ಹೊಗೆನಕಲ್ ಫಾಲ್ಸ್ನಲ್ಲಿ ಪ್ರವಾಸಿಗರಿಗಿಲ್ಲ ಪ್ರವೇಶ, ಏಕೆ ಮತ್ತು ಎಷ್ಟು ದಿನ? ಮಾಹಿತಿ ತಿಳಿಯಿರಿ
ಚಾಮರಾಜನಗರ, ಡಿಸೆಂಬರ್, 04: ಪ್ರಸಿದ್ಧ ಪ್ರವಾಸಿ ತಾಣವಾದ ಹನೂರು ತಾಲೂಕಿನ ಹೊಗೆನಕಲ್ ಫಾಲ್ಸ್ನಲ್ಲಿ ತೆಪ್ಪ ನಡೆಸಲು ಒಬ್ಬರಿಗೆ 1,200 ರೂಪಾಯಿ ನಿಗದಿ ಮಾಡುವಂತೆ ಒತ್ತಾಯಿಸಿ ಅಂಬಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೆನಕಲ್ ಫಾಲ್ಸ್ಗೆ ವಾರಾಂತ್ಯದ ರಜಾ ದಿನಗಳು ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಫಾಲ್ಸ್ಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿ ಫಾಲ್ಸ್ ವೀಕ್ಷಣೆ ಮಾಡುತ್ತಿದ್ದಾರೆ. ಆದರೆ ಹೊಗೆನಕಲ್ ಫಾಲ್ಸ್ಗೆ ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆಯವರು ಒಬ್ಬರಿಗೆ 500 ನಿಗದಿ ಮಾಡಿದ್ದರು. ಇದರಲ್ಲಿ ಸರ್ಕಾರಕ್ಕೆ ನೂರು ರೂಪಾಯಿ ಹಾಗೂ ತೆಪ್ಪ ನಡೆಸುವವರಿಗೆ 400 ರೂಪಾಯಿ ನೀಡಲಾಗುತ್ತಿತ್ತು.

ನೂರು ರೂಪಾಯಿಯನ್ನು ಪಡೆಯುವ ಅರಣ್ಯ ಇಲಾಖೆಯವರು ಬರುವಂತಹ ಪ್ರವಾಸಿಗರಿಗೆ ಯಾವುದೇ ವ್ಯವಸ್ಥೆಯನ್ನು ಮಾಡದೆ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಪ್ರವಾಸಿಗರಿಗೆ ಉತ್ತಮ ಶೌಚಾಲಯ ಪಾರ್ಕಿಂಗ್ ವ್ಯವಸ್ಥೆ ಹಾಗೂ ವಿಶ್ರಾಂತಿ ಪಡೆಯಲು ಯಾವುದೇ ವ್ಯವಸ್ಥೆ ಇಲ್ಲದೆ ಇರುವುದರಿಂದ ತೊಂದರೆಯಾಗುತ್ತಿದೆ. ಅರಣ್ಯ ಇಲಾಖೆಯವರು ಪಡೆಯುವ ನೂರು ರೂಪಾಯಿಯಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ನಮಗೂ 400 ರೂಪಾಯಿ ಸಾಲುತ್ತಿಲ್ಲ ಎಂದು ತೆಪ್ಪ ನಡೆಸುವವರು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ, ಪೆಟ್ರೋಲ್ ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಯಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ. ನೆರೆಯ ತಮಿಳುನಾಡು ರಾಜ್ಯದವರು ತೆಪ್ಪ ನಡೆಸುವವರಿಗೆ 1,700 ನಿಗದಿ ಮಾಡಿದ್ದಾರೆ. ಅದರಂತೆ ಕರ್ನಾಟಕದಲ್ಲಿಯೂ 1,200 ರೂಪಾಯಿ ನಿಗದಿ ಮಾಡಬೇಕೆಂದು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದರು. ಇವರ ಬೇಡಿಕೆ ಈಡೇರಿಸದೆ ಇರುವುದರಿಂದ ಅಂಬಿಗರು ಈ ಪ್ರತಿಭಟನೆ ಕೈಗೊಂಡಿದ್ದಾರೆ.
ಇನ್ನು, ಅಂಬಿಗರು ಮುಷ್ಕರ ಮಾಡುತ್ತಿರುವುದರಿಂದ ಹೊಗೆನಕಲ್ ಜಲಪಾತಕ್ಕೆ ತೆರಳಲು ಪ್ರವಾಸಿಗರಿಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ನಿರ್ಬಂಧ ಹೇರಿದ್ದಾರೆ. ಹೊಗೇನಕಲ್ ಫಾಲ್ಸ್ನಲ್ಲಿ ತೆಪ್ಪ ನಡೆಸುವವರಿಗೆ 800 ರೂಪಾಯಿ ನಿಗದಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಅನುಮೋದನೆ ನೀಡಿದ ನಂತರ ದರ ಹೆಚ್ಚಳ ಮಾಡಲಾಗುವುದು ಎಂದು ಅರಣ್ಯಾಧಿಕಾರಿ ಅಂಕರಾಜು ಮಾಹಿತಿ ನೀಡಿದ್ದಾರೆ.
ಪ್ರವಾಸಿಗರಿಗೆ ನಿರ್ಬಂಧ
ಇತ್ತೀಚೆಗಷ್ಟೇ ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಲ್ಲೂ ಪಶ್ಚಿಮ ಘಟ್ಟಗಳಂತಹ ಪ್ರವಾಸಿ ತಾಣಗಳಲ್ಲಿ ಜಲಮೂಗಳು ಅಪಾಯದ ಮಟ್ಟ ಮೀರಿ ಹರಿದಿದ್ದವು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು.
ಉಡುಪಿಯ ಜಲಪಾತದಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದ ಬೆನ್ನೆಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಆಗಿತ್ತು. ಮುಂಜಾಗ್ರತಾ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ ಫಾಲ್ಸ್ ಸೇರಿದಂತೆ ಇನ್ನಿತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಅದರಲ್ಲೂ ವೀಕೆಂಡ್ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿಬ್ಬಂದಿ ಮುಂಜಾಗ್ರತಾ ಕ್ರಮವಹಿಸಿದ್ದು, ಕೈಮರ ಚೆಕ್ ಪೋಸ್ಟ್ನಲ್ಲೇ ಪ್ರವಾಸಿಗನ್ನು ತಡೆದು ವಾಪಾಸ್ ಕಳುಹಿಸಿದ್ದರು.
ಅಲ್ಲದೆ 2-3 ದಿನದಿಂದ ಜಿಲ್ಲೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡುತ್ತಲೇ ಇತ್ತು. ಆದರೆ ಪ್ರವಾಸಿಗರು ಮನವಿಗೆ ಸ್ಪಂದಿಸದ ಹಿನ್ನೆಲೆ ಜಿಲ್ಲೆಯ ಗಿರಿ ಪ್ರದೇಶಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications