ಕೊಳ್ಳೇಗಾಲ: ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡ ಅರ್ಚಕರು
ಚಾಮರಾಜನಗರ, ಜೂನ್, 01: ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ.
ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ(65), ಶಿವಕುಮಾರಸ್ವಾಮಿ(40) ಹಾಗೂ ನಂಜುಂಡಸ್ವಾಮಿ(32) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ಪಡೆಯಲು ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದು, ದೀಕ್ಷೆ ಕೊಡಲು ಒಂದು ಗುಂಪು ದೇಗುಲದ ಹೊರಗೆ ತಯಾರಿ ಮಾಡಿಕೊಳ್ಳುವಾಗ ಈ ವೇಳೆ ಮತ್ತೊಂದು ಗುಂಪು ದೀಕ್ಷೆ ನಾವು ಕೊಡುತ್ತೇವೆ ಎಂದು ತಡೆ ಒಡ್ಡಿದೆ. ಆಗ ನಂಜುಂಡಸ್ವಾಮಿ ಮತ್ತು ಶಂಕರಪ್ಪನ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಈ ಘಟನೆ ಹೊಡೆದಾಟದ ಹಂತಕ್ಕೂ ಹೋಗಿದೆ.
ವಿಪರ್ಯಾಸ ಎಂದರೆ ಸಿದ್ದಪ್ಪಾಜಿ ಬೆತ್ತ ಮತ್ತು ತ್ರಿಶೂಲಗಳನ್ನು ಹಲ್ಲೆಗೆ ಆಯುಧವಾಗಿ ಬಳಸಿಕೊಂಡಿದ್ದು, ಶಂಕರಪ್ಪನ ತೊಡೆ ಮೂಳೆ ಮತ್ತು ಶಿವಕುಮಾರ್ ತಲೆಗೆ ಹಾಗೂ ಮತ್ತೊಂದು ಗುಂಪಿನ ನಂಜುಂಡಸ್ವಾಮಿಗೆ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು ಈ ಘಟನೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಬಡಿದಾಡಿಕೊಂಡ KSRTC ಬಸ್ ಕಂಡಕ್ಟರ್, ಕಾನ್ಸ್ಟೇಬಲ್: ಟಿಕೆಟ್ ವಿಚಾರಕ್ಕೆ ಜಗಳವಾಗಿ ಸಾರ್ವಜನಿಕವಾಗಿ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಬಸ್ ಕಂಡಕ್ಟರ್ ಹೊಡೆದಾಡಿಕೊಂಡ ಘಟನೆ ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಾಗಾದರೆ ಈ ಸಂಘರ್ಷ ನಡೆಯಲು ಕಾರಣವಾದ್ರೂ ಏನು? ಇಲ್ಲಿದೆ ನೋಡಿ ಮಾಹಿತಿ.
ಗುಂಡ್ಲುಪೇಟೆ ಡಿಪೋದ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಕೊಟ್ರೇಶ್ ಹೊಡೆದಾಡಿಕೊಂಡಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ಕೊಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಲಾಟೆ ನಡೆದಿದ್ದು ಯಾಕೆ?: ಕೊಟ್ರೇಶ್ ಕುಟುಂಬ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಬಳಿಕ, ಬೆಟ್ಟದಿಂದ ಗುಂಡ್ಲುಪೇಟೆಗೆ ವಾಪಾಸ್ ಆಗುವ ವೇಳೆ ಕೊಟ್ರೇಶ್ ಅವರ ಚಿಕ್ಕಮ್ಮ ಮುಂದೆ ಕುಳಿತಿದ್ದರೇ ಕೊಟ್ರೇಶ್ ಹಿಂದೆ ಕುಳಿತಿದ್ದರು.
ಕೊಟ್ರೇಶ್ ಅವರ ಟಿಕೆಟ್ ಅನ್ನು ಚಿಕ್ಕಮ್ಮ ತೆಗೆದುಕೊಂಡಿದ್ದರು. ಇದು ತಿಳಿಯದೇ ಕೊಟ್ರೇಶ್ ಕೂಡ ಟಿಕೆಟ್ ಪಡೆದುಕೊಂಡಿದ್ದಾರೆ. ಬಸ್ನಿಂದ ಇಳಿದ ಬಳಿಕ ಎರಡು ಬಾರಿ ಟಿಕೆಟ್ ಪಡೆದ ವಿಚಾರಕ್ಕೆ ಕಂಡಕ್ಟರ್ ಲೋಕೇಶ್ ಹಾಗೂ ಕಾನ್ಸ್ಟೇಬಲ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ, ವಿಕೋಪಕ್ಕೆ ತಿರುಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾನ್ಸ್ಟೇಬಲ್ ಸಿವಿಲ್ ಡ್ರೆಸ್ನಲ್ಲಿದ್ದ ಕಾರಣ ಸಾರಿಗೆ ಸಂಸ್ಥೆಯ ಇತರೆ ಚಾಲಕರು, ಕಂಡಕ್ಟರ್ಗಳು ಕೂಡ ಕೊಟ್ರೇಶ್ಗೆ ಹೊಡೆದಿರುವುದು ಈ ವೀಡಿಯೋದಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಗುಂಡ್ಲುಪೇಟೆ ಠಾಣೆಯಲ್ಲಿ ಇಬ್ಬರೂ ದೂರು-ಪ್ರತಿದೂರು ಕೊಟ್ಟಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರೆಬೇಕಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications