ಆಸ್ತಿ ವಿವರ : ಸಚಿವ ಮಹದೇವ ಪ್ರಸಾದ್ ಗೆ ಸಮನ್ಸ್
ಗುಂಡ್ಲುಪೇಟೆ, ಅಕ್ಟೋಬರ್ 07: ಆಸ್ತಿ ವಿವರಗಳ ಪ್ರಮಾಣಪತ್ರದಲ್ಲಿ ಸಮರ್ಪಕ ಮಾಹಿತಿ ನೀಡದ ಹಿನ್ನಲೆಯಲ್ಲಿ ಪಟ್ಟಣದ ನ್ಯಾಯಾಲಯವು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಡಿ.21ರೊಳಗೆ ಸಮನ್ಸ್ ಜಾರಿಗೊಗೊಳಿಸುವಂತೆ 2ನೇ ಬಾರಿಗೆ ಆದೇಶ ನೀಡಿದೆ.
ವಿಧಾನ ಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರು ಚುನಾವಣಾ ಆಯೋಗಕ್ಕೆ ನೀಡಿದ್ದ ಆಸ್ತಿ ವಿವರಗಳ ಪ್ರಮಾಣಪತ್ರದಲ್ಲಿ ಅರೇಪುರ ಗ್ರಾಮದಲ್ಲಿ ಸ.ನಂ.165ರಲ್ಲಿ 3.22 ಎಕರೆ ಜಮೀನನ್ನು ಹೊಂದಿರುವುದನ್ನು ಘೋಷಣೆ ಮಾಡಿರಲಿಲ್ಲ.

ಇದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಸಚಿವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎಲ್.ಸುರೇಶ್ 23 ನವೆಂಬರ್ 2013ರಂದು ಪಟ್ಟಣದ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಅಂದಿನ ನ್ಯಾಯಾಧೀಶ ಡಿ.ಕಮಲಾಕ್ಷ ಅವರು ದೂರುದಾರ ಎಲ್.ಸುರೇಶ್ ಅವರನ್ನು ವಿಚಾರಣೆ ನಡೆಸಿದ ನಂತರ ಆರೋಪ ಮೇಲ್ನೋಟಕ್ಕೆ ಸತ್ಯವೆಂದು ಕಂಡುಬಂದ ಹಿನ್ನೆಲೆಯಲ್ಲಿ 12 ಜೂನ್ 2014ರಂದು ಸಚಿವ ಎಚ್.ಎಸ್.ಮಹದೇವಪ್ರಸಾದ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿ ಸಮನ್ಸ್ ಜಾರಿಗೊಳಿಸಿತ್ತು.
ಆದರೆ, ಇದನ್ನು ಪೊಲೀಸರು ಜಾರಿಗೊಳಿಸಲು ವಿಫಲರಾಗಿದ್ದರು. ಇದರ ವಿರುದ್ದ ಸಚಿವರು ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ದೂರುದಾರು ತಡೆಯಾಜ್ಞೆ ತೆರವುಗೊಳಿಸಿತು. ಈ ಹಿನ್ನೆಲೆಯಲ್ಲಿ ಈ ವಿಚಾರಣೆಯ ದಿನಾಂಕವನ್ನು ಡಿ.21ಕ್ಕೆ ನಿಗದಿಗೊಳಿಸಿ ನ್ಯಾಯಾಧೀಶ ಜೆ.ಯೋಗೇಶ್ 2 ನೇ ಬಾರಿಗೆ ಸಮನ್ಸ್ ಜಾರಿಗೊಳಿಸಿ ಆದೇಶ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications