"ವಾಟಾಳ್ ನಾಗರಾಜ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ"
ಚಾಮರಾಜನಗರ, ಅಕ್ಟೋಬರ್, 18: ಕನ್ನಡ ಪರ ಪ್ರಮುಖ ಹೋರಾಟಗಾರರಲ್ಲಿ ವಾಟಾಳ್ ನಾಗರಾಜ್ ಕೂಡ ಒಬ್ಬರಾಗಿದ್ದಾರೆ. ಇದೀಗ ಅವರಿಗೆ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಚಳುವಳಿಯ ಧೀಮಂತ ನಾಯಕರಾದ ವಾಟಾಳ್ ನಾಗರಾಜ್ ಅವರು ಕನ್ನಡಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿಕೊಂಡವರು ಮತ್ತು ಈ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆಗಳ ಉಳುವಿಗಾಗಿ ಕಳೆದ 6 ದಶಕಗಳಿಂದ ನಿರಂತರವಾಗಿ ಸಾವಿರಾರು ಹೋರಾಟಗಳನ್ನು ನಡೆಸಿ ದಾಖಲೆ ಸೃಷ್ಟಿಸಿದ್ದಾರೆ ಮತ್ತು ಕರ್ನಾಟಕದ ಶಾಸನ ಸಭೆಯಲ್ಲಿ ಹಿರಿಯ ಸದಸ್ಯರಾಗಿ 5 ಬಾರಿ ಶಾಸಕರಾಗಿದ್ದಾರೆ. ಈ ಮೂಲಕ ಈ ನಾಡಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡದ ಬೆಳವಣಿಗೆಗೆಗಾಗಿ ಅಭೂತಪೂರ್ವ ಕೆಲಸ ಮಾಡಿರುತ್ತಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.

ವಾಟಾಳ್ ನಾಗರಾಜ್ ಅವರು ಇಲ್ಲದ ಶಾಸನ ಸಭೆಯನ್ನು ಊಹಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಪ್ರಮಾಣಿಕವಾಗಿ ವಾಟಾಳ್ ನಾಗರಾಜ್ ಅವರಂತಹ ಅದ್ಭುತ ಸಂಸದಿಯ ಪಟುವನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಬೇಕಾಗಿತ್ತು. ಇದು ಆಗದೆ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ನಮ್ಮ ದೇಶದ ಇತಿಹಾಸದಲ್ಲೇ ಒಂದು ಭಾಷೆಯ ಉಳಿವಿಗಾಗಿ 6 ದಶಕಗಳ ಕಾಲ ನಿರಂತರ ಹೋರಾಟ ಮಾಡಿದ ಹೋರಾಟಗಾರರು ಇನ್ನೊಬ್ಬರಿಲ್ಲ ಎಂದು ತಿಳಿಸಿದ್ದಾರೆ.
ಇಂತಹ ವ್ಯಕ್ತಿಗೆ ರಾಜ್ಯ ಸರ್ಕಾರ ಇನ್ನೂ ಸಹ ಕರ್ನಾಟಕ ರತ್ನ ಪ್ರಶಸ್ತಿ ನೀಡದೆ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪ್ರಥಮ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಾವು ಕನ್ನಡದ ಬಗ್ಗೆ ಅಪಾರ ಕಾಳಜಿ ಇರುವುದು ಪ್ರಶಂಸನೀಯ ಎಂದು ಉಲ್ಲೇಖಸಿದ್ದಾರೆ.
ಕನ್ನಡ ಚಳುವಳಿಯ ಹಿರಿಯ ಮತ್ತು ಧೀಮಂತ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರಿಗೆ ಈ ಬಾರಿಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಈ ಮೂಲಕ ತಮ್ಮ ಸರ್ಕಾರದ ಕನ್ನಡ ಪ್ರೇಮವನ್ನು ತೋರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಸಿದ್ದರಾಜು, ಪ್ರಕಾಶ್ ಸೇರಿದಂತೆ ಮತ್ತತರರು ಹಾಜರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications