ಹನೂರಲ್ಲಿ ಅರಿಶಿನದ ನಡುವೆ ಗಾಂಜಾ ಬೆಳೆದ ಆರೋಪಿಗಳ ಬಂಧನ
ಚಾಮರಾಜನಗರ, ನವೆಂಬರ್.02: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇರೆ ಕೃಷಿ ಫಸಲಿನ ನಡುವೆ ಗಾಂಜಾ ಬೆಳೆದಿದ್ದ ಮೂವರನ್ನು ಹನೂರು ಪೊಲೀಸರು ಗಾಂಜಾ ಸಹಿತ ಬಂಧಿಸಿರುವ ಘಟನೆ ನಡೆದಿದೆ.
ಜಮೀನಿನಲ್ಲಿ ಅರಿಶಿನ ಬೆಳೆಯ ಜೊತೆಗೆ ಗಾಂಜಾ ಗಿಡವನ್ನು ಬೆಳೆದಿದ್ದ ಬಗ್ಗೆ ಮಾಹಿತಿಯನ್ನಾಧರಿಸಿದ ಹನೂರು ಪೊಲೀಸರು ಬೋರೆದೊಡ್ಡಿ ಗ್ರಾಮದ ಸಿದ್ದನಾಯ್ಕ ಹಾಗೂ ಆಂಡಿಪಾಳ್ಯ ಗ್ರಾಮದ ರಾಚಪ್ಪ ಕೊತ್ತನೂರು ಗ್ರಾಮದ ನಟೇಶ್ ಎಂಬುವವರನ್ನು ಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ಹನೂರು ತಾಲೂಕಿನ ಬೊರೆದೊಡ್ಡಿ ಗ್ರಾಮದ ಮೆಳೆಕೆರೆ ಅರಣ್ಯ ಪ್ರದೇಶ ಅಂಚಿನಲ್ಲಿರುವ ಜಮೀನಿನಲ್ಲಿ ಅರಿಶಿನ ಬೆಳೆ ಫಸಲಿನ ನಡುವೆ ಸಿದ್ದನಾಯ್ಕ ಎಂಬಾತನು ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ಇನ್ಸ್ ಪೆಕ್ಟರ್ ಮೋಹಿತ್ ಸಹದೇವ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಆತನಿಂದ 1 ಕೆಜಿ 600 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಹನೂರು ಸಮೀಪದ ಆಂಡಿಪಾಳ್ಯ ಗ್ರಾಮದ ರಾಚಪ್ಪ ಜಮೀನಿನಲ್ಲಿ ಅರಿಶಿನ ಫಸಲಿನೊಂದಿಗೆ ಅಕ್ರಮವಾಗಿ ಬೆಳೆದಿದ್ದ 5 ಕೆಜಿ ತೂಕದ ಒಂದು ಗಾಂಜಾ ಗಿಡವನ್ನು ಪಿಎಸ್ ಐ ನಾಗೇಶ್ ದಾಳಿ ನಡೆಸಿ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ಸ್ ಪೆಕ್ಟರ್ ಮೋಹಿತ್ ಸಹದೇವ್ ನೇತೃತ್ವದ ತಂಡ ಬಾಣೂರು ಗೇಟ್ ಹತ್ತಿರದ ಗುತ್ತಿಗೆ ಜಮೀನಿನಲ್ಲಿ ಕೊತ್ತನೂರು ಗ್ರಾಮದ ನಟೇಶ್ ಬಾಳೆ ಹಾಗೂ ಅರಿಶಿಣ ಬೆಳೆಯ ನಡುವೆ ಬೆಳೆದಿದ್ದ 16 ಕೆ.ಜಿ.400 ಗ್ರಾಂ. ತೂಕದ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಇನ್ಸ್ ಪೆಕ್ಟರ್ ಮೋಹಿತ್ ಸಹದೇವ್ ಜತೆಯಲ್ಲಿ ಮುಖ್ಯ ಪೇದೆಗಳಾದ ಸಿದ್ದೇಶ್, ಹೂವಯ್ಯ, ಮಲ್ಲಿಕಾರ್ಜುನಸ್ವಾಮಿ, ರಾಮದಾಸ್, ಪೇದೆಗಳಾದ ರಾಜು, ಪ್ರದೀಪ್, ಮಖಂದರ್ ಪಾಷ, ವಿಶ್ವನಾಥ್, ಚಂದ್ರು, ವೀರಭದ್ರ ಪಾಲ್ಗೊಂಡಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications