ನಿಜಗುಣ ಮಠದಲ್ಲಿ ಉಚಿತ ಆಯುರ್ವೇದ ತಪಾಸಣಾ ಶಿಬಿರ: ಏನಿದರ ವಿಶೇಷ?
ಚಾಮರಾಜನಗರ, ಅಕ್ಟೋಬರ್ 21: ಶ್ರೀ ನಿಜಗುಣ ಫೌಂಡೇಶನ್, ಗೋ ಸೇವಾ ಕರ್ನಾಟಕದ ದಕ್ಷಿಣ ಪ್ರಾಂತ, ಯೂಥ್ ಫಾರ್ ಸೇವಾ ಹಾಗೂ ಆಯುಷ್ ಇಲಾಖೆ ಚಾಮರಾಜನಗರ ಇವರ ಸಹಯೋಗದೊಂದಿಗೆ ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಶ್ರೀಶಂಭುಲಿಂಗೇಶ್ವರ ಬೆಟ್ಟದ ನಿಜಗುಣ ಮಠದಲ್ಲಿ ಉಚಿತ ಆಯುರ್ವೇದ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ಆಯುರ್ವೇದ ಔಷಧಿಯ ಮಹತ್ವವನ್ನು ಸಾರಲಾಯಿತು.
ಈ ವಿಶೇಷ ತಪಾಸಣಾ ಶಿಬಿರಕ್ಕೆ ಗೋವಿನ ಪೂಜೆ ಮೂಲಕ ಚಾಲನೆ ನೀಡಲಾಯಿತು. ಶಿಬಿರದ ಬಗ್ಗೆ ಮಠದ ಶ್ರೀ ಬಾಲಷಡಕ್ಷರ ಸ್ವಾಮೀಜಿ ಮಾತನಾಡಿದರು. ಶ್ರೀಮಠದಿಂದ ಈ ಭಾಗದ ಜನರಿಗೆ ಅಗತ್ಯವಿರುವ ಮಂಡಿ ನೋವು, ಬಿಪಿ, ಶುಗರ್ ಅಸ್ತಮಾ, ಕಿಡ್ನಿ ಸ್ಟೋನ್, ಮುಖ್ಯವಾಗಿ ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ನಾಟಿ ಗೋ ಆಧಾರಿತ ಆಯುರ್ವೇದ ಔಷಧೀಯ ಚಿಕಿತ್ಸೆ ಮೂಲಕ ಸೂಕ್ತ ಪರಿಹಾರ ನೀಡುವುದಕ್ಕಾಗಿ ಪ್ರತಿ ತಿಂಗಳು 5 ನೇ ತಾರೀಕು ಮಠದ ವತಿಯಿಂದ ಹಾಗೂ ಇತರೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ ಸಂಸ್ಥೆಗಳ ಸಹಕಾರದೊಂದಿಗೆ ನಡೆಸಲಾಗುವುದೆಂದು ತಿಳಿಸಿದರು.

ಕ್ಯಾನ್ಸರ್ ತಜ್ಞ ಡಾ. ಡಿ . ಪಿ ರಮೇಶ್ ಮಾತನಾಡಿ, ಆಯುರ್ವೇದ ನಿಂತಿರುವುದೇ ನಾಟಿ ಗೋವಿನ ಹಾಲು, ಮೊಸರು, ಬೆಣ್ಣೆ, ತುಪ್ಪ , ಗೋಮೂತ್ರ, ಗೋಮಯ, ಇವುಗಳ ಆಧಾರಿತವಾಗಿಯೇ ಆಯುರ್ವೇದ ಚಿಕಿತ್ಸೆ ಇದೆ. ಯಾವುದೇ ಕಾಯಿಲೆಯ ತ್ರಿದೋಷಗಳನ್ನು ಸಾಮಾನ್ಯ ಸ್ಥಿತಿಗೆ ತಂದು ಚಿಕಿತ್ಸೆ ನೀಡಿದರೆ ಅದಕ್ಕೆ ಪರಿಹಾರ ಸಾಧ್ಯ, ಕ್ಯಾನ್ಸರ್ ಕಾಯಿಲೆಗೆ ಲಕ್ಷಾಂತರ ರೂಪಾಯಿಗಳನ್ನು ಕೊಟ್ಟು ಕಿಮೋಥೆರಪಿ, ರೇಡಿಯೋಥೆರಪಿ ಚಿಕಿತ್ಸೆ ಮಾಡಿಸಿದರೂ ಸುಧಾರಣೆ ಸಾಧ್ಯವಿಲ್ಲ ಅಲ್ಲದೇ ಯಾವುದೇ ಕಾಯಿಲೆಗೆ ಇಂಗ್ಲಿಷ್ ಮೆಡಿಸನ್ಸ್ ತೆಗೆದುಕೊಂಡರೆ ಮತ್ತೊಂದು ಕಾಯಿಲೆ ಉಚಿತವಾಗಿ ದೊರೆಯುತ್ತದೆ ಎಂದರು.
ಇನ್ನು ನಮ್ಮ ಆಯುರ್ವೇದ ಪಂಚಗವ್ಯ ಚಿಕಿತ್ಸಾ ಪದ್ಧತಿ ಮೂಲಕ ಸಂಪೂರ್ಣ ಸುಧಾರಣೆ ಸಾಧ್ಯವಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ನಾವು ಉಪಯೋಗಿಸುವ ಆಹಾರ ಪದ್ಧತಿ ಯಿಂದಲೇ ಕ್ಯಾನ್ಸರ್ ಕಾರಣವಾಗಿದೆ. ದಿನಚರ್ಯ, ಋತುಚಾರ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸರಿಯಾಗಿ ಅಳವಡಿಸಿಕೊಳ್ಳುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು ಎಂದು ತಿಳಿಸಿದರು.
ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ಆಯುರ್ವೇದ ಎಂದರೆ ಆಯಸ್ಸನ್ನು ವೃದ್ಧಿಗೊಳಿಸಿಕೊಳ್ಳುವುದು ಆಯೂರ್ ಪ್ಲಸ್ ವೇದ ಆರೋಗ್ಯವನ್ನ ಕಾಪಾಡಿಕೊಳ್ಳುವ ವಿದ್ಯೆಯೇ ಆಯುರ್ವೇದ, ನಮ್ಮ ಪರಿಸರದಲ್ಲಿ ಇರುವಂತಹ ಗಿಡಮೂಲಿಕೆಗಳಿಂದಲೇ ಅನೇಕ ರೋಗಗಳಿಗೆ ಔಷಧಿ ದೊರೆಯುತ್ತದೆ. ಆದರೆ ಅದರ ಬಳಕೆ ನಮಗೆ ಗೊತ್ತಿರುವುದಿಲ್ಲ, ಹಾಗಾಗಿ ನಮ್ಮ ಇಂದಿನವರು ಹಿತ್ತಲು ಗಿಡ ಮದ್ದಲ್ಲ ಎಂದಿದ್ದಾರೆ. ಆದರೆ ಇಂದು ಹಿತ್ತಲ ಗಿಡ ಮದ್ದು ಎಂದು ತೋರಿಸುವ ಕೆಲಸವನ್ನು ಕೈಗೆತ್ತಿಕೊಂಡಿರುವ ಮಠದ ಶ್ರೀಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಇತರ ಸಂಸ್ಥೆಗಳು ಕೈಜೋಡಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು ಎಲ್ಲರಿಗೂ ಮಠದ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿ, ಆಯುಸ್ ಇಲಾಖೆ ವತಿಯಿಂದ ಉಚಿತ ಔಷಧಿ ವಿತರಣೆ ಮಾಡಲಾಯಿತು. ಅಲ್ಲದೇ ಚಂದ್ರಶೇಖರ್ ಪಂಡಿತ್ ಅವರು ಉಚಿತವಾಗಿ ಕಣ್ಣಿನ ದೋಷಕ್ಕೆ ಔಷಧಿಯನ್ನು ನೀಡಿದರು. ನಂಜನಗೂಡಿನ ಪಾರಂಪರಿಕ ವೈದ್ಯರಾದ ಈಶ್ವರ್, ಆಯುಷ್ ಇಲಾಖೆಯ ಡಾ. ಸುಧಾ ಡಾ. ಕುಸುಮ ಆರ್ ಎಸ್ ಎಸ್ ನ ಸ್ವಯಂಸೇವಕರಾದ , ಬೆಂಡರಹಳ್ಳಿ ಶಿವಕುಮಾರ್, ಸುರೇಶ್, ಅರುಣ್ ಕುಮಾರ್ ವಕೀಲರಾದ ಮಧುಸೂದನ್ ಮುಡಿಗುಂಡ ಉದಯ ಕುಮಾರ್, ತೇರಂಬಳ್ಳಿ ನಾಗಭೂಷಣ್, ಕುಂತೂರು ಗ್ರಾಮ ಪಂಚಾಯಿತಿ ಸದಸ್ಯರಾದ ರವಿಕುಮಾರ್, ಗೋ ಸೇವಾ ಘಟಕದ ಮಹಲಿಂಗ, ನೈಸರ್ಗಿಕ ಕೃಷಿಕ ರೇಚಣ್ಣ, ಸತ್ತೆಗಾಲ ರವಿಶಂಕರ್, ಇನ್ನು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications