ಪ್ರಸಿದ್ಧ ಪ್ರವಾಸಿ ಬಿಳಿಗಿರಿರಂಗನಾಥ ಬೆಟ್ಟದ ಮುಖ್ಯ ರಸ್ತೆಗಿಳಿದ ಒಂಟಿ ಸಲಗ-ವಿಡಿಯೋ ಭಾರೀ ವೈರಲ್
ಚಾಮರಾಜನಗರ, ಜೂನ್, 21: ಪ್ರಸಿದ್ಧ ಪ್ರವಾಸಿ ತಾಣವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆಯಲ್ಲಿ ಸಲಗವೊಂದು ದಿಢೀರ್ ಎಂಟ್ರಿ ಕೊಟ್ಟು ಜನರನ್ನು ಆತಂಕಕ್ಕೆ ಈಡು ಮಾಡಿದೆ. ಅಲ್ಲದೆ ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಬಿಳಿಗಿರಿರಂಗನಾಥ ಬೆಟ್ಟದ ಬಂಗ್ಲೆ ಪೋಡು, ಐಬಿ ಬಳಿ ದಿಢೀರ್ ಪ್ರತ್ಯಕ್ಷವಾಗಿ ಓಡಾಡಿ ಸ್ಥಳೀಯರಿಗೆ ಆತಂಕ ಉಂಟು ಮಾಡಿದೆ.

ಹಲಸಿನ ಹಣ್ಣಿನ ಆಸೆಗೆ ಆನೆ ಪೋಡುಗಳತ್ತ ಬರುತ್ತಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಇದು ರಸ್ತೆಯಲ್ಲಿ ಬಸ್ ಅನ್ನು ಕೂಡ ಹಿಮ್ಮೆಟ್ಟಿಸಿತ್ತು. ಇದೀಗ ಮತ್ತೇ ಪೋಡುಗಳತ್ತ ಬಂದು ಸ್ಥಳೀಯರಿಗೆ ಭೀತಿ ಹುಟ್ಟಿಸಿದೆ. ಆದ್ದರಿಂದ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಗಸ್ತಿಗೆ ತೆರಳಿದ್ದ ವೇಳೆ ಆನೆ ದಾಳಿ: ಜಮೀನುಗಳಿಗೆ ಆನೆ ನುಗ್ಗುವುದನ್ನು ತಪ್ಪಿಸಲು ಗಸ್ತಿಗೆ ತೆರಳಿದ್ದ ವೇಳೆ ಆನೆ ದಾಳಿಗೆ ಮೂವರು ವಾಚರ್ಗಳು ಗಂಭೀರವಾಗಿ ಗಾಯಗೊಂಡ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಹುಸಣೆಪಾಳ್ಯ ಎಂಬಲ್ಲಿ ಗುರುವಾರ (ಜೂನ್ 20) ತಡರಾತ್ರಿ ನಡೆದಿದೆ.
ಬಿಆರ್ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು (36) ಎಂಬವರು ಗಾಯಗೊಂಡವರು. ಮಲೆ ಮಹದೇಶ್ವರ ವನ್ಯಜೀವಿಧಾಮದಿಂದ ಆಹಾರ ಅರಸಿ ಜಮೀನುಗಳತ್ತ ನುಗ್ಗುವ ಆನೆಗಳನ್ನು ಕಾಡಿಗೆ ಓಡಿಸಲು ಇವರು ತೆರಳಿದ್ದ ವೇಳೆ ದಿಢೀರ್ ಆನೆ ದಾಳಿ ನಡೆಸಿದೆ.
ಆನೆ ದಾಳಿಯಿಂದ ಮುನಿಯಪ್ಪನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಬಳಿಕ ಜಡೆಸ್ವಾಮಿಯನ್ನು ಓಡಿಸಿಕೊಂಡು ಹೋದ ವೇಳೆ ಗುಂಡಿಯೊಳಕ್ಕೆ ಬಿದ್ದು ಕಾಲು ಮುರಿದಿದೆ. ಇನ್ನು ನಾಗರಾಜು ಎಂಬವವರಿಗೆ ಎಡಗೈ ಗಾಯವಾಗಿದೆ. ಇದೀಗ ಮೂವರಿಗೂ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
-
Viral Videlo: ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications