ಚಾಮರಾಜನಗರ: ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ವಿಧಿವಶ
ಚಾಮರಾಜನಗರ, ಅಕ್ಟೋಬರ್ 11: ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಚಾಮರಾಜನಗರದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ವಯೋಸಹಜವಾಗಿ ವಿಧಿವಶರಾಗಿದ್ದಾರೆ.
ಅಕ್ಟೋಬರ್ 5 ರಂದು 91ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಲಲಿತ ಟ್ಯಾಗೆಟ್ ಅವರು ವಯೋಸಹಜವಾಗಿ ಕೊನೆಯುಸಿರೆಳೆದಿದ್ದಾರೆ. ಲಲಿತ ಟ್ಯಾಗೆಟ್ ಅವರ ಅಂತ್ಯಕ್ರಿಯೆ ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಜಿಲ್ಲೆಯ ಗಂಗಮತಸ್ಥರ ಬೀದಿಯಲ್ಲಿ ವಾಸವಾಗಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿರುವ ಲಲಿತಾ ಟಾಗೆಟ್ ಅವರ ಅಂತಿಮ ದರ್ಶನದಲ್ಲಿ ನೂರಾರು ಮಂದಿ ಭಾಗಿಯಾಗಲಿದ್ದಾರೆ.
ಲಲಿತಾ ಟಾಗೆಟ್ ಅವರು ತಮ್ಮ 14ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದ ಘೋಷಣೆಗಳಿಂದ ಸ್ಪೂರ್ತಿ ಪಡೆದು ಸ್ವಾತಂತ್ಯ ಸಂಗ್ರಾಮ ಚಳವಳಿಗೆ ಧುಮುಕಿದ್ದರು. ಕುಟುಂಬಸ್ಥರ ಮಾತು ಕೇಳದೆ ಎಲ್ಲರ ವಿರೋಧದ ನಡುವೆ ಸ್ವಾತಂತ್ರ್ಯ ಹೋರಾಟ ಆರಂಭಿಸಿದ್ದರು. ಬ್ರಿಟಿಷರ ವಿರುದ್ಧದ ಹೋರಾಟದ ಮೆರವಣಿಗೆಗಳಲ್ಲಿ ಭಾಗವಹಿಸಿದ್ದ ಲಲಿತಾ ಟಾಗೆಟ್ ಅವರು, ಏರು ಧ್ವನಿಯಲ್ಲಿ ಘೋಷಣೆಗಳನ್ನು ಕೂಗಿ ಎಲ್ಲರ ಗಮನ ಸೆಳೆದಿದ್ದರು.

ಕುಟುಂಬಸ್ಥರು ಲಲಿತಾ ಟಾಗೆಟ್ ಅವರ ಹೋರಾಟಕ್ಕೆ ತೀವ್ರವಾಗಿ ವಿರೋಧಿಸುತ್ತಿದ್ದರು. ಲಲಿತಾ ಟಾಗೆಟ್ ಅವರ ತಾಯಿ ಮನೆಯಲ್ಲಿ ಕೂಡಿ ಹಾಕಿದ್ದರೂ ಕೂಡ ಟಾಗೆಟ್ ಅವರು ಮನೆಯ ಮೇಲ್ಛಾವಣಿಯಿಂದ ಹೊರಗೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಸ್ವಾತಂತ್ರ್ಯ ಹೋರಾಟದ ಪ್ರತಿಭಟನೆ, ಮೆರವಣಿಗೆಗಳಲ್ಲಿ ಮುಂದಿರುತ್ತಿದ್ದ ಲಲಿತಾ ಟಾಗೆಟ್ ಅವರು ಕೆಲವೊಮ್ಮೆ ಪೊಲೀಸರ ಲಾಠಿಗಳನ್ನು ಕಿತ್ತೆಸೆಯುತ್ತಿದ್ದರು ಎನ್ನುವುದನ್ನು ಹಲವಾರು ಮಂದಿ ನೆನಪಿಸಿಕೊಳ್ಳುತ್ತಾರೆ.
ಸ್ವಾತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದ ಲಲಿತಾ ಟಾಗೆಟ್ ಅವರನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾಡಳಿತ ಸೇರಿದಂತೆ ಜನಾರ್ದನ ಪ್ರತಿಷ್ಠಾನ ಹಾಗೂ ಇತರ ಸಂಘ ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದ್ದರು. ಇದು ನಮ್ಮ ದೇಶ, ಇಲ್ಲಿನ ಜನರು ನಮ್ಮವರು, ವೈರತ್ವ ಮರೆತು ಎಲ್ಲರೂ ಒಂದಾಗಿ ಬಾಳಬೇಕು ಎನ್ನುವುದು ಲಲಿತಾ ಟಾಗೆಟ್ ಅವರ ಆಶಯವಾಗಿತ್ತು. ತಮ್ಮ 90ನೇ ವಯಸ್ಸಿನಲ್ಲೂ ಕೂಡ ಯುವ ಜನತೆಯನ್ನು ಮೀರಿಸುವ ಉತ್ಸಾಹ ಹೊಂದಿದ್ದರು. ಸದ್ಯ ಅವರ ಅಗಲಿಕೆಯಿಂದ ಚಾಮರಾಜನಗರದ ಗಂಗಮತಸ್ಥರ ಬೀದಿಯಲ್ಲಿ ಮೌನ ಆವರಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications