ಬಂಡೀಪುರದ ಕಾಡಿನೊಳಗೆ ರಾತ್ರಿ ಬೃಹತ್ ವಾಹನಗಳ ಸಂಚಾರ: ರೈತರ ಪ್ರತಿಭಟನೆ
ಚಾಮರಾಜನಗರ, ನವೆಂಬರ್ 27: ಗ್ರೀನ್ ಟ್ಯಾಕ್ಸ್ ರದ್ಧತಿ (ಹಸಿರು ಸುಂಕ), ಕೇರಳ ತ್ಯಾಜ್ಯ ಗುಂಡ್ಲುಪೇಟೆ ಭಾಗಕ್ಕೆ ಸಾಗಣೆ ತಡೆಯುವುದು, ಅತಿ ಭಾರ ಹೊತ್ತ ವಾಹನಗಳ ಸಂಚಾರ ನಿಷೇಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ (ವಾಸುದೇವ ಮೇಟಿ ಬಣ)ದ ವತಿಯಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಕರ್ನಾಟಕ-ಕೇರಳ ಗಡಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಜಮಾವಣೆಗೊಂಡ ಸಂಘದ ಪದಾಧಿಕಾರಿಗಳು, ಆರ್ಟಿಒ, ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಉಪಾಧ್ಯಕ್ಷರಾದ ಡಾ.ಗುರುಪ್ರಸಾದ್ ಮಾತನಾಡಿ, ಕೆ ಎ 10 ಸ್ಥಳೀಯ ವಾಹನವಾಗಿದ್ದು, ಅದಕ್ಕೆ ಗ್ರೀನ್ ಟ್ಯಾಕ್ಸ್ ಹಾಕಬಾರದು. ಆದರೆ ಅರಣ್ಯ ಇಲಾಖೆಯವರು ಅದಕ್ಕೂ ಕೂಡ ಗ್ರೀನ್ ಟ್ಯಾಕ್ಸ್ ವಸೂಲಿ ಮಾಡಿರುವುದು ಖಂಡನೀಯ. ಇನ್ನು 16 ರಿಂದ 18 ಚಕ್ರದ ಬೃಹತ್ ವಾಹನಗಳನ್ನು ಬಂಡೀಪುರದ ಕಾಡಿನೊಳಗೆ ಸಂಚರಿಸಲು ಅವಕಾಶ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ ಆರೋಪಿಸಿದ್ದಾರೆ.
ಕೇರಳಕ್ಕೆ ಕಟ್ಟಡ ಹಾಗೂ ಕಾರ್ಖಾನೆ ನಿರ್ಮಾಣ ಸಾಮಗ್ರಿ ಸಾಗಿಸುವ 16ರಿಂದ 18 ಚಕ್ರದ ವಾಹನಗಳು ಬಂಡೀಪುರದ ಕಾಡಿನೊಳಗೆ ಸಂಚರಿಸಲು ಅವಕಾಶ ಮಾಡಬಾರದು. ಸ್ಥಳೀಯವಾಗಿ (ಕೆ.ಎ-10) ನೋಂದಣಿಯಾಗಿರುವ ವಾಹನಗಳಿಗೆ ನಿಯಮ ಮೀರಿ ಗ್ರೀನ್ ಟ್ಯಾಕ್ಸ್ ಪಡೆಯುವುದನ್ನು ಕೈಬಿಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಎರಡು ಬಾರಿ ಪತ್ರ ಬರೆದರೂ ಲೋಕೋಪಯೋಗಿ ಇಲಾಖೆಯವರು ಅತಿ ಭಾರ ಹೊತ್ತ ವಾಹನಗಳಿಗೆ ದಂಡ ವಿಧಿಸುವಲ್ಲಿ ವಿಫಲವಾಗಿದ್ದಾರೆ. ಈ ವಿಷಯದಲ್ಲಿ ನೀವು ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಆರ್ಟಿಒ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನಾ ಕಾವು ಹೆಚ್ಚಾಗುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳದಲ್ಲಿ ಜಮಾಗೊಂಡರು. ಬಂಡೀಪುರದಲ್ಲಿ 16 ಚಕ್ರದ ವಾಹನಗಳಿಗೆ ಪ್ರವೇಶ ನೀಡುವುದಿಲ್ಲ. ರಸ್ತೆಯ ಭಾರ ಮಿತಿಗೆ ತಕ್ಕಂತೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಆರ್ಟಿಒ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದರು.
ಅಲ್ಲದೇ ವಾಹನ ಸಂಚಾರ ನಿಷೇಧದ ನಡುವೆ ರಾತ್ರಿ ಒಂಬತ್ತರ ನಂತರ ಹಣ ಪಡೆದು ವಾಹನಗಳನ್ನು ಬಿಡುವ ಆರೋಪದ ಬಗ್ಗೆ ಪರಿಶೀಲಿಸಿ ಇನ್ನೆರಡು ದಿನದಲ್ಲಿ ಕ್ರಮ ವಹಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದರು. ಡಿಸೆಂಬರ್ 6ರೊಳಗೆ ರೈತ ಮುಖಂಡರ ಸಭೆ ಕರೆದು ಲೋಪದೋಷ ಸರಿಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಬಳಿಕ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು. ಮದ್ದೂರು ಚೆಕ್ ಪೋಸ್ಟ್ ಬಳಿ ರಸ್ತೆ ತಡೆ ನಡೆಸಿದ್ದರಿಂದ ಕರ್ನಾಟಕ- ಕೇರಳ ಗಡಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂದಕೆರೆ ಸಂಪತ್ತು, ಜಿಲ್ಲಾ ಕಾರ್ಯಾಧ್ಯಕ್ಷ ಬೆಟ್ಟದಮಾದಳ್ಳಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ಹಾಲಹಳ್ಳಿ ಮಹೇಶ್, ತಾಲ್ಲೂಕು ಕಾರ್ಯದರ್ಶಿಬೆಟ್ಟಹಳ್ಳಿ ಗುರು, ಹಸಿರು ಸೇನೆ ಅಧ್ಯಕ್ಷ ಹಿರಿಕಾಟಿ ಚಿಕ್ಕಣ್ಣ, ತಾಲೂಕು ಸಂಘಟನಾ ಕಾರ್ಯದರ್ಶಿ ಶಿಂಡನಪುರ ರಘು, ನಂದೀಶ, ಶಂಭುಲಿಂಗಪ್ಪ, ವೃಷಬೇಂದ್ರ, ಸೀಗೆವಾಡಿ ಮಹೇಶ್, ಸೋಮು, ಕೂತನೂರು ಮಣಿಕಂಠ, ಬೆಟ್ಟಳ್ಳಿ ಪ್ರಭು, ನಾಗೇಂದ್ರ, ಕಬ್ಬಹಳ್ಳಿ ಪ್ರಕಾಶ್ ಹಾಜರಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications