ಚಾಮರಾಜನಗರ: ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ವಿಧಿವಶ
ಚಾಮರಾಜನಗರ, ಅಕ್ಟೋಬರ್ 11: ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಚಾಮರಾಜನಗರದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ವಯೋಸಹಜವಾಗಿ ವಿಧಿವಶರಾಗಿದ್ದಾರೆ.
ಅಕ್ಟೋಬರ್ 5 ರಂದು 91ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಲಲಿತ ಟ್ಯಾಗೆಟ್ ಅವರು ವಯೋಸಹಜವಾಗಿ ಕೊನೆಯುಸಿರೆಳೆದಿದ್ದಾರೆ. ಲಲಿತ ಟ್ಯಾಗೆಟ್ ಅವರ ಅಂತ್ಯಕ್ರಿಯೆ ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಜಿಲ್ಲೆಯ ಗಂಗಮತಸ್ಥರ ಬೀದಿಯಲ್ಲಿ ವಾಸವಾಗಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿರುವ ಲಲಿತಾ ಟಾಗೆಟ್ ಅವರ ಅಂತಿಮ ದರ್ಶನದಲ್ಲಿ ನೂರಾರು ಮಂದಿ ಭಾಗಿಯಾಗಲಿದ್ದಾರೆ.
ಲಲಿತಾ ಟಾಗೆಟ್ ಅವರು ತಮ್ಮ 14ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದ ಘೋಷಣೆಗಳಿಂದ ಸ್ಪೂರ್ತಿ ಪಡೆದು ಸ್ವಾತಂತ್ಯ ಸಂಗ್ರಾಮ ಚಳವಳಿಗೆ ಧುಮುಕಿದ್ದರು. ಕುಟುಂಬಸ್ಥರ ಮಾತು ಕೇಳದೆ ಎಲ್ಲರ ವಿರೋಧದ ನಡುವೆ ಸ್ವಾತಂತ್ರ್ಯ ಹೋರಾಟ ಆರಂಭಿಸಿದ್ದರು. ಬ್ರಿಟಿಷರ ವಿರುದ್ಧದ ಹೋರಾಟದ ಮೆರವಣಿಗೆಗಳಲ್ಲಿ ಭಾಗವಹಿಸಿದ್ದ ಲಲಿತಾ ಟಾಗೆಟ್ ಅವರು, ಏರು ಧ್ವನಿಯಲ್ಲಿ ಘೋಷಣೆಗಳನ್ನು ಕೂಗಿ ಎಲ್ಲರ ಗಮನ ಸೆಳೆದಿದ್ದರು.

ಕುಟುಂಬಸ್ಥರು ಲಲಿತಾ ಟಾಗೆಟ್ ಅವರ ಹೋರಾಟಕ್ಕೆ ತೀವ್ರವಾಗಿ ವಿರೋಧಿಸುತ್ತಿದ್ದರು. ಲಲಿತಾ ಟಾಗೆಟ್ ಅವರ ತಾಯಿ ಮನೆಯಲ್ಲಿ ಕೂಡಿ ಹಾಕಿದ್ದರೂ ಕೂಡ ಟಾಗೆಟ್ ಅವರು ಮನೆಯ ಮೇಲ್ಛಾವಣಿಯಿಂದ ಹೊರಗೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಸ್ವಾತಂತ್ರ್ಯ ಹೋರಾಟದ ಪ್ರತಿಭಟನೆ, ಮೆರವಣಿಗೆಗಳಲ್ಲಿ ಮುಂದಿರುತ್ತಿದ್ದ ಲಲಿತಾ ಟಾಗೆಟ್ ಅವರು ಕೆಲವೊಮ್ಮೆ ಪೊಲೀಸರ ಲಾಠಿಗಳನ್ನು ಕಿತ್ತೆಸೆಯುತ್ತಿದ್ದರು ಎನ್ನುವುದನ್ನು ಹಲವಾರು ಮಂದಿ ನೆನಪಿಸಿಕೊಳ್ಳುತ್ತಾರೆ.
ಸ್ವಾತಂತ್ರ ಹೋರಾಟದಲ್ಲಿ ಭಾಗಿಯಾಗಿದ್ದ ಲಲಿತಾ ಟಾಗೆಟ್ ಅವರನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾಡಳಿತ ಸೇರಿದಂತೆ ಜನಾರ್ದನ ಪ್ರತಿಷ್ಠಾನ ಹಾಗೂ ಇತರ ಸಂಘ ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದ್ದರು. ಇದು ನಮ್ಮ ದೇಶ, ಇಲ್ಲಿನ ಜನರು ನಮ್ಮವರು, ವೈರತ್ವ ಮರೆತು ಎಲ್ಲರೂ ಒಂದಾಗಿ ಬಾಳಬೇಕು ಎನ್ನುವುದು ಲಲಿತಾ ಟಾಗೆಟ್ ಅವರ ಆಶಯವಾಗಿತ್ತು. ತಮ್ಮ 90ನೇ ವಯಸ್ಸಿನಲ್ಲೂ ಕೂಡ ಯುವ ಜನತೆಯನ್ನು ಮೀರಿಸುವ ಉತ್ಸಾಹ ಹೊಂದಿದ್ದರು. ಸದ್ಯ ಅವರ ಅಗಲಿಕೆಯಿಂದ ಚಾಮರಾಜನಗರದ ಗಂಗಮತಸ್ಥರ ಬೀದಿಯಲ್ಲಿ ಮೌನ ಆವರಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications