ಚಾಮರಾಜನಗರ: ಕೊರೊನಾ ಸೋಂಕಿಗೆ ಮಾಜಿ ಶಾಸಕ ಪಿ.ಗುರುಸ್ವಾಮಿ ಸಾವು
ಚಾಮರಾಜನಗರ, ಆಗಸ್ಟ್ 19: ಕೊರೊನಾ ವೈರಸ್ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಮುಂದುವರೆಸಿದ್ದು, ಕೇವಲ ಜನಸಾಮಾನ್ಯರಲ್ಲದೆ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಗಳು, ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳಿಗೂ ಸಹ ಕೊರೊನಾ ರೋಗ ಪತ್ತೆಯಾಗುತ್ತಿದೆ.
Recommended Video
ಈ ಮಹಾಮಾರಿ ಕೊರೊನಾ ಸೋಂಕಿಗೆ ಚಾಮರಾಜನಗರ ಮಾಜಿ ಶಾಸಕ ಪಿ.ಗುರುಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು.
ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ವೈರಸ್ ಪಾಸಿಟಿವ್
ಕೊರೊನಾ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾಜಿ ಶಾಸಕರು ನಿಧನ ಹೊಂದಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಏಕೈಕ ಬಿಜೆಪಿ ಶಾಸಕರಾಗಿದ್ದರು. 1999 ರಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರುಸ್ವಾಮಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದರು.