ಮುಗ್ಧ ಮಗುವಿನ ಕಣ್ಣನ್ನೇ ಇಲ್ಲವಾಗಿಸಿದ ಚಾಮರಾಜನಗರದ ನಕಲಿ ವೈದ್ಯೆ
ಚಾಮರಾಜನಗರ, ಜನವರಿ 06: ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ನಕಲಿ ವೈದ್ಯರು ನೀಡಿದ ಔಷಧಿ ಕಣ್ಣನ್ನೇ ಕಿತ್ತುಕೊಳ್ಳುವಂತೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ.
ಕುಮಾರ್ ಎಂಬುವರ ಪುತ್ರಿ ನಾಲ್ಕು ವರ್ಷದ ದೀಕ್ಷಿತಾ, ನಕಲಿ ವೈದ್ಯೆ ನೀಡಿದ ಔಷಧಿಗೆ ಕಣ್ಣು ಕಳೆದು ಕೊಂಡಿದ್ದು, ತೆರಕಣಾಂಬಿಯಲ್ಲಿ ಕ್ಲೀನಿಕ್ ನಡೆಸುತ್ತಿರುವ ವೈದ್ಯೆ ಎಂದು ಹೇಳಿಕೊಳ್ಳುತ್ತಿರುವ ಡಾ. ಕೋಕಿಲಾ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಕೋಕಿಲ ಅವರು ತಾನು ವಾಸ ಮಾಡುವ ಮನೆಯ ಕೆಳಭಾಗದಲ್ಲಿ ನಾಮಫಲಕವಿಲ್ಲದೆ ಕ್ಲೀನಿಕ್ ನಡೆಸುತ್ತಿದ್ದಾರೆ. ಕಳೆದ ಅಕ್ಟೋಬರ್ 21ರಂದು ಈ ಕ್ಲೀನಿಕ್ ಗೆ ಕುಮಾರ್ ತನ್ನ ಪುತ್ರಿ ದೀಕ್ಷಿತಾಳನ್ನು ಕರೆದುಕೊಂಡು ಹೋಗಿ, ಜ್ವರಕ್ಕೆ ಔಷಧಿ ನೀಡುವಂತೆ ಹೇಳಿದ್ದಾರೆ. ಜ್ವರ ಇರುವುದನ್ನು ನೋಡಿ ಕೆಲವು ಮಾತ್ರೆ ಹಾಗೂ ಔಷಧಿಗಳನ್ನು ನೀಡಿ ಕಳುಹಿಸಿದ್ದಾರೆ. ಆ ಔಷಧಿಯನ್ನು ಕುಮಾರ್ ತಮ್ಮ ಮಗುವಿಗೆ ನೀಡಿದ್ದಾರೆ.

ಆದರೆ ಮಗುವಿನ ಜ್ವರ ಮಾತ್ರ ಕಡಿಮೆಯಾಗಲಿಲ್ಲ. ಜತೆಗೆ ಕಣ್ಣು ಊದಿಕೊಂಡು ಮಗು ಅಳತೊಡಗಿತ್ತು. ಒಂದೆರಡು ದಿನಗಳ ಬಳಿಕ ಕುಮಾರ್ ತನ್ನ ಮಗುವನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗುವಿನ ಪರಿಸ್ಥಿತಿ ಕಂಡು ಬೆರಗಾದ ವೈದ್ಯರು ಕೂಡಲೇ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ.
ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ಲಕ್ಷಾಂತರ ರೂ. ಖರ್ಚು ಮಾಡಿ ಚಿಕಿತ್ಸೆ ನೀಡಲಾಯಿತಾದರೂ ಮಗುವಿನ ಕಣ್ಣಿನಲ್ಲಿ ದೃಷ್ಠಿ ಮಾತ್ರ ಬರಲೇ ಇಲ್ಲ. ಇದೀಗ ಮಗು ದೃಷ್ಠಿ ವಂಚಿತವಾಗಿದೆ. ಮುಂದೆ ಬದುಕಿ ಬಾಳಬೇಕಾಗಿದ್ದ ಮಗು ದೃಷ್ಟಿಕಳೆದುಕೊಂಡಿದೆ. ಈ ಕುರಿತು ಮಗುವಿನ ತಂದೆ ಕುಮಾರ್ ಅವರು ತನ್ನ ಮಗು ದೃಷ್ಟಿ ಕಳೆದುಕೊಳ್ಳಲು ಡಾ.ಕೋಕಿಲ ನೀಡಿರುವ ಔಷಧಿಯೇ ಕಾರಣ ಎಂದು ಆರೋಪಿಸುತ್ತಿದ್ದು, ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೂ ಪ್ರಯೋಜನವಾಗಿಲ್ಲ ಎಂದು ಆರೋಪಿಸುತ್ತಿದ್ದಾರೆ.

ಡಾ.ಕೋಕಿಲ ಅವರ ವಿರುದ್ಧ ಹಿಂದಿನಿಂದಲೂ ಆರೋಪಗಳಿದ್ದು, ಹಿಂದೊಮ್ಮೆ ದಾಳಿ ನಡೆಸಿ ಕ್ಲಿನಿಕ್ ಬಾಗಿಲು ಮುಚ್ಚಿಸಲಾಗಿತ್ತು. ಆದರೂ ಮತ್ತೆ ಕ್ಲಿನಿಕ್ ಬಾಗಿಲು ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಂಡು ಅವರು ನಿಜವಾಗಿಯೂ ವೈದ್ಯರೇ ಅಥವಾ ನಕಲಿ ವೈದ್ಯರೇ ಎಂಬುದನ್ನು ಬಯಲು ಮಾಡಬೇಕಿದೆ ಎಂದಿದ್ದಾರೆ.
ಈಗಾಗಲೇ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದ್ದು, ಚಿಕಿತ್ಸೆ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಾ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದವರು ಎಚ್ಚರವಾಗಿರುವುದು ಒಳ್ಳೆಯದು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications