ಗಾಂಧಿ ಜಯಂತಿ: ಚಾಮರಾಜನಗರದಲ್ಲಿ ಡಿಸಿ, ಎಸ್ಪಿ, ಸ್ವಾಮೀಜಿಯಿಂದ ರಕ್ತದಾನ
ಚಾಮರಾಜನಗರ, ಅಕ್ಟೋಬರ್, 02: ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಯಂತಿ ಹಿನ್ನೆಲೆ ಆಯೋಜಿಸಿದ್ದ ರಕ್ತದಾನ ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ವಿವಿಧ ಸಂಘ-ಸಂಸ್ಥೆಗಳು ಆಯೋಜಿಸಿದ್ದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ರಕ್ತದಾನ ಮಾಡುವ ಮೂಲಕವೇ ಉದ್ಘಾಟನೆ ಮಾಡಿದ್ದಾರೆ. ಇವರಷ್ಟೇ ಅಲ್ಲದೇ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಕೆಆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದ್ದಾರೆ.

ರಕ್ತದಾನ ಮಾಡಿದ ಬಳಿಕ ಡಿಸಿ ಶಿಲ್ಪಾನಾಗ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವುದರ ಜೊತೆಗೆ ಬಡತನ, ಹಿಂಸೆ, ದಾರಿದ್ರ, ಅವಮಾನಗಳ ವಿರುದ್ಧ ಹೋರಾಡಿದರು ಎಂದು ಹೇಳಿದರು.
ಇನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಹಾಲಿನ ಉತ್ಪನ್ನಗಳಿಗೆ ಹೆಚ್ಚು ಒತ್ತು ನೀಡಿ, ಹಸಿರು ಕ್ರಾಂತಿಯನ್ನು ಮಾಡುವ ಮೂಲಕ ಆಹಾರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ, ಆದರ್ಶಗಳು ದಾರಿ ದೀಪವಾಗಿದೆ ಎಂದು ಹೇಳಿದರು.
ಕಿವಿ, ಬಾಯಿ, ಕಣ್ಣು ಮುಚ್ಚಿ ಪ್ರತಿಭಟನೆ
ಗಾಂಧಿ ಜಯಂತಿ ಹಿನ್ನೆಲೆ ಮಹಾತ್ಮ ಸಾರಿದ ಸಂದೇಶವನ್ನು ಸಾರಿ ಕಾವೇರಿಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ಅಹಿಂಸೆ ಮೂಲಕ ಮಹಾತ್ಮ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ಇಂದು ನಾವು ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ. ಕರ್ನಾಟಕಕ್ಕೆ ಕೆಟ್ಟದ್ದಾಗುವುದನ್ನು ನಾವು ನೋಡುವುದಿಲ್ಲ, ಕೇಳುವುದಿಲ್ಲ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಿ ರಾಜ್ಯದ ಜನರಿಗೆ ಸರ್ಕಾರ ಒಳ್ಳೆಯ ಸಂದೇಶ ಸಾರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇನ್ನು ಪ್ರತಿಭಟನೆ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications