"ವಾಟಾಳ್ ನಾಗರಾಜ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ"
ಚಾಮರಾಜನಗರ, ಅಕ್ಟೋಬರ್, 18: ಕನ್ನಡ ಪರ ಪ್ರಮುಖ ಹೋರಾಟಗಾರರಲ್ಲಿ ವಾಟಾಳ್ ನಾಗರಾಜ್ ಕೂಡ ಒಬ್ಬರಾಗಿದ್ದಾರೆ. ಇದೀಗ ಅವರಿಗೆ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಚಳುವಳಿಯ ಧೀಮಂತ ನಾಯಕರಾದ ವಾಟಾಳ್ ನಾಗರಾಜ್ ಅವರು ಕನ್ನಡಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿಕೊಂಡವರು ಮತ್ತು ಈ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆಗಳ ಉಳುವಿಗಾಗಿ ಕಳೆದ 6 ದಶಕಗಳಿಂದ ನಿರಂತರವಾಗಿ ಸಾವಿರಾರು ಹೋರಾಟಗಳನ್ನು ನಡೆಸಿ ದಾಖಲೆ ಸೃಷ್ಟಿಸಿದ್ದಾರೆ ಮತ್ತು ಕರ್ನಾಟಕದ ಶಾಸನ ಸಭೆಯಲ್ಲಿ ಹಿರಿಯ ಸದಸ್ಯರಾಗಿ 5 ಬಾರಿ ಶಾಸಕರಾಗಿದ್ದಾರೆ. ಈ ಮೂಲಕ ಈ ನಾಡಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡದ ಬೆಳವಣಿಗೆಗೆಗಾಗಿ ಅಭೂತಪೂರ್ವ ಕೆಲಸ ಮಾಡಿರುತ್ತಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.

ವಾಟಾಳ್ ನಾಗರಾಜ್ ಅವರು ಇಲ್ಲದ ಶಾಸನ ಸಭೆಯನ್ನು ಊಹಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಪ್ರಮಾಣಿಕವಾಗಿ ವಾಟಾಳ್ ನಾಗರಾಜ್ ಅವರಂತಹ ಅದ್ಭುತ ಸಂಸದಿಯ ಪಟುವನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಬೇಕಾಗಿತ್ತು. ಇದು ಆಗದೆ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ನಮ್ಮ ದೇಶದ ಇತಿಹಾಸದಲ್ಲೇ ಒಂದು ಭಾಷೆಯ ಉಳಿವಿಗಾಗಿ 6 ದಶಕಗಳ ಕಾಲ ನಿರಂತರ ಹೋರಾಟ ಮಾಡಿದ ಹೋರಾಟಗಾರರು ಇನ್ನೊಬ್ಬರಿಲ್ಲ ಎಂದು ತಿಳಿಸಿದ್ದಾರೆ.
ಇಂತಹ ವ್ಯಕ್ತಿಗೆ ರಾಜ್ಯ ಸರ್ಕಾರ ಇನ್ನೂ ಸಹ ಕರ್ನಾಟಕ ರತ್ನ ಪ್ರಶಸ್ತಿ ನೀಡದೆ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪ್ರಥಮ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಾವು ಕನ್ನಡದ ಬಗ್ಗೆ ಅಪಾರ ಕಾಳಜಿ ಇರುವುದು ಪ್ರಶಂಸನೀಯ ಎಂದು ಉಲ್ಲೇಖಸಿದ್ದಾರೆ.
ಕನ್ನಡ ಚಳುವಳಿಯ ಹಿರಿಯ ಮತ್ತು ಧೀಮಂತ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರಿಗೆ ಈ ಬಾರಿಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಈ ಮೂಲಕ ತಮ್ಮ ಸರ್ಕಾರದ ಕನ್ನಡ ಪ್ರೇಮವನ್ನು ತೋರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಸಿದ್ದರಾಜು, ಪ್ರಕಾಶ್ ಸೇರಿದಂತೆ ಮತ್ತತರರು ಹಾಜರಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications