ಗುಟ್ಟಾಗಿ ಹುಲಿ,ಚಿರತೆ ಹೂತಿಟ್ಟ RFO?: ಅರಣ್ಯಾಧಿಕಾರಿಗಳ ವಿರುದ್ಧ ಗಂಭೀರ ಆರೋಪ
ಚಾಮರಾಜನಗರ, ಜೂನ್ 16: ಮೇಲಾಧಿಕಾರಿಗಳ ಗಮನಕ್ಕೆ ತಾರದೆ ಮೃತಪಟ್ಟಿದ್ದ ಹುಲಿ ಹಾಗೂ ಚಿರತೆಯನ್ನು ಬಂಡೀಪುರದ ಮೊಳೆಯೂರು ವಲಯದ ಅರಣ್ಯ ಇಲಾಖೆ ಆರ್ಎಫ್ಒ ಪುಟ್ಟರಾಜು ಗುಟ್ಟಾಗಿ ಹೂತಿದ್ದಾರೆ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಗಂಭೀರ ಆರೋಪ ಮಾಡಿದ್ದಾರೆ.
ಉರುಳಿಗೆ ಸಿಕ್ಕಿಬಿದ್ದಿದ್ದ ಹುಲಿ ಮತ್ತು ಅಂಗಚ್ಛೇಧಗೊಂಡ ಚಿರತೆಯ ಶವವನ್ನು ಮೊಳೆಯೂರು ಆರ್ಎಫ್ಒ ಪುಟ್ಟರಾಜು ಗುಟ್ಟಾಗಿ ಹೂತಿಟ್ಟಿದ್ದರು. ಈ ವಿಚಾರ ನಮ್ಮ ಗಮನಕ್ಕೆ ಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೆ. ಜೊತೆಗೆ, 2022ರ ನವೆಂಬರ್ನಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಕೂಡ ಬರೆಯಲಾಗಿದ್ದರೂ ತನಿಖೆ ಮಾತ್ರ ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ಭಾರತದ ಪ್ರಮುಖ ವನ್ಯಜೀವಿಗಳಾದ ಹುಲಿ ಮತ್ತು ಚಿರತೆಯ ಶವಗಳನ್ನು ರಹಸ್ಯವಾಗಿ ಹೂಳುವಲ್ಲಿ ಭಾಗಿಯಾಗಿರುವ ಎಲ್ಲರ ವಿವರಗಳನ್ನು ನಾವು ಒದಗಿಸಿದ್ದೇವೆ. ಚಿರತೆಯ ತಲೆ ಮತ್ತು ಪಾದಗಳನ್ನು ಕಳ್ಳ ಬೇಟೆಗಾರರು ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ವೀಕ್ಷಕರು ಮಾತ್ರ ಘಟನೆಯ ಬಲಿಪಶುಗಳಾಗಿದ್ದಾರೆ ಎಂದು ಜೋಸೆಫ್ ಹೂವರ್ ಆಕ್ರೋಶ ಹೊರಹಾಕಿದ್ದಾರೆ.
ಹುಲಿ ಮತ್ತು ಚಿರತೆಯ ರಹಸ್ಯವಾಗಿ ಹೂತಿದ್ದ ಮಾಹಿತಿ ಹೊರ ಬರುತ್ತಿದ್ದಂತೆ ಘಟನೆಯ ಸಾಕ್ಷಿಗಳಾಗಿದ್ದ ಅರಣ್ಯ ವೀಕ್ಷಕರನ್ನು ಆರ್ಎಫ್ಒ ಪುಟ್ಟರಾಜು ಕೆಲಸದಿಂದ ವಜಾಗೊಳಿಸಿದ್ದಾರೆ. ಕಳ್ಳತನದ ಆರೋಪ ಹೊರಿಸಿ 6 ಮಂದಿಯನ್ನು ವಜಾ ಮಾಡಿದ್ದು, ಕಾಡು ಕಾಯುವವರಿಗೆ ಅಧಿಕಾರಿಗಳು ಬಲಿಪಶು ಮಾಡಿದ್ದಾರೆ ಎಂದು ಕಿಡಿಕಾರಿದರು.
ಆರ್ಎಫ್ಒ ಪುಟ್ಟರಾಜು ಮತ್ತು ನಮ್ಮನ್ನು ನಾರ್ಕೋ ಅನಾಲಿಸಿಸ್ ಪರೀಕ್ಷೆಗೆ ಒಳಪಡಿಸಿ ಸತ್ಯಾಂಶವನ್ನು ಸರ್ಕಾರ ಹೊರತೆಗೆಯಬೇಕು. ಹುಲಿ ಮತ್ತು ಚಿರತೆ ಶವಗಳನ್ನು ಅಕ್ರಮವಾಗಿ ವಿಲೇವಾರಿ ಮಾಡಿದ ಎಲ್ಲಾ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಬೇಕು. ಆರ್ಎಫ್ಒ ಅವರು ಹುಲಿ ಮತ್ತು ಚಿರತೆಯ ಶವವನ್ನು ರಹಸ್ಯವಾಗಿ ಹೂಳದಿರುವುದು ಸಾಬೀತಾದಾರೇ ನಾನು ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸುತ್ತೇನೆ ಎಂದು ಹೂವರ್ ಸವಾಲು ಎಸೆದಿದ್ದಾರೆ.
ಘಟನೆಯ ಸಂಕ್ಷಿಪ್ತ ಮಾಹಿತಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊಳೆಯೂರು ವಲಯದಲ್ಲಿ 2019-20ರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಹುಲಿ, ಬೇಟೆಗಾರರು ಕೊಂದಿದ್ದ ಚಿರತೆಯನ್ನು ಅಲ್ಲಿನ ಆರ್ಎಫ್ಒ ಮೇಲಾಧಿಕಾರಿಗಳ ಗಮನಕ್ಕೆ ತರದೆ ರಹಸ್ಯವಾಗಿ ವಿಲೇವಾರಿ ಮಾಡಿದ್ದಾರೆ. ಜೊತೆಗೆ, ಘಟನೆಗೆ ಸಾಕ್ಷಿಯಾಗಿದ್ದ 6 ಮಂದಿ ಅರಣ್ಯ ವೀಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎನ್ನುವುದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಅವರ ಆರೋಪವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications