ಸಾಕಿದ ಬೆಕ್ಕಿಗೆ ಮಗಳ ಸ್ಥಾನ ಕೊಟ್ಟು ಸೀಮಂತ ಮಾಡಿದ ಗುಂಡ್ಲುಪೇಟೆ ದಂಪತಿ
ಚಾಮರಾಜನಗರ, ಡಿಸೆಂಬರ್ 21: ಇತ್ತೀಚಿನ ದಿನಗಳಲ್ಲಿ ಬೆಕ್ಕು ಮತ್ತು ಶ್ವಾನ ಪ್ರಿಯರು ಅವುಗಳನ್ನು ತಮ್ಮ ಮನೆಯ ಸದಸ್ಯನಂತೆ ನೋಡಿಕೊಂಡು ಮುದ್ದಾಗಿ ಸಾಕುತ್ತಾರೆ. ಅದರಲ್ಲೂ ಸಾಕು ಪ್ರಾಣಿಗಳಿಗೆ ಹುಟ್ಟುಹಬ್ಬ ಹಾಗೂ ಸೀಮಂತದಂತಹದ ಸಂಭ್ರಮಾಚರಣೆ ಮಾಡುವುದು ಸಾಮಾನ್ಯವಾಗಿದೆ.
ಬೆಕ್ಕು ಎಂದರೆ ಯಾರಿಗೆ ಇಷ್ಟ ಇರುವುದಿಲ್ಲ. ಅದರ ತುಂಟಾಟ, ಜನರೊಂದಿಗೆ ಅವುಗಳು ಬೇರೆಯುವ ರೀತಿ ಎಲ್ಲರಿಗೂ ಇಷ್ಟವಾಗುತ್ತದೆ. ಆದರೆ ಚಾಮರಾಜನಗರ ಮನೆಯೊಂದರ ಬೆಕ್ಕು, ಮನೆಯ ಪೆಟ್ ಅಥವಾ ಸಾಕು ಪ್ರಾಣಿ ಎನ್ನುವುದಕ್ಕಿಂತ ಹೆಜ್ಜೆ ಮುಂದಕ್ಕೆ ಹೋಗಿ ಮನೆಯ ಮಗಳಾಗಿ ಸ್ಥಾನ ಪಡೆದುಕೊಂಡಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣ ಶೆಟ್ಟಿ ಹಾಗೂ ಅವರ ಪತ್ನಿ ನಿರ್ಮಲಾ ಅವರಿಗೆ ಬೆಕ್ಕುಗಳೆಂದರೆ ಅತೀ ಪ್ರೀತಿ. ಬಲು ಅಕ್ಕರೆ. ಹೀಗಾಗಿ ಅವರ ಮನೆಯಲ್ಲಿ ಸಾಕಿರುವ ಬೆಕ್ಕಿಗೆ ಮನೆಯ ಸದಸ್ಯನ ಸ್ಥಾನವನ್ನು ಕೊಟ್ಟಿದ್ದಾರೆ. ಆ ಬೆಕ್ಕಿಗೆ ಸುಬ್ಬಿ ಎಂದು ಹೆಸರಿಟ್ಟಿದ್ದು, ಮುದ್ದಾಗಿ ನೋಡಿಕೊಂಡಿದ್ದಾರೆ.

ಇದೀಗ ಸುಬ್ಬಿ ಗರ್ಭಿಣಿಯಾಗಿದ್ದು, ಇನ್ನೇನು ಕೆಲವೇ ದಿನದಲ್ಲಿ ಮುದ್ದಾದ ಮರಿಗಳಿಗೆ ಜನ್ಮ ನೀಡಲಿದ್ದಾಳೆ. ಹೀಗಾಗಿ ತಮ್ಮ ಮಗಳಂತಿರುವ ಸುಬ್ಬಿಗೆ ವೆಂಕಟರಮಣ ಶೆಟ್ಟಿ ಹಾಗೂ ಅವರ ಪತ್ನಿ ನಿರ್ಮಲಾ ಸೀಮಂತ ಶಾಸ್ತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ವೆಂಕಟರಮಣ ಹಾಗೂ ನಿರ್ಮಲಾ ಅವರಿಗೆ ಇಬ್ಬರು ಪುತ್ರರಿದ್ದು ಮಗಳಿಲ್ಲ ಎಂಬ ಕೊರಗನ್ನು ಸುಬ್ಬಿ ನಿವಾರಿಸಿದ್ದಾಳಂತೆ. ತಮ್ಮ ಮನೆಯ ಸುಬ್ಬಿ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ನಿರ್ಮಲಾ ಅವರು ಅದಕ್ಕಿಷ್ಟವಾದ ಆಹಾರ, ತಿನಿಸು ಕೊಟ್ಟು ವಿಶೇಷ ಆರೈಕೆ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶಿಕ್ಷಕ ವೆಂಕಟರಮಣ ಶೆಟ್ಟಿ " ಹೆಣ್ಣು ಮಕ್ಕಳಿಲ್ಲದ ಕಾರಣ ಪ್ರೀತಿಯಿಂದ ಹೆಣ್ಣು ಬೆಕ್ಕನ್ನು ಸಾಕಿ ಅದಕ್ಕೆ ಪ್ರೀತಿಯಿಂದ ಸುಬ್ಬಿ ಎಂದು ಹೆಸರಿಡಲಾಗಿದೆ. ಪ್ರತಿನಿತ್ಯ ಅದಕ್ಕೆ ಇಷ್ಟವಾದ ತಿನಿಸನ್ನು ಕೊಟ್ಟು_ಸ್ನಾನ ಮಾಡಿಸಿ ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಕ್ಕಳಿಗೆ ಸೀಮಂತ ಮಾಡುವ ಹಾಗೆ ಫಲ ತಾಂಬೂಲ, ತಿನಿಸುಗಳನ್ನು ಇಟ್ಟು ಹೊಸ ಬಟ್ಟೆ ತೊಡಿಸಿ ಸಂಪ್ರದಾಯದಂತೆ ಶಾಸ್ತ್ರ ಮಾಡಿ ಆರತಿ ಬೆಳಗಿ ಶುಭ ಹಾರೈಸಿದ್ದೆವೆ ಎಂದು ತಿಳಿಸಿದರು.
ವೇಗದ ಬದುಕಿನಲ್ಲಿ ಪ್ರಾಣಿಗಳನ್ನು ಸಾಕಿ ಸಲುಹುವುದೇ ಬೇಡ ಎನ್ನುವವರ ಮಧ್ಯ ವೆಂಕಟರಮಣ ಶೆಟ್ಟಿ ಬೆಕ್ಕಿಗೆ ಮಗಳ ಸ್ಥಾನ ಕೊಟ್ಟು ಸೀಮಂತ ಮಾಡಿರುವುದು ವಿಶೇಷವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications