ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು: ಸಚಿವ ಆರ್.ಅಶೋಕ್ ಸ್ಪಷ್ಟನೆ
ಚಾಮರಾಜನಗರ, ಡಿಸೆಂಬರ್, 14: ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು. ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಚಾಮರಾಜನಗರದಲ್ಲಿ ಸ್ಪಷ್ಟನೆ ನೀಡಿದರು.
ಹನೂರಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಅಂತಾ ಯಾರ್ಯಾರೋ ಸುಮ್ಮನೆ ಹೇಳುತ್ತಿರುತ್ತಾರೆ. ಆದರೆ, ನಮ್ಮ ಸರ್ಕಾರದ ಬೊಕ್ಕಸ ತುಂಬಿದೆ. ಹಿಂದಿನ ಯಾವ ಸರ್ಕಾರದಲ್ಲಿ ಇರದಷ್ಟು ಹಣ ನಮ್ಮ ಸರ್ಕಾರದಲ್ಲಿದೆ. ಹಣ ಇದ್ದಿದ್ದರಿಂದಲೇ ಸಾವಿರಾರು ಕೋಟಿ ರೂಪಾಯಿ ಯೋಜನೆಗಳು ಘೋಷಣೆ ಆಗುತ್ತಿವೆ. ಹಾಗೂ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ ಎಂದರು.
ಜನರ ಕಷ್ಟಗಳಿಗೆ ಸಿಎಂ ಸ್ಪಂದಿಸುತ್ತಿದ್ದಾರೆ
ಸಿಎಂ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್, 40 ವರ್ಷಗಳಿಂದ ಅವರು ಒಂದೇ ಮನೆಯಲ್ಲಿದ್ದಾರೆ. ಅವರು ಯಾವ ಮನೆಯನ್ನೂ ಕಟ್ಟಿಕೊಂಡಿಲ್ಲ. ಜನರ ಪರವಾಗಿ, ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ರೈತರಿಗೆ ನಾವು ಯಾವುದೇ ತೊಂದರೆ ಕೊಡುವುದಿಲ್ಲ. ಶೀಘ್ರದಲ್ಲೇ ನಿಮಗೆ ಹಕ್ಕುಪತ್ರಗಳನ್ನು ನೀಡುತ್ತೇವೆ. ನಮ್ಮದು ಡಬಲ್ ಎಂಜಿನ್ ಸರ್ಕಾರವಾಗಿದೆ. ಎರಡು ಪಟ್ಟು ವೇಗದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಭರವಸೆಯನ್ನು ವ್ಯಕ್ತಪಡಿಸಿದರು.

ನಂತ ಸಚಿವ ಸೋಮಣ್ಣ ಮಾತನಾಡಿ, ಕಾಡಿನ ಒಳಗಿರುವ ಚಂಗಡಿ ಗ್ರಾಮವನ್ನು ಶೀಘ್ರವೇ ಸ್ಥಳಾಂತರಿಸಲು ರೂಪುರೇಷೆ ಸಿದ್ಧವಾಗುತ್ತಿದೆ. ಆ ಕಾರ್ಯ ತ್ವರಿತವಾಗಿ ಆಗಲಿದ್ದು, ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಅಭಿಪ್ರಾಯಪಟ್ಟರು.
100 ಕೋಟಿ ರೂ. ಅನುದಾನದ ಭರವಸೆ
ಕರ್ನಾಟಕದ ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯದ ಗಡಿ ಭಾಗದ ಶಾಲೆಗಳು, ರಸ್ತೆಗಳ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಗೆ 100 ಕೋಟಿ ರೂಪಾಯಿಗಳನ್ನು ಕಾಮಗಾರಿಗಳಿಗೆ ಬಿಡುಗಡೆ ಮಾಡಲಾಗುವುದು. ಗಡಿ ಭಾಗಗಳ ಜನರ ಸಂಪೂರ್ಣ ಅಭಿವೃದ್ಧಿಯನ್ನು ಕೈಗೊಳ್ಳಬೇಕಿದೆ. ಮಧ್ಯಭಾಗದ ರಾಜ್ಯವನ್ನು ಗಮನಿಸಿದಷ್ಟೇ ದೂರದ ಪ್ರತಿ ಒಂದು ಗ್ರಾಮವನ್ನು ಅಭಿವೃದ್ಧಿ ಮಾಡುವ ಸಂಕಲ್ಪ ನಮ್ಮ ಸರ್ಕಾರಕ್ಕಿದೆ ಎಂದು ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿವರಿಸಿದರು.

ಕರ್ನಾಟಕದಲ್ಲಿರುವ ಗಡಿ ಭಾಗದ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿರುವುದರಿಂದ ಗಡಿಯಾಚೆ ಇರುವ ಕನ್ನಡಿಗರೂ ಕೂಡ ಅದೇ ರೀತಿಯ ಅಭಿವೃದ್ಧಿಯನ್ನು ಆಶಾಭಾವದಿಂದ ನೋಡುತ್ತಿದ್ದಾರೆ. ಹೀಗಾಗಿ ಗಡಿಯಾಚೆ ಇರುವ ಕನ್ನಡಿಗರು ವಾಸಿಸುವ ಪ್ರದೇಶಗಳಲ್ಲಿ ಶಾಲೆಗಳ ಅಭಿವೃದ್ದಿಗೆ ವಿಶೇಷ ಅನುದಾನ ಮೀಸಲಿಡುವ ತೀರ್ಮಾನ ಮಾಡಿದ್ದೇವೆ ಎಂದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications