ಗೀತಾ ಮಹದೇವಪ್ರಸಾದ್ ರಾಜಕೀಯಕ್ಕೆ ಬರ್ತಾರೆ!
ಚಾಮರಾಜನಗರ, ಜನವರಿ 7: ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಅಕಾಲಿಕ ನಿಧನದಿಂದ ಕಂಗಾಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮುಂದಿನ ದಿನಗಳಲ್ಲಿ ಚೈತನ್ಯ ಬರುವುದು ಖಚಿತವಾಗಿದೆ. ಕಾರಣ, ಮಹದೇವಪ್ರಸಾದ್ ಬಳಿಕ ರಾಜಕಾರಣದ ಉತ್ತರಾಧಿಕಾರಿಯಾಗಲು ಪತ್ನಿ ಗೀತಾ ಒಲವು ತೋರಿದ್ದಾರೆ.
ಇದು ಕೈಪಾಳಯದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ ಕಂಗಾಲಾಗಿದ್ದ ನಾಯಕರು ನಿಟ್ಟುಸಿರು ಬಿಡುವಂತೆ ಮಾಡಿದೆ. ಮುಂದೆ ಗುಂಡ್ಲುಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಎಂಬ ಚಿಂತೆಯಲ್ಲಿದ್ದ ನಾಯಕರಿಗೆ ಗೀತಾ ಅವರು ರಾಜಕೀಯದತ್ತ ಒಲವು ತೋರಿಸಿರುವುದರಿಂದ ಸದ್ಯ ಹಾದಿ ಸುಗಮವಾಗಿದೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೀತಾ, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸುತ್ತೂರು ಶ್ರೀಗಳ ತಮ್ಮನ್ನು ರಾಜಕಾರಣಕ್ಕೆ ಬರುವಂತೆ ಸೂಚಿಸಿದರೆ ಮಾತ್ರ ರಾಜಕಾರಣಕ್ಕೆ ಬರುವುದಾಗಿ ತಿಳಿಸಿದ್ದಾರೆ. ತಮ್ಮ ರಾಜಕಾರಣದ ನಡೆ ಆಕಸ್ಮಿಕವೇ ಹೊರತು ಪೂರ್ವ ಉದ್ದೇಶಿತವಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಪತಿ ಹಾಕಿಕೊಟ್ಟ ರಾಜಕಾರಣದ ಹಾದಿಯಲ್ಲಿ ಸಾಗುವುದಾಗಿ ಹೇಳಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

ಗೀತಾ ಅವರು ರಾಜಕೀಯಕ್ಕೆ ಬರಲು ಒಪ್ಪಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಅವರನ್ನೇ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು, ಆ ಮೂಲಕ ಗೆಲುವಿಗೆ ಶ್ರಮಿಸುವುದು ಕೈ ನಾಯಕರ ಉದ್ದೇಶವಾಗಿದೆ.
ಕಾಂಗ್ರೆಸ್ ಹಿರಿಯ ನಾಯಕರಾದ ಜನಾರ್ದನ ಪೂಜಾರಿ ಕೂಡ ಅದನ್ನೇ ಹೇಳಿದ್ದರು. ಈಗಿನ ಮಟ್ಟಿಗೆ ಕಾಂಗ್ರೆಸ್ ಗೆಲುವು ಸಾಧಿಸಬೇಕಾದರೆ ಇದು ಅನಿವಾರ್ಯವಾಗಿದೆ. ಮಹದೇವಪ್ರಸಾದ್ ಬಗ್ಗೆ ಈ ವ್ಯಾಪ್ತಿಯಲ್ಲಿ ಮತದಾರರು ಹೆಚ್ಚಿನ ಒಲವು ಹೊಂದಿದ್ದಾರೆ. ಅದನ್ನು ಅವರು ಅನುಕಂಪದ ಮೇಲೆ ಗೀತಾ ಅವರಿಗೆ ತೋರಿದರೆ ಗೆಲುವು ಖಚಿತ ಎಂಬುದು ಕೈ ನಾಯಕರ ಲೆಕ್ಕಾಚಾರವಾಗಿದೆ.[ಮಹದೇವಪ್ರಸಾದ್ ಎಂಬ 'ಭುಜಕೀರ್ತಿ' ಕಳಚಿದ ಮೇಲೆ 'ಕೈ' ಸ್ಥಿತಿ ಏನು?]
ಈಗಾಗಲೇ ಪತಿ ಅಗಲಿಕೆ ನೋವಿನಲ್ಲಿರುವ ಗೀತಾ ಅವರು, ಎಲ್ಲವನ್ನೂ ಮರೆತು ರಾಜಕೀಯ ರಣರಂಗಕ್ಕೆ ಧುಮುಕಿ ಮತದಾರರ ಮುಂದೆ ಬಂದು ನಿಂತ ಮೇಲೆಯೇ ಎಲ್ಲ ಲೆಕ್ಕಾಚಾರಗಳಿಗೆ ಅರ್ಥ ಬರುವುದು. ಅಲ್ಲಿವರೆಗೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications