಮೃತಪಟ್ಟ ಪ್ರಕರಣಗಳು ದಾಖಲಾಗಿದ್ದವು.

Elephant Death Cases Repeated In Chamarajanagara

ಪದೇ ಪದೇ ಆನೆಗಲು ಸಾವಿಗೀಡಾಗುತ್ತಿದ್ದು, ಇದರ ನಿಖರ ಕಾರಣ ತಿಳಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಮರಣೋತ್ತರ ಪರೀಕ್ಷೆ ನಂತರ ಆನೆ ಸಾವಿಗೆ ನಿಜ ಕಾರಣ ತಿಳಿದು ಬರಲಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳುತ್ತಾರೆ.

English summary
Elephant death cases have recurred in Chamarajanagara, and now another Elephant has died in Hanoor Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X