ಒಂಟಿ ಮಹಿಳೆ ಮನೆ ಟಾರ್ಗೆಟ್:₹15 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಖದೀಮರು
ಚಾಮರಾಜನಗರ, ಫೆಬ್ರವರಿ 1: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ಜನನಿಬಿಡ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿರುವ ಘಟನೆ ಚಾಮರಾಜನಗರದ ರಾಘವೇಂದ್ರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ರಾಘವೇಂದ್ರ ಚಿತ್ರಮಂದಿರದ ಮುಂದೆ ಇರುವ ಶೋಭಾ ಎನ್ನುವವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮುಂದಿನ ಬಾಗಿಲು ಒಡೆದು ಒಳಹೊಕ್ಕ ಖದೀಮರು ಮಗಳ ಮದುವೆಗೆಂದು ಮಾಡಿಸಿಟ್ಟಿದ್ದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ ಕ್ಷಣಾರ್ಧದಲ್ಲಿ ಮನೆಯ ಹಿಂದಿನ ಬಾಗಿಲಿನಿಂದ ಪರಾರಿ ಆಗಿದ್ದಾರೆ.
ಶೋಭಾ ಅವರ ಪತಿ ಇತ್ತೀಚೆಗೆ ನಿಧನ ಹೊಂದಿದ್ದು ಏಕಾಂಗಿಯಾಗಿ ವಾಸಿಸುತ್ತಿದ್ದರು. ಮಗಳ ಮದುವೆಗೆಂದು ಮಾಡಿಸಿದ್ದ 3 ನೆಕ್ಲೇಸ್, 2 ಜೊತೆ ಬಳೆ, 2 ಸರ, 30 ಜೊತೆ ಓಲೆ, 10 ಉಂಗುರು, ಮುಕ್ಕಾಲು ಕೆಜಿಯಷ್ಟು ಬೆಳ್ಳಿ ಸಾಮಾನುಗಳು ಸೇರಿ ಒಟ್ಟು ₹15 ಲಕ್ಷಕ್ಕೂ ಅಧಿಕ ಚಿನ್ನಾಭರಣವನ್ನು ಮನೆಯ ಬೀರುವಿನಲ್ಲಿಟ್ಟಿದ್ದರು. ಶೋಭಾ ಹಬ್ಬ ಎಂದು ಆಲೂರಿಗೆ ತೆರಳಿದ್ದ ವೇಳೆ ಖದೀಮರು ಹೊಂಚು ಹಾಕಿ ಚಿನ್ನಾಭರಣವನ್ನು ದೋಚಿದ್ದಾರೆ.

ಅಕ್ಕಪಕ್ಕದಲ್ಲಿ ಮನೆಗಳು, ಎದುರಿಗೆ ಥಿಯೇಟರ್, ಮುಖ್ಯರಸ್ತೆ ಇದ್ದರೂ ಕಳ್ಳರು ಚಾಣಾಕ್ಷತನದಿಂದ ಶೋಭಾ ಅವರ ಮನೆಗೆ ಕನ್ನ ಹಾಕಿದ್ದಾರೆ.
ಕೇವಲ 1 ಸ್ಕ್ರೂ ಡ್ರೈವರ್ ಸಹಾಯದಿಂದ ಬಾಗಿಲನ್ನು ಮೀಟಿರುವ ಕಳ್ಳರು, ಚಿನ್ನ ಕದ್ದು ಸ್ಕ್ರೂ ಡ್ರೈವರ್ಅನ್ನು ಮನೆಯಲ್ಲೇ ಎಸೆದು ಹೋಗಿದ್ದಾರೆ. ಅದೇ ಮಾರ್ಗವಾಗಿ ಬಂದ ಪರಿಚಿತರೊಬ್ಬರು ಬಾಗಿಲು ಹಾಕದೇ ಊರಿಗೆ ಹೋಗಿದ್ದೀರಲ್ಲಾ..? ಎಂದು ಶೋಭಾ ಅವರಿಗೆ ಕರೆ ಮಾಡಿ ವಿಚಾರಿಸಿದ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ಪ್ರಕರಣ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಎಎಸ್ಪಿ ಉದೀಶ್, ಡಿವೈಎಸ್ಪಿ ಪ್ರಿಯದರ್ಶಿನಿ, ಶ್ವಾನ ತಂಡ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications