ಗೀತಾ ಮಹದೇವಪ್ರಸಾದ್ ರಾಜಕೀಯಕ್ಕೆ ಬರ್ತಾರೆ!
ಚಾಮರಾಜನಗರ, ಜನವರಿ 7: ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದ ಕಂಗಾಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮುಂದಿನ ದಿನಗಳಲ್ಲಿ ಚೈತನ್ಯ ಬರುವುದು ಖಚಿತವಾಗಿದೆ. ಕಾರಣ, ಮಹದೇವಪ್ರಸಾದ್ ಬಳಿಕ ರಾಜಕಾರಣದ ಉತ್ತರಾಧಿಕಾರಿಯಾಗಲು ಪತ್ನಿ ಗೀತಾ ಒಲವು ತೋರಿದ್ದಾರೆ.
ಇದು ಕೈಪಾಳಯದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ ಕಂಗಾಲಾಗಿದ್ದ ನಾಯಕರು ನಿಟ್ಟುಸಿರು ಬಿಡುವಂತೆ ಮಾಡಿದೆ. ಮುಂದೆ ಗುಂಡ್ಲುಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಎಂಬ ಚಿಂತೆಯಲ್ಲಿದ್ದ ನಾಯಕರಿಗೆ ಗೀತಾ ಅವರು ರಾಜಕೀಯದತ್ತ ಒಲವು ತೋರಿಸಿರುವುದರಿಂದ ಸದ್ಯ ಹಾದಿ ಸುಗಮವಾಗಿದೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೀತಾ, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸುತ್ತೂರು ಶ್ರೀಗಳ ತಮ್ಮನ್ನು ರಾಜಕಾರಣಕ್ಕೆ ಬರುವಂತೆ ಸೂಚಿಸಿದರೆ ಮಾತ್ರ ರಾಜಕಾರಣಕ್ಕೆ ಬರುವುದಾಗಿ ತಿಳಿಸಿದ್ದಾರೆ. ತಮ್ಮ ರಾಜಕಾರಣದ ನಡೆ ಆಕಸ್ಮಿಕವೇ ಹೊರತು ಪೂರ್ವ ಉದ್ದೇಶಿತವಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಪತಿ ಹಾಕಿಕೊಟ್ಟ ರಾಜಕಾರಣದ ಹಾದಿಯಲ್ಲಿ ಸಾಗುವುದಾಗಿ ಹೇಳಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

ಗೀತಾ ಅವರು ರಾಜಕೀಯಕ್ಕೆ ಬರಲು ಒಪ್ಪಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಅವರನ್ನೇ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು, ಆ ಮೂಲಕ ಗೆಲುವಿಗೆ ಶ್ರಮಿಸುವುದು ಕೈ ನಾಯಕರ ಉದ್ದೇಶವಾಗಿದೆ.
ಕಾಂಗ್ರೆಸ್ ಹಿರಿಯ ನಾಯಕರಾದ ಜನಾರ್ದನ ಪೂಜಾರಿ ಕೂಡ ಅದನ್ನೇ ಹೇಳಿದ್ದರು. ಈಗಿನ ಮಟ್ಟಿಗೆ ಕಾಂಗ್ರೆಸ್ ಗೆಲುವು ಸಾಧಿಸಬೇಕಾದರೆ ಇದು ಅನಿವಾರ್ಯವಾಗಿದೆ. ಮಹದೇವಪ್ರಸಾದ್ ಬಗ್ಗೆ ಈ ವ್ಯಾಪ್ತಿಯಲ್ಲಿ ಮತದಾರರು ಹೆಚ್ಚಿನ ಒಲವು ಹೊಂದಿದ್ದಾರೆ. ಅದನ್ನು ಅವರು ಅನುಕಂಪದ ಮೇಲೆ ಗೀತಾ ಅವರಿಗೆ ತೋರಿದರೆ ಗೆಲುವು ಖಚಿತ ಎಂಬುದು ಕೈ ನಾಯಕರ ಲೆಕ್ಕಾಚಾರವಾಗಿದೆ.[ಮಹದೇವಪ್ರಸಾದ್ ಎಂಬ 'ಭುಜಕೀರ್ತಿ' ಕಳಚಿದ ಮೇಲೆ 'ಕೈ' ಸ್ಥಿತಿ ಏನು?]
ಈಗಾಗಲೇ ಪತಿ ಅಗಲಿಕೆ ನೋವಿನಲ್ಲಿರುವ ಗೀತಾ ಅವರು, ಎಲ್ಲವನ್ನೂ ಮರೆತು ರಾಜಕೀಯ ರಣರಂಗಕ್ಕೆ ಧುಮುಕಿ ಮತದಾರರ ಮುಂದೆ ಬಂದು ನಿಂತ ಮೇಲೆಯೇ ಎಲ್ಲ ಲೆಕ್ಕಾಚಾರಗಳಿಗೆ ಅರ್ಥ ಬರುವುದು. ಅಲ್ಲಿವರೆಗೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications