ಅರಣ್ಯ ಅಧಿಕಾರಿಗಳಿಂದಲೇ ವಾಹನಶೆಡ್ ಗೆ ಕಾಡುಮರ ಬಳಕೆ!
ಚಾಮರಾಜನಗರ, ಸೆಪ್ಟೆಂಬರ್ 6: ಅರಣ್ಯದಲ್ಲಿರುವ ಗಿಡಗಳನ್ನು ಕಡಿದು, ಅಧಿಕಾರಿಯೊಬ್ಬರು ವಾಹನ ಶೆಡ್ ನಿರ್ಮಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನಡೆದಿದೆ.
ಕುಂದಕೆರೆ ಅರಣ್ಯ ವಲಯದ ವಲಯಾರಣ್ಯಾಧಿಕಾರಿ ಕಚೇರಿಯ ವಾಹನಶೆಡ್ ನಿರ್ಮಿಸಲು ಬೆಲೆ ಬಾಳುವ ಕಾಡು ಜಾತಿಯ ಮರಗಳನ್ನು ಬಳಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.[ಬಂಡೀಪುರದಲ್ಲಿ ಅರಣ್ಯಾಧಿಕಾರಿಗಳಿಗೆ ಜಿಂಕೆ ಮಾಂಸ, ಮದ್ಯ ಪೂರೈಸಿದರೆ?]

ಕುಂದಕೆರೆ ವಲಯ ಅರಣ್ಯ ವಲಯ ಕಚೇರಿಯು ಲೊಕ್ಕೆರೆ ಅರಣ್ಯದ ಪ್ರದೇಶದಲ್ಲಿದ್ದು, ಇಲ್ಲಿ ಕುಂದಕೆರೆ ವಲಯ ಅರಣ್ಯಾಧಿಕಾರಿಯ ಕಚೇರಿ ಮತ್ತು ವಸತಿಗೃಹ ಎರಡಕ್ಕೂ ಈ ಕಟ್ಟಡವನ್ನು ಬಳಸಲಾಗುತ್ತಿದೆ. ಇಲ್ಲಿ ವಾಹನಶೆಡ್ ನಿರ್ಮಿಸಲು ಮತ್ತು ಕಚೇರಿ ಬಳಕೆಯ ಕೆಲವು ಪೀಠೋಪಕರಣಗಳನ್ನು ಕಾಡು ಜಾತಿಯ ಹಸಿ ಮರಗಳನ್ನು ಕಡಿದು ನಿರ್ಮಿಸಲಾಗಿದೆ.
ಹುಲಿ ಯೋಜನೆ ವ್ಯಾಪ್ತಿಯಲ್ಲಿ ಈ ರೀತಿ ಮಾಡುವುದು ಅಪರಾಧವಾಗಿದೆ. ಈ ಬಗ್ಗೆ ಸೂಕ್ತ ಕಾನೂನಿನ ತಿಳಿವಳಿಕೆ ಇದ್ದರೂ ವಲಯ ಅರಣ್ಯಾಧಿಕಾರಿ ಈ ಕಾರ್ಯ ಎಸಗಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ.[ಬಂಡೀಪುರದಲ್ಲಿ 'ಪ್ರಿನ್ಸ್' ಹುಲಿ ಕಂಡಾಗ ಕುಪ್ಪಳಿಸಿದ ಮನ]

ಹುಲಿ ಯೋಜನೆ ಜಾರಿಯಲ್ಲಿರುವ ಅರಣ್ಯ ಪ್ರದೇಶಗಳಲ್ಲಿ ಅರಣ್ಯದೊಳಗಿನ ಸಂಪನ್ಮೂಲಗಳನ್ನು ಬಳಸಲು ಅನುಮತಿಯೇ ಇಲ್ಲ ಎಂಬ ಸಂಗತಿಯನ್ನು ಈ ಹಿಂದೆ ಅರಣ್ಯಾಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಹುಲಿ ಯೋಜನೆ ವ್ಯಾಪ್ತಿಯಲ್ಲಿ ಅರಣ್ಯ ಪ್ರವೇಶಿಸಬೇಕಾದಲ್ಲಿ ಅಧಿಕಾರಿಗಳ ಅನುಮತಿ ಕಡ್ಡಾಯ. ಬಂಡೀಪುರ ಅರಣ್ಯ ವಲಯದಲ್ಲಿ ಕೆಲ ಸಮಯದ ಹಿಂದೆ ಅನುಮತಿ ಇಲ್ಲದೇ ಅರಣ್ಯ ಪ್ರವೇಶಿಸಿದ್ದ ಜೋಡಿಯೊಂದನ್ನು ಬಂಧಿಸಿ, ಅರಣ್ಯಾಧಿಕಾರಿಗಳು ದಂಡ ವಿಧಿಸಿದ್ದರು.[ಬಂಡೀಪುರದಲ್ಲಿ ಸರಸ-ಸಲ್ಲಾಪದಲ್ಲಿದ್ದ ಪ್ರೇಮಿಗಳ ಮೇಲೆ ಕೇಸು]
ಸಾರ್ವಜನಿಕರಿಗೆ ಕಾನೂನಿನ ಪಾಠ ಮಾಡುವ ಅಧಿಕಾರಿಗಳೆ ಮಾಡಿರುವ ಈ ಕಾರ್ಯದ ಬಗ್ಗೆ ಕಾಡಂಚಿನ ಚಿರಕನಹಳ್ಳಿ, ಕಡಬೂರು, ಕುಂದಕೆರೆ ಮುಂತಾದ ಗ್ರಾಮಗಳ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳ ಮೇವಿಗಾಗಿ ಇನ್ನಿತರ ಕೆಲಸಗಳಿಗಾಗಿ ಅರಣ್ಯ ಹೊಕ್ಕವರನ್ನು ಬಂಧಿಸುವ ಅಧಿಕಾರಿಗಳ ಈ ಕಾರ್ಯ ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications