ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರ ತಪ್ಪಿ ಸರಕು ಸಾಗಾಣಿಕೆ ವಾಹನ ಪಲ್ಟಿ
ಚಾಮರಾಜನಗರ, ಜೂನ್ 9: ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಕಡಿಮೆಯಾಗುತ್ತಿವೆ ಎನ್ನುವಷ್ಟರಲ್ಲಿ ಮತ್ತೆ ಹೆಚ್ಚಾಗುತ್ತಿವೆ. ಇದೀಹ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಾಣಿಕೆ ವಾಹನವೊಂದು ಉರುಳಿ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುಳ್ಳೂರು ಕ್ರಾಸ್ ಸಮೀಪ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಕುಳ್ಳೂರು ಕ್ರಾಸ್ ಬಳಿ ಸರಕು ಸಾಗಾಣೆ ವಾಹನ ಸಂಚರಿಸುವಾಗಲೇ ಚಾಲಕನ ನಿಯಂತ್ರಣ ತಪ್ಪಿ ಉರುಳಿ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ. ಪರಿಣಾಮ ರಘುಪತಿ ಹಾಗೂ ದಾಮೋದರ್ ಎಂಬವರಿಗೆ ಗಾಯ ಆಗಿದ್ದು, ಇಬ್ಬರನ್ನು ಚಾಮರಾಜನಗರ ಸರ್ಕಾರಿ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಕೇರಳ ಮೂಲದ ವಾಹನ ಆಗಿದ್ದು, ತಮಿಳುನಾಡಿಗೆ ಸರಕು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

15 ಜನ ಸಾವು: ಬಸ್ಸೊಂದು ಮಿನಿವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಮಲೇಷ್ಯಾದ ಗೆರಿಕ್ ಬಳಿ ಸೋಮವಾರ ಮುಂಜಾನೆ ನಡೆದಿದೆ. ಅಲ್ಲಿನ ಪೊಲೀಸರು ಮಾಹಿತಿ ಪ್ರಕಾರ, ಸುಲ್ತಾನ್ ಇದ್ರಿಸ್ ಶಿಕ್ಷಣ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಮತ್ತೆ ತಮ್ಮ ಕ್ಯಾಂಪಸ್ಗೆ ಕರೆದೊಯ್ಯುತ್ತಿದ್ದ ಬಸ್ ಸ್ಥಳೀಯ ಸಮಯ ಸುಮಾರು 1 ಗಂಟೆಗೆ ನಿಯಂತ್ರಣ ಕಳೆದುಕೊಂಡು ಹಿಂದಿನಿಂದ ಮಿನಿವ್ಯಾನ್ಗೆ ಡಿಕ್ಕಿ ಹೊಡೆದಿದೆ.
ಮೃತರಲ್ಲಿ 14 ಜನ 21-23 ವರ್ಷದೊಳಗಿನ ವಿದ್ಯಾರ್ಥಿಗಳಾಗಿದ್ದರೆ, ಉಳಿದ 15ನೇಯವರು ಬಸ್ ಸಿಬ್ಬಂದಿ ಆಗಿದ್ದರು. 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. 7 ಮಂದಿ ಗಂಭೀರ ಸ್ಥಿತಿಯಲ್ಲಿರುವವರು ಸೇರಿ 33 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೆರಾಕ್ ರಾಜ್ಯದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಚಿತ್ರಗಳು ಬಸ್ ಹಿಂಭಾಗಕ್ಕೆ ತೀವ್ರ ಹಾನಿಯೊಂದಿಗೆ ಉರುಳಿಬಿದ್ದಿರುವುದನ್ನು ತೋರಿಸಿವೆ. ಆದರೆ ಮಿನಿವ್ಯಾನ್ ಕಿಟಕಿಗಳು ಪುಡಿ ಪುಡಿಯಾದ ನಂತರ ಕಂದಕಕ್ಕೆ ತಳ್ಳಲ್ಪಟ್ಟಿದೆ. ನಜ್ಜುಗುಜ್ಜಾದ ಬಸ್ಸಿನಿಂದ ಸಿಕ್ಕಿಬಿದ್ದ ಬಲಿಪಶುಗಳನ್ನು ಹೊರತೆಗೆಯಲು ರಕ್ಷಣಾ ತಂಡವು ಹೈಡ್ರಾಲಿಕ್ ಕಟ್ಟರ್ಗಳನ್ನು ಬಳಸಿತು.
ಬಸ್ ನಿಯಂತ್ರಣ ಕಳೆದುಕೊಂಡು ಹಿಂದಿನಿಂದ ಮಿನಿ ವ್ಯಾನ್ಗೆ ಡಿಕ್ಕಿ ಹೊಡೆದಂತೆ ಕಾಣುತ್ತಿದೆ ಎಂದು ಪೆರಾಕ್ ರಾಜ್ಯ ಪೊಲೀಸ್ ಮುಖ್ಯಸ್ಥ ಹಿಸಾಮ್ ನಾರ್ಡಿನ್ ಹೇಳಿದ್ದಾರೆ. ಇನ್ನೂ ಇದಕ್ಕೆ ನಿಖರ ಕಾರಣ ಏನೆಂದು ತಿಳಿದುಬರಬೇಕಿದೆ ಅಷ್ಟೇ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications