ಬಿ.ಆರ್. ಹಿಲ್ಸ್ನಲ್ಲಿ ಹುಲಿಗಳ ಗಾಂಭೀರ್ಯದ ನಡಿಗೆ
ಚಾಮರಾಜನಗರ, ಜುಲೈ 28: ವರುಣನ ಕೃಪೆಯಿಂದ ಮಲೆ ಮಹದೇಶ್ವರ ಬೆಟ್ಟವು ಹಸಿರು ಹಚ್ಚಡವನ್ನು ಹೊದ್ದು ಮಲಗಿದ್ದು, ಹಸಿರ ವನದಲ್ಲಿ ವನ್ಯ ಮೃಗಗಳು ಸಂಭ್ರಮದಿಂದ ಓಡಾಡುತ್ತಿವೆ. ಇವುಗಳ ನಡುವೆ ಇದೀಗ ವನರಾಜ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದು, ಅಲ್ಲೊಮ್ಮೆ, ಇಲ್ಲೊಮ್ಮೆ ನೋಡುಗರ ಕಣ್ಣಿಗೆ ಸಿಕ್ಕಿ ಬೀಳುತ್ತಿದ್ದಾನೆ. ಈ ಅಪರೂಪದ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿ ಗಮನ ಸೆಳೆಯುತ್ತಿವೆ.
ಸಾಮಾನ್ಯವಾಗಿ ಆಗೊಮ್ಮೆ, ಈಗೊಮ್ಮೆ ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿಗಳು ಕಾಣಿಸುವುದು ಹೊಸತೇನಲ್ಲ. ಆದರೆ ಇದೀಗ ಹಸಿರ ಹಚ್ಚಡದಿಂದ ಕಂಗೊಳಿಸುವ ದಟ್ಟ ಅರಣ್ಯದ ನಡುವೆ ಜತೆ ಜತೆಯಾಗಿ ಅದರಲ್ಲೂ ಒಂದೇ ಕಡೆಯಲ್ಲಿ ನಾಲ್ಕು ಹುಲಿಗಳು ನೋಡುಗರ ಕಣ್ಣಿಗೆ ಕಾಣಿಸಿರುವುದು ಖುಷಿಯ ವಿಚಾರವಾಗಿದೆ. ಕೊರೊನಾ ಲಾಕ್ಡೌನ್ ತೆರವು ನಂತರ ಪ್ರವಾಸಿಗರು ಬಿಳಿಗಿರಿರಂಗನ ಬೆಟ್ಟದತ್ತ ಮುಖ ಮಾಡಿದ್ದು, ಹೀಗೆ ಬರುವವರು ಇಲ್ಲಿನ ನಿಸರ್ಗವನ್ನು ಕಣ್ತುಂಬಿಸಿಕೊಂಡು ಸಂಭ್ರಮಿಸುತ್ತಾರೆ. ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆ ಸುಂದರ ದೃಶ್ಯಗಳನ್ನು ಸೆರೆಹಿಡಿಯುತ್ತಾ ಸಾಗುತ್ತಾರೆ.

ದೊಡ್ಡಸಂಪಿಗೆ ಬಳಿ ಹುಲಿಗಳು ಪ್ರತ್ಯಕ್ಷ
ಈ ನಡುವೆ ಅರಣ್ಯದಂಚಿನಲ್ಲಿ ವಾಸವಿರುವ ಗಿರಿಜನರು ತೆರಳುತ್ತಿದ್ದ ವೇಳೆ ದೊಡ್ಡಸಂಪಿಗೆ ಬಳಿ ನಾಲ್ಕು ಹುಲಿಗಳು ಸಂಚಾರ ಮಾಡುತ್ತಿರುವ ದೃಶ್ಯ ಕಂಡು ಬಂದಿದ್ದು, ಅದನ್ನು ಅವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಅದು ಈಗ ವೈರಲ್ ಆಗಿದೆ. ಈ ಪ್ರದೇಶಗಳು ನಿರ್ಬಂಧಿತ ಪ್ರದೇಶವಾಗಿದ್ದು, ಅದರಲ್ಲೂ ಐತಿಹಾಸಿಕ ದೊಡ್ಡಸಂಪಿಗೆ ಇರುವ ಪ್ರದೇಶಕ್ಕೆ ಪ್ರವಾಸಿಗರಿಗೆ ಅವಕಾಶವಿಲ್ಲ. ಈ ಪ್ರದೇಶದಲ್ಲಿಯೇ ಹುಲಿಗಳು ಕಂಡು ಬಂದಿದೆ. ಇದು ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿಗಳ ಸಂತತಿ ಗಣನೀಯವಾಗಿ ಹೆಚ್ಚುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಬಿಳಿಪಟ್ಟೆ ಹುಲಿಗಳ ಅವಾಸ ತಾಣ
ಇನ್ನು ಬಿಳಿಗಿರಿರಂಗನಬೆಟ್ಟದ ಬಗ್ಗೆ ಹೇಳಬೇಕಾದರೆ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15 ಕಿ.ಮೀ ದೂರದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 1552 ಮೀಟರ್ ಎತ್ತರದಲ್ಲಿದ್ದು, ಸುಮಾರು 750 ಚದರ ಕಿ.ಮೀ. ವಿಸ್ತಾರವನ್ನು ಹೊಂದಿದೆ. ಇಲ್ಲಿನ ಮುಖ್ಯ ವಿಶೇಷತೆ ಏನೆಂದರೆ ಬಿಳಿಪಟ್ಟೆಗಳ ಹುಲಿಗಳ ಹಾಗೂ ಏಷ್ಯಾದ ಆನೆಗಳ ವಾಸಕ್ಕೆ ಇದು ಯೋಗ್ಯ ತಾಣವಾಗಿದೆ.

420ಕ್ಕೂ ಅಧಿಕ ಪಕ್ಷಿ ಸಂಕುಲಗಳು
ಅರಣ್ಯದಲ್ಲಿ ಶ್ರೀಗಂಧ, ಹೊನ್ನೆ, ಮತ್ತಿ, ಬೂರುಗ, ಬೀಟೆ, ಬನ್ನಿ ಮೊದಲಾದ ಅಮೂಲ್ಯ ಮರಗಳಲ್ಲದೆ ಐತಿಹಾಸಿಕ ದೊಡ್ಡ ಮತ್ತು ಚಿಕ್ಕ ಸಂಪಿಗೆ ಇಲ್ಲಿನ ಆಕರ್ಷಣೆಯಾಗಿದೆ. ಹುಲಿ, ಚಿರತೆ, ಕರಡಿ, ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ಕಾಡು ಪ್ರಾಣಿಗಳು ಹೀಗೆ ಸುಮಾರು 420ಕ್ಕೂ ಅಧಿಕ ಪಕ್ಷಿ ಸಂಕುಲಗಳು ಇಲ್ಲಿವೆ ಎಂದು ಹೇಳಲಾಗುತ್ತಿದೆ.
Recommended Video

ಹುಲಿ ಸಂತತಿ ಕಾಪಾಡುವ ಕಾರ್ಯ
ಈಗಾಗಲೇ ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಗಿರುವುದರಿಂದ, ಹುಲಿ ಸಂತತಿಯನ್ನು ಕಾಪಾಡುವ ಕಾರ್ಯ ನಡೆಯುತ್ತಿದೆ. ಇದೀಗ ಹುಲಿಗಳು ಅಲ್ಲಲ್ಲಿ ಕಾಣುತ್ತಿರುವುದು ನೋಡುಗರಿಗೆ ಖುಷಿ ತಂದರೂ, ಅರಣ್ಯದಂಚಿನ ಜನರಲ್ಲಿ ಭಯವೂ ಇಲ್ಲದಿಲ್ಲ. ಅದೇನೇ ಇರಲಿ ಒಟ್ಟಾರೆ ಬಿ.ಆರ್. ಹಿಲ್ಸ್ ಇದೀಗ ಹುಲಿಗಳಿಂದಾಗಿ ಗಮನ ಸೆಳೆಯುತ್ತಿರುವುದಂತು ಸತ್ಯ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications