ಚಾಮರಾಜನಗರದ ಕುದೇರಲ್ಲಿ ಊರಿಗೊಂದೇ ಗೌರಮ್ಮ!
ಚಾಮರಾಜನಗರ, ಸೆಪ್ಟೆಂಬರ್ 13 : ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಹೋಬಳಿಯ ಕುದೇರು ಗ್ರಾಮದಲ್ಲಿ ನಡೆಯುವ ಗೌರಿಹಬ್ಬ ಪ್ರಖ್ಯಾತವಾಗಿದೆ. ಇಲ್ಲಿ ನಡೆಯುವ ಸಂಪ್ರದಾಯ, ಆಚರಣೆ ಎಲ್ಲವೂ ಇತರೆಡೆಗಳಲ್ಲಿ ನಡೆಯುವ ಹಬ್ಬಕ್ಕಿಂತ ವಿಭಿನ್ನ ಮತ್ತು ವಿಶಿಷ್ಟವಾಗಿದೆ.
ಇಲ್ಲಿ ಯಾರ ಮನೆಯಲ್ಲೂ ಗೌರಮ್ಮನ ಪ್ರತಿಷ್ಠಾಪಿಸದೆ, ಪೂಜೆ ವ್ರತ ಮಾಡದೆ ಗ್ರಾಮಕ್ಕೊಂದು ಗೌರಮ್ಮನನ್ನು ಸ್ಥಾಪಿಸಿ, ಪೂಜಿಸಿ ಹಬ್ಬ ಆಚರಣೆ ಮಾಡುವುದು ವಾಡಿಕೆ. ಈ ಆಚರಣೆ ಇಲ್ಲಿ ಶತ ಶತಮಾನಗಳಿಂದ ಇದೆ. 'ಸ್ವರ್ಣ ಗೌರಿ' ದೇವಾಲಯ ನಿರ್ಮಾಣ ಮಾಡಿ ಇಡೀ ಗ್ರಾಮವೇ ಒಟ್ಟಿಗೆ ಸೇರಿ ಗೌರಿ ಪೂಜೆ ಮಾಡುವುದು ವಿಶೇಷ.
ಸಾಮಾನ್ಯವಾಗಿ ಗೌರಿ ಹಬ್ಬ ಬಂತೆಂದರೆ ಮಹಿಳೆಯರಿಗೆ ಎಲ್ಲಿಲ್ಲದ ಸಂತೋಷ, ಸಂಭ್ರಮ, ಜತೆಗೆ ತವರು ಮನೆಗೆ ಹೋಗುವ ಸಡಗರ. ತವರಲ್ಲಿ ನೀಡುವ ಬಾಗಿನ ಸ್ವೀಕರಿಸೋದೆ ಎಲ್ಲಿಲ್ಲದೆ ಖುಷಿ. ಎಲ್ಲೆಡೆ ಮನೆ ಮನೆಯಲ್ಲೂ ಗೌರಿಯನ್ನು ಪ್ರತಿಷ್ಠಾಪಿಸಿ ವೃತ ಮಾಡುವುದು ವಾಡಿಕೆ. ಆದರೆ ಕುದೇರು ಗ್ರಾಮದ ಸ್ವರ್ಣ ಗೌರಿ ದೇವಾಲಯದಲ್ಲಿ ದೇವಿಯ ಪ್ರತಿಷ್ಠಾಪನೆ ಮಾಡಿ ಹನ್ನೆರಡು ದಿನಗಳ ಕಾಲ ಹಬ್ಬ ಆಚರಣೆ ಮಾಡಲಾಗುತ್ತದೆ.

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದಲ್ಲಿ ಗೌರಮ್ಮಳಿಗಾಗಿಯೇ ದೇವಾಲಯವನ್ನು ಹಲವಾರು ವರ್ಷಗಳ ಹಿಂದೆ ಕಟ್ಟಿಸಿದ್ದಾರೆ. ಹಬ್ಬದಂದು ಯಾವುದೇ ಮನೆಯಲ್ಲಿ ಗೌರಮ್ಮಳನ್ನು ಪ್ರತಿಷ್ಠಾಪನೆ ಮಾಡದೆ ಊರಿನ ಮಹಿಳೆಯರು ಎಲ್ಲರೂ ದೇವಾಲಯಕ್ಕೆ ಬಂದು ಗೌರಿಯನ್ನು ಪೂಜಿಸುತ್ತಾರೆ.
ಇನ್ನು ಕುದೇರು ಗ್ರಾಮದ ಹೆಣ್ಣು ಮಕ್ಕಳು ಬೇರೆ ಊರಿಗೆ ಮದುವೆಯಾಗಿದ್ದರೆ, ತವರು ಮನೆಗೆ ತಪ್ಪದೆ ಬಂದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಇದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.
ಊರಿನಲ್ಲಿರುವ ಕೆರೆಯ ಬಳಿ ಗೌರಿಯನ್ನು ತಯಾರಿಸಿ ಹೋಮ ಹವನ ನಡೆಸುವ ಮೂಲಕ ಗ್ರಾಮಸ್ಥರು ಪಲ್ಲಕ್ಕಿಯಲ್ಲಿ ಗೌರಮ್ಮಳನ್ನು ಕುಳ್ಳರಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತಾರೆ. ಈ ಸಂದರ್ಭ ಮಹಿಳೆಯರು ಬಂದು ಗೌರಮ್ಮಳಿಗೆ ಪೂಜೆ ಮಾಡಿ, ಬಾಗಿನ ಸಮರ್ಪಣೆ ಮಾಡಿ ಪರಸ್ಪರ ಬಾಗಿನ ಸ್ವೀಕರಿಸುತ್ತಾರೆ.

ಕುದೇರು ಗ್ರಾಮದಲ್ಲಿ ಜಾತಿ ಮತಗಳನ್ನು ಹೊರತು ಪಡಿಸಿ ಎಲ್ಲರೂ ಒಂದೇ ಭಾವನೆಯಿಂದ ಹಬ್ಬದಲ್ಲಿ ಭಾಗವಹಿಸಿ ಸಂತೋಷ ಹಂಚಿಕೊಳ್ಳುವುದು ಇಲ್ಲಿನ ವಿಶೇಷವಾಗಿದೆಯಲ್ಲದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಪ್ರಾರ್ಥನೆಯೂ ನಡೆಯುತ್ತದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications